ವಿಜಯಪುರ ಆಗಲಿದ್ಯಾ ಬಸವೇಶ್ವರ ಜಿಲ್ಲೆ? ಅಭಿಪ್ರಾಯ ಸಂಗ್ರಹಕ್ಕೆ ಮುಂದಾದ ಜಿಲ್ಲಾಡಳಿತ..!

ವಿಜಯಪುರ ಆಗಲಿದ್ಯಾ ಬಸವೇಶ್ವರ ಜಿಲ್ಲೆ? ಅಭಿಪ್ರಾಯ ಸಂಗ್ರಹಕ್ಕೆ ಮುಂದಾದ ಜಿಲ್ಲಾಡಳಿತ..!

Published : Oct 26, 2023, 10:44 AM IST

ದೇಶದ ಹಲವು ಕಡೆಗಳಲ್ಲಿ ಜಿಲ್ಲೆಗಳ ಹೆಸರು ಬದಲಾವಣೆ ವಿವಾದದ ಚಾಲ್ತಿಯಲ್ಲಿವೆ. ಇದೀಗ ವಿಜಯಪುರ ಜಿಲ್ಲೆಯ ಹೆಸರು ಬದಲಿಸೋ ವಿಚಾರ ಸದ್ದು ಮಾಡ್ತಿದೆ. ಜನಾಭಿಪ್ರಾಯ ಸಂಗ್ರಹಕ್ಕೆ ಜಿಲ್ಲಾಡಳಿತ ಮುಂದಾಗಿದೆ.

ಉತ್ತರ ಭಾರತಕ್ಕಷ್ಟೇ ಸೀಮಿತವಾಗಿದ್ದ ಹೆಸರು ಬದಲಾವಣೆ ಪದ್ಧತಿ ಕರ್ನಾಟಕಕ್ಕೂ ಕಾಲಿಟ್ಟಿದೆ. ವಿಜಯಪುರ(Vijayapura) ಜಿಲ್ಲೆಯ ನೇಮ್ಚೇಂಜ್ ಬಗ್ಗೆ ಚರ್ಚೆಗಳು ಶುರುವಾಗಿವೆ. ಸ್ವತಃ ಜಿಲ್ಲಾಡಳಿತವೇ ಅಭಿಪ್ರಾಯ ಸಂಗ್ರಹಣೆಗೆ ಮುಂದಾಗಿದೆ. ವಿಜಯಪುರ ಜಿಲ್ಲೆಯ ಹೆಸರನ್ನ ಬಸವ ಜಿಲ್ಲೆ(Basava District) ಅಥವಾ ಬಸವೇಶ್ವರ ಜಿಲ್ಲೆ(Basaveshwar District) ಎಂದು ಮರುನಾಮಕರಣಕ್ಕೆ ಜಿಲ್ಲಾಡಳಿತ ಅಭಿಪ್ರಾಯ ಸಂಗ್ರಹಿಸ್ತಿದೆ. ವಿಜಯಪುರ ಜಿಲ್ಲೆಯ ನಾಗರಿಕರು, ಸಂಘ-ಸಂಸ್ಥೆಗಳಿಂದ ಅಭಿಪ್ರಾಯ ಕೇಳಿದೆ. ಅಲ್ಲದೆ ಆಕ್ಷೇಪಗಳಿದ್ದರು ಸಲ್ಲಿಸಲು ಅವಕಾಶ ಕೊಟ್ಟಿದೆ. ಇದಕ್ಕಾಗಿ ಜಿಲ್ಲಾಡಳಿತ 15 ದಿನಗಳ ಕಾಲಾವಕಾಶ ಕಲ್ಪಿಸಿಕೊಟ್ಟಿದೆ. ಇನ್ನು ಸರ್ಕಾರ ಏಕಾಏಕಿ ಹೆಸರು ಬದಲಾವಣೆ ಹಾಗೂ ಅಭಿಪ್ರಾಯ ಸಂಗ್ರಹಣೆಗೆ ಮುಂದಾಗಿಲ್ಲ. ಇದು ಬಿಜೆಪಿ(BJP) ಸರ್ಕಾರದ ಅವಧಿಯಲ್ಲೇ 2022ರಿಂದಲೇ ನಿರಂತರವಾಗಿ ವಿಜಯಪುರ ಜಿಲ್ಲೆಯ ಹೆಸರು ಬದಲಾವಣೆಗೆ ಪ್ರಸ್ತಾವಣೆಗಳು ಬರ್ತಿವೆಯಂತೆ. ಜಿಲ್ಲೆಯ ಸಂಘ-ಸಂಸ್ಥೆಗಳು, ಸಂಘಟನೆಗಳು, ಧಾರ್ಮಿಕ ಮುಖಂಡರು ಸೇರಿದಂತೆ ಹಲವರು ಜಿಲ್ಲೆಯ ಹೆಸರನ್ನ ಬಸವ ಜಿಲ್ಲೆ, ಬಸವೇಶ್ವರ ಜಿಲ್ಲೆಯಾನ್ನಾಗಿ ಮರುನಾಮಕರಣಕ್ಕೆ ಮನವಿ ಸಲ್ಲಿಸಲಾಗಿದೆ.. ಆದ್ರಿಂದಲೇ ಸರ್ಕಾರ ಮಟ್ಟದಲ್ಲಿ ಚರ್ಚೆಯಾಗಿ ಈಗ ಜಿಲ್ಲಾಡಳಿತ ಅಭಿಪ್ರಾಯ ಸಂಗ್ರಹಣೆ ಹಾಗೂ ಆಕ್ಷೇಪ ಸಲ್ಲಿಕೆಗೆ ಕಾಲಾವಕಾಶ ನೀಡಿದೆ. ಈ ವಿಚಾರವನ್ನ ಜಿಲ್ಲೆಯ ನಾಗರಿಕರಲ್ಲೂ ಸಂತಸ ಮೂಡಿಸಿದೆ. 

ಇದನ್ನೂ ವೀಕ್ಷಿಸಿ:  ರಾಮಮಂದಿರ ಲೋಕಾರ್ಪಣೆಗೆ ಕೂಡಿ ಬಂದ ಶುಭ ಮುಹೂರ್ತ: ಉದ್ಘಾಟನೆ ಯಾವಾಗ ಗೊತ್ತಾ ?

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more