ಗುಮ್ಮಟನಗರಿಯಲ್ಲಿ ಇನ್ಮುಂದೆ ಹೆಲ್ಮೆಟ್‌ ಕಡ್ಡಾಯ: ಸಾವಿನ ಪ್ರಮಾಣ ತಗ್ಗಿಸಲು ಪೊಲೀಸರ ರೂಲ್ಸ್

ಗುಮ್ಮಟನಗರಿಯಲ್ಲಿ ಇನ್ಮುಂದೆ ಹೆಲ್ಮೆಟ್‌ ಕಡ್ಡಾಯ: ಸಾವಿನ ಪ್ರಮಾಣ ತಗ್ಗಿಸಲು ಪೊಲೀಸರ ರೂಲ್ಸ್

Published : Aug 31, 2023, 11:03 AM ISTUpdated : Aug 31, 2023, 11:04 AM IST

ಗುಮ್ಮಟನಗರಿ ವಿಜಯಪುರದಲ್ಲಿ ವಿಪರೀತ ಬಿಸಿಲು ಅನ್ನೋ ಕಾರಣಕ್ಕೆ ಹೆಲ್ಮೆಟ್‌ ಕಡ್ಡಾಯವಾಗಿರಲಿಲ್ಲ. ಹೀಗಾಗಿ ಬೈಕ್‌ ಅಪಘಾತಗಳಲ್ಲಿ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗಿತ್ತು. ಅದ್ರಲ್ಲೂ ಯುವಕರು ಹೈವೇಗಳಲ್ಲಿ ಮನಬಂದಂತೆ ಬೈಕ್‌ ಚಲಾಯಿಸಿ ಹೆಡ್‌ ಇಂಜುರಿಗಳಿಂದ ಸಾವನ್ನಪ್ಪುತ್ತಿದ್ರು. ಸದ್ಯ ಎಚ್ಚೆತ್ತ ಪೊಲೀಸ್‌ ಇಲಾಖೆ ಇನ್ಮುಂದೆ ಹೆಲ್ಮೆಟ್‌ ಕಡ್ಡಾಯಗೊಳಿಸಿ ಆದೇಶಿಸಿದೆ. 

ವಿಜಯಪುರ ಬಿಸಿಲನಾಡು.. ಇಲ್ಲಿನ ಬಿಸಿಲ ಝಳಕ್ಕೆ ಜನ ಮನೆಯಿಂದ ಹೊರ ಬರಲು ಭಯಪಡ್ತಾರೆ. ಬೇಸಿಗೆಯಲ್ಲಂತೂ 45 ಡಿಗ್ರಿಗಿಂತಲೂ ಹೆಚ್ಚು ಬಿಸಿಲಿನ ತಾಪ ಇರುತ್ತೆ. ಇಂಥ ಬಿಸಿಲಿನ ಮಧ್ಯೆ ಹೆಲ್ಮೆಟ್‌(helmet) ಧರಿಸಿದ್ರೆ ಚರ್ಮ ಕಾಯಿಲೆ, ತಲೆ ಕೂದಲು ಉದುರುವಿಕೆಯಂತ ಸಮಸ್ಯೆಗಳು ಕಂಡು ಬರ್ತಿದ್ವು.. ಇದೇ ಕಾರಣಕ್ಕೆ ಜಿಲ್ಲೆಯಲ್ಲಿ ಹೆಲ್ಮೆಟ್ ಕಡ್ಡಾಯ ನಿಯಮ ಸಡಿಲಿಸಲಾಗಿತ್ತು. ಆದ್ರೀಗ ಹೆಚ್ಚುತ್ತಿರುವ ಡೆಡ್ಲಿ ಆಕ್ಸಿಡೆಂಟ್(Accident) ಕಾರಣಕ್ಕೆ ಹೆಲ್ಮೆಟ್ ಕಡ್ಡಾಯಗೊಳಿಸಲಾಗಿದೆ. ವಿಜಯಪುರ ನಗರ ಸೇರಿದಂತೆ ಹೈವೇಗಳಲ್ಲಿ ಬೈಕ್‌(Bike) ಅಪಘಾತಗಳಲ್ಲಿ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗುತ್ತಿದೆ.. ಅದ್ರಲ್ಲೂ ಹೆಡ್‌ ಇಂಜ್ಯೂರಿಗಳೇ ಬೈಕ್‌ ಸವಾರರ ಸಾವಿಗೆ ಕಾರಣವಾಗಿವೆ. ಹೀಗಾಗಿ ಸೆಪ್ಟೆಂಬರ್ 5ರಿಂದ ಹೆಲ್ಮೆಟ್ ಕಡ್ಡಾಯವಾಗಿ ಜಾರಿಯಾಗುತ್ತಿದೆ. ಹೆಲ್ಮೆಟ್‌ ಇಲ್ಲದೆ ಸಂಚರಿಸುತ್ತಿರೋ ಬೈಕ್‌ ಸವಾರರನ್ನು ತಡೆದು ಹೆಲ್ಮೆಟ್ ಕಡ್ಡಾಯದ ಬಗ್ಗೆ ಮಾಹಿತಿ ನೀಡುತ್ತಿರುವ ಪೊಲೀಸರು, ಸೆಪ್ಟೆಂಬ್ರ 5ರ ನಂತರ ಹೆಮ್ಲೆಟ್ ಇಲ್ಲದೆ ಬೀದಿಗಿಳಿದ್ರೆ ದಂಡ ಫಿಕ್ಸ್ ಎನ್ನುತ್ತಿದ್ದಾರೆ. ಹೆಲ್ಮೆಟ್ ಕಡ್ಡಾಯ ನಿಯಮವನ್ನು ಪ್ರಜ್ಞಾವಂತ ಬೈಕ್ ಸವಾರರು ಕೂಡ ಸ್ವಾಗತಿಸುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  77ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ: ಸಾಂಸ್ಕೃತಿಕ ಕಾರ್ಯಕ್ರಮ..ಸಾಧಕರು, ಯೋಧರಿಗೆ ಸನ್ಮಾನ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more