ಹಾಸ್ಟೆಲ್ ಸಮಸ್ಯೆಗಳ ವಿರುದ್ಧ ಸಿಡಿದೆದ್ದ ಸ್ಟೂಡೆಂಟ್ಸ್‌: ನೀರಿಗಾಗಿ ಕಾನೂನು ವಿದ್ಯಾರ್ಥಿಗಳ ಪ್ರತಿಭಟನೆ

ಹಾಸ್ಟೆಲ್ ಸಮಸ್ಯೆಗಳ ವಿರುದ್ಧ ಸಿಡಿದೆದ್ದ ಸ್ಟೂಡೆಂಟ್ಸ್‌: ನೀರಿಗಾಗಿ ಕಾನೂನು ವಿದ್ಯಾರ್ಥಿಗಳ ಪ್ರತಿಭಟನೆ

Published : Dec 05, 2023, 09:35 AM IST

ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆ ಆಗಬಾರದು ಎಂದು ಸರ್ಕಾರಗಳು ನಾನಾ ಯೋಜನೆಗಳನ್ನು ಜಾರಿಗೆ ತಂದಿದೆ. ಆದ್ರೆ ಕೆಲವು ಹಾಸ್ಟೆಲ್‌ಗಳಲ್ಲಿ ಇಂದಿಗೂ ಮೂಲಭೂತ ಸೌಲಭ್ಯಗಳು ಸೂಕ್ತವಾಗಿ ಸಿಗದೇ ಇರುವುದೇ ವಿಪರ್ಯಾಸ. 

ಸಮಾಜ ಕಲ್ಯಾಣ ಇಲಾಖೆ ಕಚೇರಿ ಮುಂಭಾಗ ಧರಣಿ ನಡೆಸ್ತಿರೋ ವಿದ್ಯಾರ್ಥಿಗಳ(Students) ದೃಶ್ಯ ಕಂಡು ಬಂದಿದ್ದು ಚಿತ್ರದುರ್ಗದಲ್ಲಿ(Chitradurga).‌ ಕಳೆದ ಎರಡ್ಮೂರು ತಿಂಗಳಿಂದ ನಗರದ ಹೊರಭಾಗದಲ್ಲಿರುವ ಬಾಲಕರ ಹಾಸ್ಟೆಲ್ನಲ್ಲಿ(Boys Hostel) ನೀರಿನ ಅಭಾವ ತಲೆದೋರಿದೆ. ವಿದ್ಯಾರ್ಥಿಗಳು ಶೌಚಾಲಯಕ್ಕೆ ಹೋಗೋಕು ನೀರಿಲ್ಲದೆ ಪರದಾಡುವ ಸ್ಥಿತಿ ಇದೆ. ಎಷ್ಟೇ ಬಾರಿ ಅಧಿಕಾರಿಗಳ ಗಮನಕ್ಕೆ‌ ತಂದ್ರೂ ಪ್ರಯೋಜನವಾಗಿಲ್ಲ. ನೀರಿನ ಸಮಸ್ಯೆ(Water problem) ಜೊತೆಗೆ ಮೂಲಭೂತ ಸೌಕರ್ಯಗಳ ತೊಂದರೆ ವಿದ್ಯಾರ್ಥಿಗಳನ್ನ ರೊಚ್ಚಿಗೆಬ್ಬಿಸಿದೆ. ಹೀಗಾಗಿ ಸಮಾಜ ಕಲ್ಯಾಣ ಇಲಾಖೆ ಕಚೇರಿ ಮುಂದೆ ವಿದ್ಯಾರ್ಥಿಗಳು ಪ್ರತಿಭಟಿಸಿದ್ರು. ಸಮಸ್ಯೆ ಬಗೆಹರಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡೋದಾಗಿ ಎಚ್ಚರಿಸಿದ್ರು. ಇನ್ನೊಂದು ಆಘಾತಕಾರಿ ವಿಷ್ಯ ಏನಂದ್ರೆ, ವಿದ್ಯಾರ್ಥಿಗಳಿಗೆ ಅಡುಗೆ ಮಾಡಲು ಕೆರೆ  ನೀರು ಸಪ್ಲೈ ಮಾಡ್ತಿದ್ದಾರಂತೆ. ಹೀಗಾಗಿ ವಿದ್ಯಾರ್ಥಿಗಳು ಧರಣಿಗೆ ಇಳಿದಿದ್ದಾರೆ. ವಿದ್ಯಾರ್ಥಿಗಳ ಪ್ರತಿಭಟನೆ ಬಳಿಕ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ಒಂದು ಬೋರ್ವೆಲ್ನಲ್ಲಿ ನೀರು ಅಲ್ಪ ಪ್ರಮಾಣದಲ್ಲಿ ಬರ್ತಿದೆ. ಹೆಚ್ಚಿನ ನೀರಿನ ಅಗತ್ಯವಿದೆ ಎಂದು ತಿಳಿದು ಬಂದಿದೆ. ಈ ಕುರಿತು ಮೇಲಾಧಿಕಾರಿಗಳ ಗಮನಕ್ಕೆ ತಂದು ಇನ್ನೊಂದು ಬೋರ್ವೆಲ್ ಕೊರೆಸುವ ಪ್ರಯತ್ನ ಮಾಡಲಾಗುವುದು ಅನ್ನೋ ಭರವಸೆ ನೀಡಿದ್ರು. ಕಾನೂನು ಕಾಲೇಜಿನ ಹಾಸ್ಟೆಲ್ ಸಮಸ್ಯೆ ಇಂದು ಮೊನ್ನೆಯದಲ್ಲ. ಕಳೆದ ಬಾರಿಯೂ ವಾರ್ಡನ್ಗೆ ತರಾಟೆ ತೆಗೆದುಕೊಂಡು ಸಮಸ್ಯೆ ಕುರಿತು ಜಿಲ್ಲಾಧಿಕಾರಿಗಳ ಗಮನಕ್ಕೂ ತಂದಿದ್ದರು. ಇಷ್ಟಾದ್ರೂ ಅಧಿಕಾರಿಗಳು ಮಾತ್ರ ಎಚ್ಚೆತ್ತುಕೊಂಡಿಲ್ಲ. ಇನ್ನಾದ್ರೂ ವಿದ್ಯಾರ್ಥಿಗಳಿಗೆ ಸಮಸ್ಯೆ ಆಗದಂತೆ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕಿದೆ. 

ಇದನ್ನೂ ವೀಕ್ಷಿಸಿ:  Today Horoscope: ಇಂದು ಈ ರಾಶಿಯವರಿಗೆ ಉದರ ಸಮಸ್ಯೆ ಕಾಡಲಿದ್ದು, ಲಲಿತಾ ಪ್ರಾರ್ಥನೆ ಮಾಡಿ

53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
Read more