ಬೆಳಕಿನ ಹಬ್ಬ ದೀಪಾವಳಿಗೆ ರಾಜ್ಯಾದ್ಯಂತ ಸಿದ್ಧತೆ: ಬೆಂಗಳೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸಿದ್ಧತೆ

ಬೆಳಕಿನ ಹಬ್ಬ ದೀಪಾವಳಿಗೆ ರಾಜ್ಯಾದ್ಯಂತ ಸಿದ್ಧತೆ: ಬೆಂಗಳೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸಿದ್ಧತೆ

Published : Nov 10, 2023, 12:00 PM IST

ದೀಪಾವಳಿ ಹಬ್ಬಕ್ಕೆ ದಿನಗಣನೇ ಶುರುವಾಗಿದೆ. ದೇಶದಾದ್ಯಂತ ಬೆಳಕಿನ ಹಬ್ಬದ ಸ್ವಾಗತಕ್ಕೆ ಸಕಲ ಸಿದ್ಧತೆ ನಡೆದಿದೆ. ಆದ್ರೆ ದೀಪಾವಳಿ ಸಂಭ್ರಮದಲ್ಲಿ ಪಟಾಕಿ ದುರಂತಗಳು ಸಂಭವಿಸುತ್ತೆ ಎಂದು ಮುನ್ನೆಚ್ಚರಿಕೆಯಾಗಿ ಕ್ರಮ ಕೈಗೊಳ್ಳಲಾಗಿದೆ.
 

ಬೆಳಕಿನ ಹಬ್ಬ ದೀಪಾವಳಿಗೆ ಇನ್ನು ಕೆಲವು ದಿನಗಳು ಬಾಕಿ ಇದೆ. ರಾಜ್ಯಾದ್ಯಂತ ದೀಪಾವಳಿಗೆ(Deepavali) ಸಿದ್ಧತೆಗಳು ನಡೆಯುತ್ತಿವೆ.. ದೀಪಾವಳಿ ಅಂದ್ಮೇಲೆ ಪಟಾಕಿ ಸಂಭ್ರಮ ಇದ್ದಿದ್ದೆ.ಇತ್ತೀಚೆಗೆ ನಡೆದ ಪಟಾಕಿ ದುರಂತಗಳಿಂದ ಎಚ್ಚೆತ್ತ ಸರ್ಕಾರ ಡೇಂಜರ್ ಪಟಾಕಿ ಬ್ಯಾನ್(cracker Ban) ಮಾಡಿದೆ.ಆದ್ರೆ, ಹಸಿರು ಪಟಾಕಿಗೆ ನಿರ್ಬಂಧವಿಲ್ಲ.ಮುನ್ನೆಚ್ಚರಿಕೆಗಳ ನಡುವೆಯೂ ಪಟಾಕಿ ದುರಂತಗಳು ಸಂಭವಿಸಲು ಬಹುದು.. ಹೀಗಾಗಿ ಬೆಂಗಳೂರಿನ ಆಸ್ಪತ್ರೆಗಳು(Hospital) ಸೂಕ್ತ ಚಿಕಿತ್ಸೆ ನೀಡಲು ಸಿದ್ಧತೆ ಮಾಡಿಕೊಳ್ಳುತ್ತಿವೆ. ದೀಪಾವಳಿ ಹಬ್ಬದಲ್ಲಿ ಪಟಾಕಿ ಸಿಡಿತದಿಂದ ಗಾಯಗೊಳ್ಳುವವರ ಪೈಕಿ ಶೇ.40 ರಷ್ಟು 14 ವರ್ಷದ ಮಕ್ಕಳೇ ಇದ್ದಾರೆ. ಎಷ್ಟೋ ಜನ ಕಣ್ಣನ್ನೇ ಕಳೆದುಕೊಂಡ ಉದಾಹರಣೆಗಳಿವೆ. ಹೀಗಾಗಿ ಈ ಬಾರಿ ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸಿದ್ಧತೆಗಳನ್ನ ಮಾಡಿಕೊಳ್ಳಲಾಗಿದೆ.ಪಟಾಕಿ ಸಂಭ್ರಮದ ವೇಳೆ ಗಾಯಗೊಂಡವರಿಗೆ ಚಿಕಿತ್ಸೆ ನೀಡಲು ವಾರ್ಡ್ಗಳನ್ನು ಮೀಸಲಿಡಲಾಗಿದೆ.  ಮಹಿಳೆಯರು, ಪುರುಷರು ಹಾಗೂ ಮಕ್ಕಳಿಗೆ ಪ್ರತ್ಯೇಕ ವಾರ್ಡ್ ಮೀಸಲಿಡಲಾಗಿದೆ. ಮಹಿಳೆಯರ ವಾರ್ಡ್ ನಲ್ಲಿ 18 ಬೆಡ್, ಪುರುಷರ ವಾರ್ಡ್ ನಲ್ಲಿ 10 ಬೆಡ್ ಹಾಗೂ ಮಕ್ಕಳಿಗೆ 8 ಬೆಡ್ ವ್ಯವಸ್ಥೆ ಮಾಡಲಾಗಿದೆ...ಇನ್ನು ಹಬ್ಬದ ವೇಳೆ ಸುಮಾರು 1 ವಾರಗಳ ಕಾಲ ಈ ವಾರ್ಡ್ಗಳಲ್ಲಿ ದಿನದ 24 ಗಂಟೆ ಚಿಕಿತ್ಸೆ ನೀಡಲು ತಯಾರಿ ನಡೆದಿದೆ. ಇನ್ನೂ ಅಗತ್ಯಬಿದ್ದರೆ ಹೆಚ್ಚುವರಿಯಾಗಿ 15 ಬೆಡ್ಗಳ ಒಂದು ವಾರ್ಡ್ ಸಿದ್ದಪಡಿಸಿಕೊಳ್ಳಲಾಗುತ್ತೆ ಅಂತ ಮಿಂಟೋ ಆಸ್ಪತ್ರೆ ನಿರ್ದೇಶಕ ಡಾ. ನಾಗರಾಜ್ ಮಾಹಿತಿ ನೀಡಿದ್ದಾರೆ.

ಇದನ್ನೂ ವೀಕ್ಷಿಸಿ:  ಅಕಾಲಿಕ ಮಳೆಗೆ ಅನ್ನದಾತ ಕಂಗಾಲು..ಕಟಾವಿಗೆ ಬಂದ ಬೆಳೆ ನೀರಲ್ಲಿ..ರೈತರ ಕಣ್ಣೀರು

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more