ಗುಮ್ಮಟನಗರಿಯಲ್ಲಿ ಇನ್ಮುಂದೆ ಹೆಲ್ಮೆಟ್‌ ಕಡ್ಡಾಯ: ಸಾವಿನ ಪ್ರಮಾಣ ತಗ್ಗಿಸಲು ಪೊಲೀಸರ ರೂಲ್ಸ್

ಗುಮ್ಮಟನಗರಿಯಲ್ಲಿ ಇನ್ಮುಂದೆ ಹೆಲ್ಮೆಟ್‌ ಕಡ್ಡಾಯ: ಸಾವಿನ ಪ್ರಮಾಣ ತಗ್ಗಿಸಲು ಪೊಲೀಸರ ರೂಲ್ಸ್

Published : Aug 31, 2023, 11:03 AM ISTUpdated : Aug 31, 2023, 11:04 AM IST

ಗುಮ್ಮಟನಗರಿ ವಿಜಯಪುರದಲ್ಲಿ ವಿಪರೀತ ಬಿಸಿಲು ಅನ್ನೋ ಕಾರಣಕ್ಕೆ ಹೆಲ್ಮೆಟ್‌ ಕಡ್ಡಾಯವಾಗಿರಲಿಲ್ಲ. ಹೀಗಾಗಿ ಬೈಕ್‌ ಅಪಘಾತಗಳಲ್ಲಿ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗಿತ್ತು. ಅದ್ರಲ್ಲೂ ಯುವಕರು ಹೈವೇಗಳಲ್ಲಿ ಮನಬಂದಂತೆ ಬೈಕ್‌ ಚಲಾಯಿಸಿ ಹೆಡ್‌ ಇಂಜುರಿಗಳಿಂದ ಸಾವನ್ನಪ್ಪುತ್ತಿದ್ರು. ಸದ್ಯ ಎಚ್ಚೆತ್ತ ಪೊಲೀಸ್‌ ಇಲಾಖೆ ಇನ್ಮುಂದೆ ಹೆಲ್ಮೆಟ್‌ ಕಡ್ಡಾಯಗೊಳಿಸಿ ಆದೇಶಿಸಿದೆ. 

ವಿಜಯಪುರ ಬಿಸಿಲನಾಡು.. ಇಲ್ಲಿನ ಬಿಸಿಲ ಝಳಕ್ಕೆ ಜನ ಮನೆಯಿಂದ ಹೊರ ಬರಲು ಭಯಪಡ್ತಾರೆ. ಬೇಸಿಗೆಯಲ್ಲಂತೂ 45 ಡಿಗ್ರಿಗಿಂತಲೂ ಹೆಚ್ಚು ಬಿಸಿಲಿನ ತಾಪ ಇರುತ್ತೆ. ಇಂಥ ಬಿಸಿಲಿನ ಮಧ್ಯೆ ಹೆಲ್ಮೆಟ್‌(helmet) ಧರಿಸಿದ್ರೆ ಚರ್ಮ ಕಾಯಿಲೆ, ತಲೆ ಕೂದಲು ಉದುರುವಿಕೆಯಂತ ಸಮಸ್ಯೆಗಳು ಕಂಡು ಬರ್ತಿದ್ವು.. ಇದೇ ಕಾರಣಕ್ಕೆ ಜಿಲ್ಲೆಯಲ್ಲಿ ಹೆಲ್ಮೆಟ್ ಕಡ್ಡಾಯ ನಿಯಮ ಸಡಿಲಿಸಲಾಗಿತ್ತು. ಆದ್ರೀಗ ಹೆಚ್ಚುತ್ತಿರುವ ಡೆಡ್ಲಿ ಆಕ್ಸಿಡೆಂಟ್(Accident) ಕಾರಣಕ್ಕೆ ಹೆಲ್ಮೆಟ್ ಕಡ್ಡಾಯಗೊಳಿಸಲಾಗಿದೆ. ವಿಜಯಪುರ ನಗರ ಸೇರಿದಂತೆ ಹೈವೇಗಳಲ್ಲಿ ಬೈಕ್‌(Bike) ಅಪಘಾತಗಳಲ್ಲಿ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗುತ್ತಿದೆ.. ಅದ್ರಲ್ಲೂ ಹೆಡ್‌ ಇಂಜ್ಯೂರಿಗಳೇ ಬೈಕ್‌ ಸವಾರರ ಸಾವಿಗೆ ಕಾರಣವಾಗಿವೆ. ಹೀಗಾಗಿ ಸೆಪ್ಟೆಂಬರ್ 5ರಿಂದ ಹೆಲ್ಮೆಟ್ ಕಡ್ಡಾಯವಾಗಿ ಜಾರಿಯಾಗುತ್ತಿದೆ. ಹೆಲ್ಮೆಟ್‌ ಇಲ್ಲದೆ ಸಂಚರಿಸುತ್ತಿರೋ ಬೈಕ್‌ ಸವಾರರನ್ನು ತಡೆದು ಹೆಲ್ಮೆಟ್ ಕಡ್ಡಾಯದ ಬಗ್ಗೆ ಮಾಹಿತಿ ನೀಡುತ್ತಿರುವ ಪೊಲೀಸರು, ಸೆಪ್ಟೆಂಬ್ರ 5ರ ನಂತರ ಹೆಮ್ಲೆಟ್ ಇಲ್ಲದೆ ಬೀದಿಗಿಳಿದ್ರೆ ದಂಡ ಫಿಕ್ಸ್ ಎನ್ನುತ್ತಿದ್ದಾರೆ. ಹೆಲ್ಮೆಟ್ ಕಡ್ಡಾಯ ನಿಯಮವನ್ನು ಪ್ರಜ್ಞಾವಂತ ಬೈಕ್ ಸವಾರರು ಕೂಡ ಸ್ವಾಗತಿಸುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  77ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ: ಸಾಂಸ್ಕೃತಿಕ ಕಾರ್ಯಕ್ರಮ..ಸಾಧಕರು, ಯೋಧರಿಗೆ ಸನ್ಮಾನ

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more