ಗುಮ್ಮಟನಗರಿಯಲ್ಲಿ ಇನ್ಮುಂದೆ ಹೆಲ್ಮೆಟ್‌ ಕಡ್ಡಾಯ: ಸಾವಿನ ಪ್ರಮಾಣ ತಗ್ಗಿಸಲು ಪೊಲೀಸರ ರೂಲ್ಸ್

ಗುಮ್ಮಟನಗರಿಯಲ್ಲಿ ಇನ್ಮುಂದೆ ಹೆಲ್ಮೆಟ್‌ ಕಡ್ಡಾಯ: ಸಾವಿನ ಪ್ರಮಾಣ ತಗ್ಗಿಸಲು ಪೊಲೀಸರ ರೂಲ್ಸ್

Published : Aug 31, 2023, 11:03 AM ISTUpdated : Aug 31, 2023, 11:04 AM IST

ಗುಮ್ಮಟನಗರಿ ವಿಜಯಪುರದಲ್ಲಿ ವಿಪರೀತ ಬಿಸಿಲು ಅನ್ನೋ ಕಾರಣಕ್ಕೆ ಹೆಲ್ಮೆಟ್‌ ಕಡ್ಡಾಯವಾಗಿರಲಿಲ್ಲ. ಹೀಗಾಗಿ ಬೈಕ್‌ ಅಪಘಾತಗಳಲ್ಲಿ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗಿತ್ತು. ಅದ್ರಲ್ಲೂ ಯುವಕರು ಹೈವೇಗಳಲ್ಲಿ ಮನಬಂದಂತೆ ಬೈಕ್‌ ಚಲಾಯಿಸಿ ಹೆಡ್‌ ಇಂಜುರಿಗಳಿಂದ ಸಾವನ್ನಪ್ಪುತ್ತಿದ್ರು. ಸದ್ಯ ಎಚ್ಚೆತ್ತ ಪೊಲೀಸ್‌ ಇಲಾಖೆ ಇನ್ಮುಂದೆ ಹೆಲ್ಮೆಟ್‌ ಕಡ್ಡಾಯಗೊಳಿಸಿ ಆದೇಶಿಸಿದೆ. 

ವಿಜಯಪುರ ಬಿಸಿಲನಾಡು.. ಇಲ್ಲಿನ ಬಿಸಿಲ ಝಳಕ್ಕೆ ಜನ ಮನೆಯಿಂದ ಹೊರ ಬರಲು ಭಯಪಡ್ತಾರೆ. ಬೇಸಿಗೆಯಲ್ಲಂತೂ 45 ಡಿಗ್ರಿಗಿಂತಲೂ ಹೆಚ್ಚು ಬಿಸಿಲಿನ ತಾಪ ಇರುತ್ತೆ. ಇಂಥ ಬಿಸಿಲಿನ ಮಧ್ಯೆ ಹೆಲ್ಮೆಟ್‌(helmet) ಧರಿಸಿದ್ರೆ ಚರ್ಮ ಕಾಯಿಲೆ, ತಲೆ ಕೂದಲು ಉದುರುವಿಕೆಯಂತ ಸಮಸ್ಯೆಗಳು ಕಂಡು ಬರ್ತಿದ್ವು.. ಇದೇ ಕಾರಣಕ್ಕೆ ಜಿಲ್ಲೆಯಲ್ಲಿ ಹೆಲ್ಮೆಟ್ ಕಡ್ಡಾಯ ನಿಯಮ ಸಡಿಲಿಸಲಾಗಿತ್ತು. ಆದ್ರೀಗ ಹೆಚ್ಚುತ್ತಿರುವ ಡೆಡ್ಲಿ ಆಕ್ಸಿಡೆಂಟ್(Accident) ಕಾರಣಕ್ಕೆ ಹೆಲ್ಮೆಟ್ ಕಡ್ಡಾಯಗೊಳಿಸಲಾಗಿದೆ. ವಿಜಯಪುರ ನಗರ ಸೇರಿದಂತೆ ಹೈವೇಗಳಲ್ಲಿ ಬೈಕ್‌(Bike) ಅಪಘಾತಗಳಲ್ಲಿ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗುತ್ತಿದೆ.. ಅದ್ರಲ್ಲೂ ಹೆಡ್‌ ಇಂಜ್ಯೂರಿಗಳೇ ಬೈಕ್‌ ಸವಾರರ ಸಾವಿಗೆ ಕಾರಣವಾಗಿವೆ. ಹೀಗಾಗಿ ಸೆಪ್ಟೆಂಬರ್ 5ರಿಂದ ಹೆಲ್ಮೆಟ್ ಕಡ್ಡಾಯವಾಗಿ ಜಾರಿಯಾಗುತ್ತಿದೆ. ಹೆಲ್ಮೆಟ್‌ ಇಲ್ಲದೆ ಸಂಚರಿಸುತ್ತಿರೋ ಬೈಕ್‌ ಸವಾರರನ್ನು ತಡೆದು ಹೆಲ್ಮೆಟ್ ಕಡ್ಡಾಯದ ಬಗ್ಗೆ ಮಾಹಿತಿ ನೀಡುತ್ತಿರುವ ಪೊಲೀಸರು, ಸೆಪ್ಟೆಂಬ್ರ 5ರ ನಂತರ ಹೆಮ್ಲೆಟ್ ಇಲ್ಲದೆ ಬೀದಿಗಿಳಿದ್ರೆ ದಂಡ ಫಿಕ್ಸ್ ಎನ್ನುತ್ತಿದ್ದಾರೆ. ಹೆಲ್ಮೆಟ್ ಕಡ್ಡಾಯ ನಿಯಮವನ್ನು ಪ್ರಜ್ಞಾವಂತ ಬೈಕ್ ಸವಾರರು ಕೂಡ ಸ್ವಾಗತಿಸುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  77ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ: ಸಾಂಸ್ಕೃತಿಕ ಕಾರ್ಯಕ್ರಮ..ಸಾಧಕರು, ಯೋಧರಿಗೆ ಸನ್ಮಾನ

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more