Mangaluru; ಹಿಂದುತ್ವದ ಮತಗಳು  ಬೇಕೋ, ಬೇಡ್ವೋ? ಬೊಮ್ಮಾಯಿಗೆ VHP ಪ್ರಶ್ನೆ

Mangaluru; ಹಿಂದುತ್ವದ ಮತಗಳು  ಬೇಕೋ, ಬೇಡ್ವೋ? ಬೊಮ್ಮಾಯಿಗೆ VHP ಪ್ರಶ್ನೆ

Published : Nov 15, 2021, 05:16 PM IST

* ನಾಗದೇವರ ಕಲ್ಲಿಗೆ ಹಾನಿಗೈದ ದುಷ್ಕರ್ಮಿಗಳ ಬಂಧನವಾಗದ ಹಿನ್ನೆಲೆ

* ಮಂಗಳೂರಿನ ಕೋಡಿಕಲ್  ಬಂದ್ ಮಾಡಿದ ವಿಶ್ವಹಿಂದು ಪರಿಷತ್ ಮತ್ತು ಬಜರಂಗದಳ

* ಪೊಲೀಸ್ ಇಲಾಖೆಗೆ ನೀಡಿದ ಗಡುವು ಮುಗಿದ ಹಿನ್ನೆಲೆ ಕೋಡಿಕಲ್ ಬಂದ್

* ಕೋಡಿಕಲ್ ಬಳಿಯ ನಾಗದೇವದ ಕಟ್ಟೆಯ ನಾಗ ದೇವರ ಕಲ್ಲ‌ನ್ನು ಕಿತ್ತು ಎಸೆದಿದ್ದ ಕಿಡಿಗೇಡಿಗಳು

ಮಂಗಳೂರು(ನ. 15) ನಾಗದೇವರ ಕಲ್ಲಿಗೆ ಹಾನಿಗೈದ ದುಷ್ಕರ್ಮಿಗಳನ್ನು  ಇನ್ನೂ ಬಂಧಿಸದೆ ಇರುವುದಕ್ಕೆ  ಮಂಗಳೂರಿನ (Mangaluru) ಕೋಡಿಕಲ್ ಬಂದ್ ಮಾಡಿ ವಿಶ್ವಹಿಂದು ಪರಿಷತ್(VHP)  ಮತ್ತು ಬಜರಂಗದಳ (Bajrang Dal) ಆಕ್ರೋಶ ಹೊರಹಾಕಿದೆ.

ಮಂಗಳೂರಿನ ಕೋಡಿಕಲ್ ಬಳಿಯ ನಾಗದೇವದ ಕಟ್ಟೆಯಲ್ಲಿ ಶನಿವಾರ ಕಿಡಿಗೇಡಿಗಳು  ನಾಗ ದೇವರ ಕಲ್ಲ‌ನ್ನು ಕಿತ್ತು ಎಸೆದಿದ್ದರು.  ಇದರ ಪರಿಣಾಮ ಕೋಡಿಕಲ್ ನಲ್ಲಿ ಬಸ್ ಸಂಚಾರ, ಅಂಗಡಿ ಮುಗ್ಗಟ್ಟು ಸಂಪೂರ್ಣ ಬಂದ್ (Bandh) ಮಾಡಿ ಆಕ್ರೋಶ ಹೊರಹಾಕಲಾಯಿತು.

2023ರ ಅಂತ್ಯಕ್ಕೆ ರಾಮ​ಮಂದಿ​ರ ಗರ್ಭಗುಡಿ ಸಿದ್ಧ, ಅಲ್ಲೇ ಪೂಜೆ: ವಿಎ​ಚ್‌​ಪಿ!

ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್, ರಾಜ್ಯದ ಮುಖ್ಯಮಂತ್ರಿಗಳು ಒಮ್ಮೆ ಕರಾವಳಿ ಭಾಗಕ್ಕೆ ಗಮನ ಕೊಡಿ, ಕರಾವಳಿ ಎನ್ನುವುದು ಹಿಂದುತ್ವದ ಭದ್ರಕೋಟೆ. ಇಲ್ಲಿನವರು ದುಡ್ಡು ಅಥವಾ ಇನ್ಯಾವುದಕ್ಕೋ ಕೈ ಚಾಚಿ ಓಟು ಹಾಕಲ್ಲ. ಕರಾವಳಿ ಜನತೆ ಹಿಂದುತ್ವಕ್ಕೊಸ್ಕರ ಇವತ್ತಿನ ತನಕ ಓಟ್ ಹಾಕಿದ್ದಾರೆ ಅನ್ನೋದನ್ನ ನೆನಪಿಟ್ಟುಕೊಳ್ಳಿ. ಹಿಂದುತ್ವದ ಭದ್ರಕೋಟೆ ಮತ್ತು ಹಿಂದುತ್ವದ ಓಟ್ ನಿಮಗೆ ಉಳಿಸಬೇಕಾ? ಎಂದು ಸಿಎಂಗೆ ಸವಾಲು ಹಾಕಿದ್ದಾರೆ.

ಒಮ್ಮೆ ಮಂಗಳೂರಿಗೆ ಬಂದು ಇಲ್ಲಿನ ನಾಗಸ್ಥಾನ, ದೈವಸ್ಥಾನ ಭೇಟಿ ಕೊಡಿ, ನಮ್ಮ ನೋವನ್ನು ಅರ್ಥ ಮಾಡಿಕೊಳ್ಳಿ. ಮಂಗಳೂರು ಕಮಿಷನರ್ ಅವರಲ್ಲಿ ನನ್ನ ಒಂದು ಆಗ್ರಹವಿದೆ. ಹಿಂದೂ ಶ್ರದ್ದಾ ಕೇಂದ್ರಗಳ ಮೇಲಿ ದಾಳಿ ನಡೆಸೋರನ್ನ ಎನ್ ಕೌಂಟರ್ ‌ಮಾಡಿ ಮುಗಿಸಿ. ಕಳೆದ ಹತ್ತಾರು ವರ್ಷಗಳಿಂದ ರಾಜ್ಯದಲ್ಲಿ ಯಾವುದೇ ಸರ್ಕಾರ ಬಂದರೂ ಹಿಂದುತ್ವದ ಮೇಲೆ ದಾಳಿ ‌ಮಾಡ್ತಿದೆ. ಹಿಂದುತ್ವದ ಮತಗಳು ನಿಮಗೆ ಬೇಕು ಎಂದರೆ ಸ್ಪಂದಿಸುವ ಕೆಲಸ ಮಾಡಿ ಎಂದು  ಆಕ್ರೋಶದಿಂದಲೇ ಹೇಳಿದ್ದಾರೆ.

 

 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more