Mangaluru; ಹಿಂದುತ್ವದ ಮತಗಳು  ಬೇಕೋ, ಬೇಡ್ವೋ? ಬೊಮ್ಮಾಯಿಗೆ VHP ಪ್ರಶ್ನೆ

Mangaluru; ಹಿಂದುತ್ವದ ಮತಗಳು  ಬೇಕೋ, ಬೇಡ್ವೋ? ಬೊಮ್ಮಾಯಿಗೆ VHP ಪ್ರಶ್ನೆ

Published : Nov 15, 2021, 05:16 PM IST

* ನಾಗದೇವರ ಕಲ್ಲಿಗೆ ಹಾನಿಗೈದ ದುಷ್ಕರ್ಮಿಗಳ ಬಂಧನವಾಗದ ಹಿನ್ನೆಲೆ

* ಮಂಗಳೂರಿನ ಕೋಡಿಕಲ್  ಬಂದ್ ಮಾಡಿದ ವಿಶ್ವಹಿಂದು ಪರಿಷತ್ ಮತ್ತು ಬಜರಂಗದಳ

* ಪೊಲೀಸ್ ಇಲಾಖೆಗೆ ನೀಡಿದ ಗಡುವು ಮುಗಿದ ಹಿನ್ನೆಲೆ ಕೋಡಿಕಲ್ ಬಂದ್

* ಕೋಡಿಕಲ್ ಬಳಿಯ ನಾಗದೇವದ ಕಟ್ಟೆಯ ನಾಗ ದೇವರ ಕಲ್ಲ‌ನ್ನು ಕಿತ್ತು ಎಸೆದಿದ್ದ ಕಿಡಿಗೇಡಿಗಳು

ಮಂಗಳೂರು(ನ. 15) ನಾಗದೇವರ ಕಲ್ಲಿಗೆ ಹಾನಿಗೈದ ದುಷ್ಕರ್ಮಿಗಳನ್ನು  ಇನ್ನೂ ಬಂಧಿಸದೆ ಇರುವುದಕ್ಕೆ  ಮಂಗಳೂರಿನ (Mangaluru) ಕೋಡಿಕಲ್ ಬಂದ್ ಮಾಡಿ ವಿಶ್ವಹಿಂದು ಪರಿಷತ್(VHP)  ಮತ್ತು ಬಜರಂಗದಳ (Bajrang Dal) ಆಕ್ರೋಶ ಹೊರಹಾಕಿದೆ.

ಮಂಗಳೂರಿನ ಕೋಡಿಕಲ್ ಬಳಿಯ ನಾಗದೇವದ ಕಟ್ಟೆಯಲ್ಲಿ ಶನಿವಾರ ಕಿಡಿಗೇಡಿಗಳು  ನಾಗ ದೇವರ ಕಲ್ಲ‌ನ್ನು ಕಿತ್ತು ಎಸೆದಿದ್ದರು.  ಇದರ ಪರಿಣಾಮ ಕೋಡಿಕಲ್ ನಲ್ಲಿ ಬಸ್ ಸಂಚಾರ, ಅಂಗಡಿ ಮುಗ್ಗಟ್ಟು ಸಂಪೂರ್ಣ ಬಂದ್ (Bandh) ಮಾಡಿ ಆಕ್ರೋಶ ಹೊರಹಾಕಲಾಯಿತು.

2023ರ ಅಂತ್ಯಕ್ಕೆ ರಾಮ​ಮಂದಿ​ರ ಗರ್ಭಗುಡಿ ಸಿದ್ಧ, ಅಲ್ಲೇ ಪೂಜೆ: ವಿಎ​ಚ್‌​ಪಿ!

ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್, ರಾಜ್ಯದ ಮುಖ್ಯಮಂತ್ರಿಗಳು ಒಮ್ಮೆ ಕರಾವಳಿ ಭಾಗಕ್ಕೆ ಗಮನ ಕೊಡಿ, ಕರಾವಳಿ ಎನ್ನುವುದು ಹಿಂದುತ್ವದ ಭದ್ರಕೋಟೆ. ಇಲ್ಲಿನವರು ದುಡ್ಡು ಅಥವಾ ಇನ್ಯಾವುದಕ್ಕೋ ಕೈ ಚಾಚಿ ಓಟು ಹಾಕಲ್ಲ. ಕರಾವಳಿ ಜನತೆ ಹಿಂದುತ್ವಕ್ಕೊಸ್ಕರ ಇವತ್ತಿನ ತನಕ ಓಟ್ ಹಾಕಿದ್ದಾರೆ ಅನ್ನೋದನ್ನ ನೆನಪಿಟ್ಟುಕೊಳ್ಳಿ. ಹಿಂದುತ್ವದ ಭದ್ರಕೋಟೆ ಮತ್ತು ಹಿಂದುತ್ವದ ಓಟ್ ನಿಮಗೆ ಉಳಿಸಬೇಕಾ? ಎಂದು ಸಿಎಂಗೆ ಸವಾಲು ಹಾಕಿದ್ದಾರೆ.

ಒಮ್ಮೆ ಮಂಗಳೂರಿಗೆ ಬಂದು ಇಲ್ಲಿನ ನಾಗಸ್ಥಾನ, ದೈವಸ್ಥಾನ ಭೇಟಿ ಕೊಡಿ, ನಮ್ಮ ನೋವನ್ನು ಅರ್ಥ ಮಾಡಿಕೊಳ್ಳಿ. ಮಂಗಳೂರು ಕಮಿಷನರ್ ಅವರಲ್ಲಿ ನನ್ನ ಒಂದು ಆಗ್ರಹವಿದೆ. ಹಿಂದೂ ಶ್ರದ್ದಾ ಕೇಂದ್ರಗಳ ಮೇಲಿ ದಾಳಿ ನಡೆಸೋರನ್ನ ಎನ್ ಕೌಂಟರ್ ‌ಮಾಡಿ ಮುಗಿಸಿ. ಕಳೆದ ಹತ್ತಾರು ವರ್ಷಗಳಿಂದ ರಾಜ್ಯದಲ್ಲಿ ಯಾವುದೇ ಸರ್ಕಾರ ಬಂದರೂ ಹಿಂದುತ್ವದ ಮೇಲೆ ದಾಳಿ ‌ಮಾಡ್ತಿದೆ. ಹಿಂದುತ್ವದ ಮತಗಳು ನಿಮಗೆ ಬೇಕು ಎಂದರೆ ಸ್ಪಂದಿಸುವ ಕೆಲಸ ಮಾಡಿ ಎಂದು  ಆಕ್ರೋಶದಿಂದಲೇ ಹೇಳಿದ್ದಾರೆ.

 

 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more