Mangaluru; ಹಿಂದುತ್ವದ ಮತಗಳು  ಬೇಕೋ, ಬೇಡ್ವೋ? ಬೊಮ್ಮಾಯಿಗೆ VHP ಪ್ರಶ್ನೆ

Mangaluru; ಹಿಂದುತ್ವದ ಮತಗಳು  ಬೇಕೋ, ಬೇಡ್ವೋ? ಬೊಮ್ಮಾಯಿಗೆ VHP ಪ್ರಶ್ನೆ

Published : Nov 15, 2021, 05:16 PM IST

* ನಾಗದೇವರ ಕಲ್ಲಿಗೆ ಹಾನಿಗೈದ ದುಷ್ಕರ್ಮಿಗಳ ಬಂಧನವಾಗದ ಹಿನ್ನೆಲೆ

* ಮಂಗಳೂರಿನ ಕೋಡಿಕಲ್  ಬಂದ್ ಮಾಡಿದ ವಿಶ್ವಹಿಂದು ಪರಿಷತ್ ಮತ್ತು ಬಜರಂಗದಳ

* ಪೊಲೀಸ್ ಇಲಾಖೆಗೆ ನೀಡಿದ ಗಡುವು ಮುಗಿದ ಹಿನ್ನೆಲೆ ಕೋಡಿಕಲ್ ಬಂದ್

* ಕೋಡಿಕಲ್ ಬಳಿಯ ನಾಗದೇವದ ಕಟ್ಟೆಯ ನಾಗ ದೇವರ ಕಲ್ಲ‌ನ್ನು ಕಿತ್ತು ಎಸೆದಿದ್ದ ಕಿಡಿಗೇಡಿಗಳು

ಮಂಗಳೂರು(ನ. 15) ನಾಗದೇವರ ಕಲ್ಲಿಗೆ ಹಾನಿಗೈದ ದುಷ್ಕರ್ಮಿಗಳನ್ನು  ಇನ್ನೂ ಬಂಧಿಸದೆ ಇರುವುದಕ್ಕೆ  ಮಂಗಳೂರಿನ (Mangaluru) ಕೋಡಿಕಲ್ ಬಂದ್ ಮಾಡಿ ವಿಶ್ವಹಿಂದು ಪರಿಷತ್(VHP)  ಮತ್ತು ಬಜರಂಗದಳ (Bajrang Dal) ಆಕ್ರೋಶ ಹೊರಹಾಕಿದೆ.

ಮಂಗಳೂರಿನ ಕೋಡಿಕಲ್ ಬಳಿಯ ನಾಗದೇವದ ಕಟ್ಟೆಯಲ್ಲಿ ಶನಿವಾರ ಕಿಡಿಗೇಡಿಗಳು  ನಾಗ ದೇವರ ಕಲ್ಲ‌ನ್ನು ಕಿತ್ತು ಎಸೆದಿದ್ದರು.  ಇದರ ಪರಿಣಾಮ ಕೋಡಿಕಲ್ ನಲ್ಲಿ ಬಸ್ ಸಂಚಾರ, ಅಂಗಡಿ ಮುಗ್ಗಟ್ಟು ಸಂಪೂರ್ಣ ಬಂದ್ (Bandh) ಮಾಡಿ ಆಕ್ರೋಶ ಹೊರಹಾಕಲಾಯಿತು.

2023ರ ಅಂತ್ಯಕ್ಕೆ ರಾಮ​ಮಂದಿ​ರ ಗರ್ಭಗುಡಿ ಸಿದ್ಧ, ಅಲ್ಲೇ ಪೂಜೆ: ವಿಎ​ಚ್‌​ಪಿ!

ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್, ರಾಜ್ಯದ ಮುಖ್ಯಮಂತ್ರಿಗಳು ಒಮ್ಮೆ ಕರಾವಳಿ ಭಾಗಕ್ಕೆ ಗಮನ ಕೊಡಿ, ಕರಾವಳಿ ಎನ್ನುವುದು ಹಿಂದುತ್ವದ ಭದ್ರಕೋಟೆ. ಇಲ್ಲಿನವರು ದುಡ್ಡು ಅಥವಾ ಇನ್ಯಾವುದಕ್ಕೋ ಕೈ ಚಾಚಿ ಓಟು ಹಾಕಲ್ಲ. ಕರಾವಳಿ ಜನತೆ ಹಿಂದುತ್ವಕ್ಕೊಸ್ಕರ ಇವತ್ತಿನ ತನಕ ಓಟ್ ಹಾಕಿದ್ದಾರೆ ಅನ್ನೋದನ್ನ ನೆನಪಿಟ್ಟುಕೊಳ್ಳಿ. ಹಿಂದುತ್ವದ ಭದ್ರಕೋಟೆ ಮತ್ತು ಹಿಂದುತ್ವದ ಓಟ್ ನಿಮಗೆ ಉಳಿಸಬೇಕಾ? ಎಂದು ಸಿಎಂಗೆ ಸವಾಲು ಹಾಕಿದ್ದಾರೆ.

ಒಮ್ಮೆ ಮಂಗಳೂರಿಗೆ ಬಂದು ಇಲ್ಲಿನ ನಾಗಸ್ಥಾನ, ದೈವಸ್ಥಾನ ಭೇಟಿ ಕೊಡಿ, ನಮ್ಮ ನೋವನ್ನು ಅರ್ಥ ಮಾಡಿಕೊಳ್ಳಿ. ಮಂಗಳೂರು ಕಮಿಷನರ್ ಅವರಲ್ಲಿ ನನ್ನ ಒಂದು ಆಗ್ರಹವಿದೆ. ಹಿಂದೂ ಶ್ರದ್ದಾ ಕೇಂದ್ರಗಳ ಮೇಲಿ ದಾಳಿ ನಡೆಸೋರನ್ನ ಎನ್ ಕೌಂಟರ್ ‌ಮಾಡಿ ಮುಗಿಸಿ. ಕಳೆದ ಹತ್ತಾರು ವರ್ಷಗಳಿಂದ ರಾಜ್ಯದಲ್ಲಿ ಯಾವುದೇ ಸರ್ಕಾರ ಬಂದರೂ ಹಿಂದುತ್ವದ ಮೇಲೆ ದಾಳಿ ‌ಮಾಡ್ತಿದೆ. ಹಿಂದುತ್ವದ ಮತಗಳು ನಿಮಗೆ ಬೇಕು ಎಂದರೆ ಸ್ಪಂದಿಸುವ ಕೆಲಸ ಮಾಡಿ ಎಂದು  ಆಕ್ರೋಶದಿಂದಲೇ ಹೇಳಿದ್ದಾರೆ.

 

 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more