ಪ್ರೀತಿಸಿ ನಿಖಾ ಆದವರಿಗೆ ಕುಟುಂಬಸ್ಥರಿಂದ ಕೊಲೆ ಬೆದರಿಕೆ: ರಕ್ಷಣೆಗಾಗಿ ಎಸ್ಪಿ ಕಚೇರಿ  ಮೆಟ್ಟಿಲು ಹತ್ತಿದ ಲವ್‌ ಬರ್ಡ್ಸ್!

ಪ್ರೀತಿಸಿ ನಿಖಾ ಆದವರಿಗೆ ಕುಟುಂಬಸ್ಥರಿಂದ ಕೊಲೆ ಬೆದರಿಕೆ: ರಕ್ಷಣೆಗಾಗಿ ಎಸ್ಪಿ ಕಚೇರಿ ಮೆಟ್ಟಿಲು ಹತ್ತಿದ ಲವ್‌ ಬರ್ಡ್ಸ್!

Published : Nov 18, 2023, 12:45 PM IST

ಅವನು ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿ ಮೆಕ್ಯಾನಿಕ್‌ ಆಗಿದ್ದವನು, ಅವಳು ಬಿಫಾರ್ಮಸಿ ಮುಗಿಸಿ ಇನ್ನೇನು ಒಳ್ಳೆಯ ಜಾಬ್‌ಗೆ ಸೇರ್ಬೇಕಿತ್ತು. ಎದುರು ಬದರು ಮನೆಯಲ್ಲಿದ್ದ ಇವರಿಬ್ಬರ ನಡುವೆ ಪ್ರೇಮಾಂಕುರವಾಗಿತ್ತು. ಇವರ ಪ್ರೀತಿಗೆ ಮನೆಯವರು ಒಪ್ಪದೆ ಇದ್ದಾಗ ಓಡಿ ಹೋಗಿ ನಿಖಾ ಆಗಿದ್ದರು. ಆದ್ರೀಗ ಹುಡುಗಿ ಮನೆಯವರಿಂದ ಜೀವ ಬೆದರಿಕೆ ಇದ್ದು, ರಕ್ಷಣೆಗಾಗಿ ವಿಜಯಪುರ ಎಸ್ಪಿ ಮೊರೆ ಹೋಗಿದ್ದಾರೆ.
 

ಕೈ ಕೈ ಹಿಡಿದು ನಿಂತಿರೋ ಇವ್ರ ಹೆಸರು ಇಸಾಕ್‌ ಜನ್ನಳ್ಳಿ ಹಾಗೂ ಸುಮಯ್ಯ ಡೋಣಿ ಅಂತಾ. ವಿಜಯಪುರ(Vijayapura) ಜಿಲ್ಲೆಯ ತಾಳಿಕೋಟೆ ಪಟ್ಟಣದ ಕೆಂಬಾವಿ ಕಾಲೋನಿ ನಿವಾಸಿಗಳು. ಪ್ರೀತಿಸಿ(Love) ಮದುವೆಯಾಗಿರೋ ಇವರಿಗೆ  ಸುಮಯ್ಯ ಡೋಣಿ ಕುಟುಂಬದಿಂದ ಜೀವ ಭಯವಿದೆಯಂತೆ. ಹೀಗಾಗಿ ನಮಗೆ ರಕ್ಷಣೆ ಬೇಕು ಅಂತಾ ವಿಜಯಪುರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಕಚೇರಿ ಎದುರು ಧರಣಿ ಕೂತಿದ್ದಾರೆ. 5 ವರ್ಷದಿಂದ ಪ್ರೀತಿ ಮಾಡ್ತಿದ್ದ ಇವರು ಕೆಲ ದಿನಗಳ ಹಿಂದೆ ಮುಸ್ಲಿಂ ಧರ್ಮದ ನಿಯಮಗಳಂತೆ ವಿಜಯಪುರದ ದರ್ಗಾವೊಂದರಲ್ಲಿ ನಿಖಾ ಮಾಡಿಕೊಂಡಿದ್ದಾರೆ. ಆದ್ರೆ, ಇಬ್ಬರನ್ನು ಮುಗಿಸಿ ಬಿಡುವುದಾಗಿ ಸುಮಯ್ಯ ಡೋಣಿ ತಂದೆ ಸೇರಿದಂತೆ ಕುಟುಂಬದವರು ಧಮ್ಕಿ ಹಾಕ್ತಿದ್ದಾರೆ. ಹಾಗಾಗಿ ರಕ್ಷಣೆ ಕೋರಿ ಎಸ್ಪಿ ಕಚೇರಿಗೆ ಬಂದಿದ್ದಾರೆ. ಇಸಾಕ್‌ ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿ ಮೆಕಾನಿಕ್ ಕೆಲ್ಸಾ ಮಾಡ್ತಿದ್ದಾನೆ. ಸುಮಯ್ಯ ಬಿ ಫಾರ್ಮಸಿ ಮುಗಿಸಿದ್ದು ಜಾಬ್‌ ಸಿಗೋ ನಿರೀಕ್ಷೆಯಲ್ಲಿದ್ದಾಳೆ. ಆದ್ರೆ ತಾಳಿಕೋಟೆಯಲ್ಲಿರುವ ಸುಮಯ್ಯಾಳ ಡೋಣಿ ಕುಟುಂಬಸ್ಥರು ಪ್ರಭಾವಿಗಳಾಗಿದ್ದಾರೆ. ಸುಮಯ್ಯ ಕಿಡ್ನಾಪ್‌ ಆಗಿದೆ ಎಂದು ತಾಳಿಕೋಟೆ ಠಾಣೆಯಲ್ಲಿ ದೂರು ದಾಖಲಿಸಿ ಪೊಲೀಸರಿಂದ ಇಸಾಕ್‌ ಅಜ್ಜ-ಅಜ್ಜಿಗೆ ಟಾರ್ಚರ್ ಕೊಡಿಸ್ತಿದ್ದಾರಂತೆ. ಪ್ರೀತಿಸಿ ಮದುವೆಯಾಗಿರೋ ಇಬ್ಬರಿಗೂ ಹುಡುಗಿ ಕುಟುಂಬಸ್ಥರಿಂದ ಜೀವಭಯ ಕಾಡ್ತಿದೆ. ಡೋಣಿ ಕುಟುಂಬದವರು ಪ್ರಭಾವಿಗಳು ಆಗಿರೋದ್ರಿಂದ ಏನಾದ್ರೂ ಮಾಡ್ತಾರೆ ಈ ಪ್ರಯಣಯ ಪಕ್ಷಿಗಳಿಗೆ ಎನ್ನುವ ಭಯ ಹುಡುಗನ ಕುಟುಂಬಸ್ಥರಲ್ಲಿದೆ.  

ಇದನ್ನೂ ವೀಕ್ಷಿಸಿ:  ಸಿಎಂ ಪುತ್ರನ ವಿಡಿಯೋ ವೈರಲ್: ಯತೀಂದ್ರ ಮಾತಾಡಿದ್ದು ಪೊಲೀಸ್ ಇಲಾಖೆ ವರ್ಗಾವಣೆ ಬಗ್ಗೆನಾ..?

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more