Saffron Flag at Red Fort: ಕೆಂಪು ಕೋಟೆಯ ಮೇಲೆ ಭಗವಾಧ್ವಜ ಹಾರಿಸಿಯೇ ಸಿದ್ದ: ಶಾಸಕ ಹರೀಶ್ ಪೂಂಜಾ

Saffron Flag at Red Fort: ಕೆಂಪು ಕೋಟೆಯ ಮೇಲೆ ಭಗವಾಧ್ವಜ ಹಾರಿಸಿಯೇ ಸಿದ್ದ: ಶಾಸಕ ಹರೀಶ್ ಪೂಂಜಾ

Published : Mar 01, 2022, 10:49 AM ISTUpdated : Mar 01, 2022, 11:45 AM IST

*ಕೆಂಪು ಕೋಟೆಯ ಮೇಲೆ ಭಗವಾಧ್ವಜ ಹಾರಿಸಿಯೇ ಸಿದ್ದ'
*ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಹೇಳಿಕೆ
*ತುಳು ಭಾಷೆಯಲ್ಲಿ ಹರೀಶ್ ಪೂಂಜಾ ಮಾಡಿದ ಭಾಷಣದ ತುಣುಕು ವೈರಲ್

ದಕ್ಷಿಣ ಕನ್ನಡ (ಮಾ. 01): ಮುಂದೊಂದು ದಿನ ದೆಹಲಿಯ ಕೆಂಪುಕೋಟೆಯ ಮೇಲೆ ಭಗವಾ ಧ್ವಜ (ಕೇಸರಿ) ಹಾರಿಸುತ್ತೇವೆ ಎಂದಿರುವ ಹಿರಿಯ ಬಿಜೆಪಿ ಮುಖಂಡ, ಗ್ರಾಮೀಣಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿಕೆ ದೇಶಾದ್ಯಂತ ಭಾರೀ ಸದ್ದು ಮಾಡಿತ್ತು. ಸಚಿವ ಈಶ್ವರಪ್ಪ ಅವ​ರ ಹೇಳಿಕೆಯನ್ನು ಖಂಡಿಸಿ  ಅವರನ್ನು ವಜಾಗೊಳಿಸುವಂತೆ  ಕಾಂಗ್ರೆಸ್‌ ಆಗ್ರಹಿಸಿತ್ತು. ಸಚಿವ ಈಶ್ವರಪ್ಪ ಹೇಳಿಕೆ ವಿವಾದ ಇನ್ನು ಹಚ್ಚಹಸಿರಾಗಿರುವಾಗಲೇ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 

ಶಿವಮೊಗ್ಗದ ಹರ್ಷ ಹತ್ಯೆ ಖಂಡಿಸಿ ಹಿಂದೂ ಜನಜಾಗೃತಿ ಸಮಿತಿ ನಡೆಸಿದ ಪ್ರತಿಭಟನೆಯಲ್ಲಿ ಮಾತಾನಡಿದ ಹರೀಶ್‌ ಪೂಂಜಾ "ಕಾಂಗ್ರೆಸ್ ಷಡ್ಯಂತ್ರ, ಪ್ರೇರಣೆ ಮತ್ತು ಕುಮ್ಮಕ್ಕಿನಿಂದ ಹಿಂದೂ ಕಾರ್ಯಕರ್ತನ ಹತ್ಯೆಯಾಗಿದೆ. ಕೆಂಪುಕೋಟೆ ಮೇಲೆ ಭಗದ್ವಜ ಹಾರಿಸ್ತೀವಿ ಅಂತ ಈಶ್ವರಪ್ಪ ಹೇಳಿದ್ರು ಅನ್ನೋ ಕಾರಣಕ್ಕೆ ಅಧಿವೇಶನ ಮೊಟಕುಗೊಳಿಸಿದ್ರು. ಆದ್ರೆ ಬೆಳ್ತಂಗಡಿಯ ಈ ಸಭೆಯಲ್ಲಿ ಬೆಳ್ತಂಗಡಿ ಶಾಸಕನಾಗಿ ನಾನು ಹೇಳ್ತೀನಿ, ಕೆಂಪು ಕೋಟೆಯ ಮೇಲೆ ಭಗವದ್ವಜ ಹಾರಿಸಿಯೇ ಸಿದ್ದ ಈ ಹಿಂದೂ ಸಮಾಜ" ಎಂದು ಹೇಳಿದ್ದಾರೆ. ತುಳು ಭಾಷೆಯಲ್ಲಿ ಹರೀಶ್ ಪೂಂಜಾ ಮಾಡಿದ ಭಾಷಣದ ತುಣುಕು  ಈಗ ವೈರಲ್ ಆಗುತ್ತಿದೆ. 

ಇದನ್ನೂ ಓದಿ: Flag Row: ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಿಸ್ತೀವಿ ಎಂದಿಲ್ಲ: ಈಶ್ವರಪ್ಪ

"ಕೆಂಪುಕೋಟೆಯ ಮೇಲೆ ಭಗವಧ್ವಜ ಹಾರಿಸೋದು ರಾಷ್ಟ್ರಧ್ವಜದ ಕೆಳಗೆ. ಕೆಂಪುಕೋಟೆಯ ಮೇಲೆ ರಾಷ್ಟ್ರಧ್ವಜದ ಕೆಳಗೆ ಭಗವಾಧ್ಬಜ ಹಾರಿಸೋದನ್ನ ಯಾವ ಪಕ್ಷ ದಿಂದಲೂ ತಪ್ಪಿಸೋದಕ್ಕೆ ಸಾಧ್ಯವೇ ಇಲ್ಲ. ಇದು ಭಾರತೀಯ ಜನತಾ ಪಾರ್ಟಿ ಮತ್ತು ಹಿಂದೂ ಸಮಾಜದ ಸಂಕಲ್ಪ. ದೇಶಕ್ಕೆ ಸ್ವಾತಂತ್ರ್ಯ ಸಿಗಲು ಬಾಲಗಂಗಾಧರ ತಿಲಕರು ಭಗವಧ್ಬಜ ಎದುರಿಟ್ಟು ಹೋರಾಟ ಮಾಡಿದ್ರು. ಅದಕ್ಕೂ ಮೊದಲು ಹಿಂದೂ ಸಮಾಜದ ಶಕ್ತಿಯಾಗಿದ್ದ ಶಿವಾಜಿ ಮಹಾರಾಜರ ಶಕ್ತಿಯೂ ಭಗವಧ್ವಜ" ಎಂದು ಪೂಂಜಾ ಹೇಳಿದ್ದಾರೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more