Saffron Flag at Red Fort: ಕೆಂಪು ಕೋಟೆಯ ಮೇಲೆ ಭಗವಾಧ್ವಜ ಹಾರಿಸಿಯೇ ಸಿದ್ದ: ಶಾಸಕ ಹರೀಶ್ ಪೂಂಜಾ

Saffron Flag at Red Fort: ಕೆಂಪು ಕೋಟೆಯ ಮೇಲೆ ಭಗವಾಧ್ವಜ ಹಾರಿಸಿಯೇ ಸಿದ್ದ: ಶಾಸಕ ಹರೀಶ್ ಪೂಂಜಾ

Published : Mar 01, 2022, 10:49 AM ISTUpdated : Mar 01, 2022, 11:45 AM IST

*ಕೆಂಪು ಕೋಟೆಯ ಮೇಲೆ ಭಗವಾಧ್ವಜ ಹಾರಿಸಿಯೇ ಸಿದ್ದ'
*ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಹೇಳಿಕೆ
*ತುಳು ಭಾಷೆಯಲ್ಲಿ ಹರೀಶ್ ಪೂಂಜಾ ಮಾಡಿದ ಭಾಷಣದ ತುಣುಕು ವೈರಲ್

ದಕ್ಷಿಣ ಕನ್ನಡ (ಮಾ. 01): ಮುಂದೊಂದು ದಿನ ದೆಹಲಿಯ ಕೆಂಪುಕೋಟೆಯ ಮೇಲೆ ಭಗವಾ ಧ್ವಜ (ಕೇಸರಿ) ಹಾರಿಸುತ್ತೇವೆ ಎಂದಿರುವ ಹಿರಿಯ ಬಿಜೆಪಿ ಮುಖಂಡ, ಗ್ರಾಮೀಣಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿಕೆ ದೇಶಾದ್ಯಂತ ಭಾರೀ ಸದ್ದು ಮಾಡಿತ್ತು. ಸಚಿವ ಈಶ್ವರಪ್ಪ ಅವ​ರ ಹೇಳಿಕೆಯನ್ನು ಖಂಡಿಸಿ  ಅವರನ್ನು ವಜಾಗೊಳಿಸುವಂತೆ  ಕಾಂಗ್ರೆಸ್‌ ಆಗ್ರಹಿಸಿತ್ತು. ಸಚಿವ ಈಶ್ವರಪ್ಪ ಹೇಳಿಕೆ ವಿವಾದ ಇನ್ನು ಹಚ್ಚಹಸಿರಾಗಿರುವಾಗಲೇ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 

ಶಿವಮೊಗ್ಗದ ಹರ್ಷ ಹತ್ಯೆ ಖಂಡಿಸಿ ಹಿಂದೂ ಜನಜಾಗೃತಿ ಸಮಿತಿ ನಡೆಸಿದ ಪ್ರತಿಭಟನೆಯಲ್ಲಿ ಮಾತಾನಡಿದ ಹರೀಶ್‌ ಪೂಂಜಾ "ಕಾಂಗ್ರೆಸ್ ಷಡ್ಯಂತ್ರ, ಪ್ರೇರಣೆ ಮತ್ತು ಕುಮ್ಮಕ್ಕಿನಿಂದ ಹಿಂದೂ ಕಾರ್ಯಕರ್ತನ ಹತ್ಯೆಯಾಗಿದೆ. ಕೆಂಪುಕೋಟೆ ಮೇಲೆ ಭಗದ್ವಜ ಹಾರಿಸ್ತೀವಿ ಅಂತ ಈಶ್ವರಪ್ಪ ಹೇಳಿದ್ರು ಅನ್ನೋ ಕಾರಣಕ್ಕೆ ಅಧಿವೇಶನ ಮೊಟಕುಗೊಳಿಸಿದ್ರು. ಆದ್ರೆ ಬೆಳ್ತಂಗಡಿಯ ಈ ಸಭೆಯಲ್ಲಿ ಬೆಳ್ತಂಗಡಿ ಶಾಸಕನಾಗಿ ನಾನು ಹೇಳ್ತೀನಿ, ಕೆಂಪು ಕೋಟೆಯ ಮೇಲೆ ಭಗವದ್ವಜ ಹಾರಿಸಿಯೇ ಸಿದ್ದ ಈ ಹಿಂದೂ ಸಮಾಜ" ಎಂದು ಹೇಳಿದ್ದಾರೆ. ತುಳು ಭಾಷೆಯಲ್ಲಿ ಹರೀಶ್ ಪೂಂಜಾ ಮಾಡಿದ ಭಾಷಣದ ತುಣುಕು  ಈಗ ವೈರಲ್ ಆಗುತ್ತಿದೆ. 

ಇದನ್ನೂ ಓದಿ: Flag Row: ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಿಸ್ತೀವಿ ಎಂದಿಲ್ಲ: ಈಶ್ವರಪ್ಪ

"ಕೆಂಪುಕೋಟೆಯ ಮೇಲೆ ಭಗವಧ್ವಜ ಹಾರಿಸೋದು ರಾಷ್ಟ್ರಧ್ವಜದ ಕೆಳಗೆ. ಕೆಂಪುಕೋಟೆಯ ಮೇಲೆ ರಾಷ್ಟ್ರಧ್ವಜದ ಕೆಳಗೆ ಭಗವಾಧ್ಬಜ ಹಾರಿಸೋದನ್ನ ಯಾವ ಪಕ್ಷ ದಿಂದಲೂ ತಪ್ಪಿಸೋದಕ್ಕೆ ಸಾಧ್ಯವೇ ಇಲ್ಲ. ಇದು ಭಾರತೀಯ ಜನತಾ ಪಾರ್ಟಿ ಮತ್ತು ಹಿಂದೂ ಸಮಾಜದ ಸಂಕಲ್ಪ. ದೇಶಕ್ಕೆ ಸ್ವಾತಂತ್ರ್ಯ ಸಿಗಲು ಬಾಲಗಂಗಾಧರ ತಿಲಕರು ಭಗವಧ್ಬಜ ಎದುರಿಟ್ಟು ಹೋರಾಟ ಮಾಡಿದ್ರು. ಅದಕ್ಕೂ ಮೊದಲು ಹಿಂದೂ ಸಮಾಜದ ಶಕ್ತಿಯಾಗಿದ್ದ ಶಿವಾಜಿ ಮಹಾರಾಜರ ಶಕ್ತಿಯೂ ಭಗವಧ್ವಜ" ಎಂದು ಪೂಂಜಾ ಹೇಳಿದ್ದಾರೆ. 

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more