ಬೆಳಕಿನ ಹಬ್ಬ ದೀಪಾವಳಿಗೆ ರಾಜ್ಯಾದ್ಯಂತ ಸಿದ್ಧತೆ: ಬೆಂಗಳೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸಿದ್ಧತೆ

ಬೆಳಕಿನ ಹಬ್ಬ ದೀಪಾವಳಿಗೆ ರಾಜ್ಯಾದ್ಯಂತ ಸಿದ್ಧತೆ: ಬೆಂಗಳೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸಿದ್ಧತೆ

Published : Nov 10, 2023, 12:00 PM IST

ದೀಪಾವಳಿ ಹಬ್ಬಕ್ಕೆ ದಿನಗಣನೇ ಶುರುವಾಗಿದೆ. ದೇಶದಾದ್ಯಂತ ಬೆಳಕಿನ ಹಬ್ಬದ ಸ್ವಾಗತಕ್ಕೆ ಸಕಲ ಸಿದ್ಧತೆ ನಡೆದಿದೆ. ಆದ್ರೆ ದೀಪಾವಳಿ ಸಂಭ್ರಮದಲ್ಲಿ ಪಟಾಕಿ ದುರಂತಗಳು ಸಂಭವಿಸುತ್ತೆ ಎಂದು ಮುನ್ನೆಚ್ಚರಿಕೆಯಾಗಿ ಕ್ರಮ ಕೈಗೊಳ್ಳಲಾಗಿದೆ.
 

ಬೆಳಕಿನ ಹಬ್ಬ ದೀಪಾವಳಿಗೆ ಇನ್ನು ಕೆಲವು ದಿನಗಳು ಬಾಕಿ ಇದೆ. ರಾಜ್ಯಾದ್ಯಂತ ದೀಪಾವಳಿಗೆ(Deepavali) ಸಿದ್ಧತೆಗಳು ನಡೆಯುತ್ತಿವೆ.. ದೀಪಾವಳಿ ಅಂದ್ಮೇಲೆ ಪಟಾಕಿ ಸಂಭ್ರಮ ಇದ್ದಿದ್ದೆ.ಇತ್ತೀಚೆಗೆ ನಡೆದ ಪಟಾಕಿ ದುರಂತಗಳಿಂದ ಎಚ್ಚೆತ್ತ ಸರ್ಕಾರ ಡೇಂಜರ್ ಪಟಾಕಿ ಬ್ಯಾನ್(cracker Ban) ಮಾಡಿದೆ.ಆದ್ರೆ, ಹಸಿರು ಪಟಾಕಿಗೆ ನಿರ್ಬಂಧವಿಲ್ಲ.ಮುನ್ನೆಚ್ಚರಿಕೆಗಳ ನಡುವೆಯೂ ಪಟಾಕಿ ದುರಂತಗಳು ಸಂಭವಿಸಲು ಬಹುದು.. ಹೀಗಾಗಿ ಬೆಂಗಳೂರಿನ ಆಸ್ಪತ್ರೆಗಳು(Hospital) ಸೂಕ್ತ ಚಿಕಿತ್ಸೆ ನೀಡಲು ಸಿದ್ಧತೆ ಮಾಡಿಕೊಳ್ಳುತ್ತಿವೆ. ದೀಪಾವಳಿ ಹಬ್ಬದಲ್ಲಿ ಪಟಾಕಿ ಸಿಡಿತದಿಂದ ಗಾಯಗೊಳ್ಳುವವರ ಪೈಕಿ ಶೇ.40 ರಷ್ಟು 14 ವರ್ಷದ ಮಕ್ಕಳೇ ಇದ್ದಾರೆ. ಎಷ್ಟೋ ಜನ ಕಣ್ಣನ್ನೇ ಕಳೆದುಕೊಂಡ ಉದಾಹರಣೆಗಳಿವೆ. ಹೀಗಾಗಿ ಈ ಬಾರಿ ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸಿದ್ಧತೆಗಳನ್ನ ಮಾಡಿಕೊಳ್ಳಲಾಗಿದೆ.ಪಟಾಕಿ ಸಂಭ್ರಮದ ವೇಳೆ ಗಾಯಗೊಂಡವರಿಗೆ ಚಿಕಿತ್ಸೆ ನೀಡಲು ವಾರ್ಡ್ಗಳನ್ನು ಮೀಸಲಿಡಲಾಗಿದೆ.  ಮಹಿಳೆಯರು, ಪುರುಷರು ಹಾಗೂ ಮಕ್ಕಳಿಗೆ ಪ್ರತ್ಯೇಕ ವಾರ್ಡ್ ಮೀಸಲಿಡಲಾಗಿದೆ. ಮಹಿಳೆಯರ ವಾರ್ಡ್ ನಲ್ಲಿ 18 ಬೆಡ್, ಪುರುಷರ ವಾರ್ಡ್ ನಲ್ಲಿ 10 ಬೆಡ್ ಹಾಗೂ ಮಕ್ಕಳಿಗೆ 8 ಬೆಡ್ ವ್ಯವಸ್ಥೆ ಮಾಡಲಾಗಿದೆ...ಇನ್ನು ಹಬ್ಬದ ವೇಳೆ ಸುಮಾರು 1 ವಾರಗಳ ಕಾಲ ಈ ವಾರ್ಡ್ಗಳಲ್ಲಿ ದಿನದ 24 ಗಂಟೆ ಚಿಕಿತ್ಸೆ ನೀಡಲು ತಯಾರಿ ನಡೆದಿದೆ. ಇನ್ನೂ ಅಗತ್ಯಬಿದ್ದರೆ ಹೆಚ್ಚುವರಿಯಾಗಿ 15 ಬೆಡ್ಗಳ ಒಂದು ವಾರ್ಡ್ ಸಿದ್ದಪಡಿಸಿಕೊಳ್ಳಲಾಗುತ್ತೆ ಅಂತ ಮಿಂಟೋ ಆಸ್ಪತ್ರೆ ನಿರ್ದೇಶಕ ಡಾ. ನಾಗರಾಜ್ ಮಾಹಿತಿ ನೀಡಿದ್ದಾರೆ.

ಇದನ್ನೂ ವೀಕ್ಷಿಸಿ:  ಅಕಾಲಿಕ ಮಳೆಗೆ ಅನ್ನದಾತ ಕಂಗಾಲು..ಕಟಾವಿಗೆ ಬಂದ ಬೆಳೆ ನೀರಲ್ಲಿ..ರೈತರ ಕಣ್ಣೀರು

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more