ಪ್ರೀತಿಸಿ ನಿಖಾ ಆದವರಿಗೆ ಕುಟುಂಬಸ್ಥರಿಂದ ಕೊಲೆ ಬೆದರಿಕೆ: ರಕ್ಷಣೆಗಾಗಿ ಎಸ್ಪಿ ಕಚೇರಿ  ಮೆಟ್ಟಿಲು ಹತ್ತಿದ ಲವ್‌ ಬರ್ಡ್ಸ್!

ಪ್ರೀತಿಸಿ ನಿಖಾ ಆದವರಿಗೆ ಕುಟುಂಬಸ್ಥರಿಂದ ಕೊಲೆ ಬೆದರಿಕೆ: ರಕ್ಷಣೆಗಾಗಿ ಎಸ್ಪಿ ಕಚೇರಿ ಮೆಟ್ಟಿಲು ಹತ್ತಿದ ಲವ್‌ ಬರ್ಡ್ಸ್!

Published : Nov 18, 2023, 12:45 PM IST

ಅವನು ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿ ಮೆಕ್ಯಾನಿಕ್‌ ಆಗಿದ್ದವನು, ಅವಳು ಬಿಫಾರ್ಮಸಿ ಮುಗಿಸಿ ಇನ್ನೇನು ಒಳ್ಳೆಯ ಜಾಬ್‌ಗೆ ಸೇರ್ಬೇಕಿತ್ತು. ಎದುರು ಬದರು ಮನೆಯಲ್ಲಿದ್ದ ಇವರಿಬ್ಬರ ನಡುವೆ ಪ್ರೇಮಾಂಕುರವಾಗಿತ್ತು. ಇವರ ಪ್ರೀತಿಗೆ ಮನೆಯವರು ಒಪ್ಪದೆ ಇದ್ದಾಗ ಓಡಿ ಹೋಗಿ ನಿಖಾ ಆಗಿದ್ದರು. ಆದ್ರೀಗ ಹುಡುಗಿ ಮನೆಯವರಿಂದ ಜೀವ ಬೆದರಿಕೆ ಇದ್ದು, ರಕ್ಷಣೆಗಾಗಿ ವಿಜಯಪುರ ಎಸ್ಪಿ ಮೊರೆ ಹೋಗಿದ್ದಾರೆ.
 

ಕೈ ಕೈ ಹಿಡಿದು ನಿಂತಿರೋ ಇವ್ರ ಹೆಸರು ಇಸಾಕ್‌ ಜನ್ನಳ್ಳಿ ಹಾಗೂ ಸುಮಯ್ಯ ಡೋಣಿ ಅಂತಾ. ವಿಜಯಪುರ(Vijayapura) ಜಿಲ್ಲೆಯ ತಾಳಿಕೋಟೆ ಪಟ್ಟಣದ ಕೆಂಬಾವಿ ಕಾಲೋನಿ ನಿವಾಸಿಗಳು. ಪ್ರೀತಿಸಿ(Love) ಮದುವೆಯಾಗಿರೋ ಇವರಿಗೆ  ಸುಮಯ್ಯ ಡೋಣಿ ಕುಟುಂಬದಿಂದ ಜೀವ ಭಯವಿದೆಯಂತೆ. ಹೀಗಾಗಿ ನಮಗೆ ರಕ್ಷಣೆ ಬೇಕು ಅಂತಾ ವಿಜಯಪುರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಕಚೇರಿ ಎದುರು ಧರಣಿ ಕೂತಿದ್ದಾರೆ. 5 ವರ್ಷದಿಂದ ಪ್ರೀತಿ ಮಾಡ್ತಿದ್ದ ಇವರು ಕೆಲ ದಿನಗಳ ಹಿಂದೆ ಮುಸ್ಲಿಂ ಧರ್ಮದ ನಿಯಮಗಳಂತೆ ವಿಜಯಪುರದ ದರ್ಗಾವೊಂದರಲ್ಲಿ ನಿಖಾ ಮಾಡಿಕೊಂಡಿದ್ದಾರೆ. ಆದ್ರೆ, ಇಬ್ಬರನ್ನು ಮುಗಿಸಿ ಬಿಡುವುದಾಗಿ ಸುಮಯ್ಯ ಡೋಣಿ ತಂದೆ ಸೇರಿದಂತೆ ಕುಟುಂಬದವರು ಧಮ್ಕಿ ಹಾಕ್ತಿದ್ದಾರೆ. ಹಾಗಾಗಿ ರಕ್ಷಣೆ ಕೋರಿ ಎಸ್ಪಿ ಕಚೇರಿಗೆ ಬಂದಿದ್ದಾರೆ. ಇಸಾಕ್‌ ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿ ಮೆಕಾನಿಕ್ ಕೆಲ್ಸಾ ಮಾಡ್ತಿದ್ದಾನೆ. ಸುಮಯ್ಯ ಬಿ ಫಾರ್ಮಸಿ ಮುಗಿಸಿದ್ದು ಜಾಬ್‌ ಸಿಗೋ ನಿರೀಕ್ಷೆಯಲ್ಲಿದ್ದಾಳೆ. ಆದ್ರೆ ತಾಳಿಕೋಟೆಯಲ್ಲಿರುವ ಸುಮಯ್ಯಾಳ ಡೋಣಿ ಕುಟುಂಬಸ್ಥರು ಪ್ರಭಾವಿಗಳಾಗಿದ್ದಾರೆ. ಸುಮಯ್ಯ ಕಿಡ್ನಾಪ್‌ ಆಗಿದೆ ಎಂದು ತಾಳಿಕೋಟೆ ಠಾಣೆಯಲ್ಲಿ ದೂರು ದಾಖಲಿಸಿ ಪೊಲೀಸರಿಂದ ಇಸಾಕ್‌ ಅಜ್ಜ-ಅಜ್ಜಿಗೆ ಟಾರ್ಚರ್ ಕೊಡಿಸ್ತಿದ್ದಾರಂತೆ. ಪ್ರೀತಿಸಿ ಮದುವೆಯಾಗಿರೋ ಇಬ್ಬರಿಗೂ ಹುಡುಗಿ ಕುಟುಂಬಸ್ಥರಿಂದ ಜೀವಭಯ ಕಾಡ್ತಿದೆ. ಡೋಣಿ ಕುಟುಂಬದವರು ಪ್ರಭಾವಿಗಳು ಆಗಿರೋದ್ರಿಂದ ಏನಾದ್ರೂ ಮಾಡ್ತಾರೆ ಈ ಪ್ರಯಣಯ ಪಕ್ಷಿಗಳಿಗೆ ಎನ್ನುವ ಭಯ ಹುಡುಗನ ಕುಟುಂಬಸ್ಥರಲ್ಲಿದೆ.  

ಇದನ್ನೂ ವೀಕ್ಷಿಸಿ:  ಸಿಎಂ ಪುತ್ರನ ವಿಡಿಯೋ ವೈರಲ್: ಯತೀಂದ್ರ ಮಾತಾಡಿದ್ದು ಪೊಲೀಸ್ ಇಲಾಖೆ ವರ್ಗಾವಣೆ ಬಗ್ಗೆನಾ..?

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more