ಅಪಘಾತದಲ್ಲಿ ಕಾಲು ಕಳೆದುಕೊಂಡಾಕೆ ಈಗ ಉದ್ಯಮಿ ! ವಿವಿಎಸ್ ಲಕ್ಷ್ಮಣ್ ಟ್ವೀಟ್ ಮಾಡಿ ಪ್ರಶಂಸೆ

ಅಪಘಾತದಲ್ಲಿ ಕಾಲು ಕಳೆದುಕೊಂಡಾಕೆ ಈಗ ಉದ್ಯಮಿ ! ವಿವಿಎಸ್ ಲಕ್ಷ್ಮಣ್ ಟ್ವೀಟ್ ಮಾಡಿ ಪ್ರಶಂಸೆ

Published : May 24, 2024, 01:35 PM IST

ಇದು ಬೆಂಗಳೂರು ಮಹಿಳೆಯ ಸ್ಫೂರ್ತಿದಾಯಕ ಕಥೆ 
ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಟ್ವೀಟ್ ಮಾಡಿ ಪ್ರಶಂಸೆ 
ಅಪಘಾತದಲ್ಲಿ ಕಾಲು ಕಳೆದುಕೊಂಡಿರುವ ವೀಣಾ 

ಇದು ಬೆಂಗಳೂರು(Bengaluru) ಮಹಿಳೆಯೊಬ್ಬರ ಸ್ಫೂರ್ತಿದಾಯಕ ಕಥೆಯಾಗಿದ್ದು, ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್(Cricketer VVS Laxman) ಟ್ವೀಟ್ ಮಾಡಿ ಪ್ರಶಂಸೆಯನ್ನು ವ್ಯಕ್ತಪಡಿಸಿದ್ದಾರೆ. ಭರತನಾಟ್ಯ ಕಲಾವಿದೆ ಉದ್ಯಮಿಯಾಗಿದ್ದಾರೆ(Businessman). ಅಪಘಾತದಲ್ಲಿ(Accident) ಬೆಂಗಳೂರಿನ ವೀಣಾ(Veena) ಕಾಲು ಕಳೆದುಕೊಂಡಿದ್ದರು. 17 ವರ್ಷ ಇರುವಾಗ ಬಿಎಂಟಿಸಿ ಬಸ್ ಹರಿದು ಕಾಲಿಗೆ ಗಾಯವಾದ ಪರಿಣಾಮ ಭರತನಾಟ್ಯವನ್ನು ಅವರು ಮುಂದುವರಿಸಲಿಲ್ಲ. ಎಂಎನ್‌ಸಿ ಕಂಪನಿಯಲ್ಲೂ ಸ್ವಲ್ಪ ದಿನ ಕೆಲಸ ಮಾಡಿದ್ದ ವೀಣಾ,ಎಲ್ಲವನ್ನು  ಬಿಟ್ಟು ದೋಸೆ ಕ್ಯಾಂಟೀನ್ ಶುರು ಮಾಡಿದರು. ಜೆ.ಪಿ. ನಗರದಲ್ಲಿ ಕರಿದೋಸೆ ಅನ್ನೋ ಕ್ಯಾಂಟೀನ್‌ನನ್ನು ವೀಣಾ ನಡೆಸುತ್ತಿದ್ದಾರೆ. ವೀಣಾ ಕಾರ್ಯವನ್ನು ಮೆಚ್ಚಿ ವಿವಿಎಸ್ ಲಕ್ಷ್ಮಣ್ ಟ್ವೀಟ್ ಮಾಡಿದ್ದಾರೆ. ಜೀವನದಲ್ಲಿ ಎಷ್ಟೇ ಕಷ್ಟ ಬಂದರೂ ಬಲಶಾಲಿಯಾಗಿರು. ನಿಮ್ಮ ಬದುಕು ನಮಗೆ ಸ್ಫೂರ್ತಿದಾಯಕ ಎಂದು ಲಕ್ಷ್ಮಣ್ ಟ್ವೀಟ್ ಮಾಡಿದ್ದಾರೆ.

ಮೊದಲು ಸಣ್ಣದಾಗಿ ಜೆಪಿ ನಗರದಲ್ಲಿ ಶುರು ಮಾಡಿದ್ವಿ. ಮಧುರೈ ಕಡೆ ಕರಿದೋಸೆ ಅನ್ನೋದು ಫೇಮಸ್. ಬೆಂಗಳೂರಲ್ಲಿ ಎಲ್ಲೂ ಕರಿದೋಸೆ ಸಿಗ್ತಾ ಇರಲಿಲ್ಲ. ಛಲ ಬಿಡದೆ ಎದ್ದು ನಿಂತ್ರೆ ಖಂಡಿತಾ ಸಕ್ಸಸ್ ಆಗುತ್ತೆ. ನಾನು ಬಾಲ್ಯದಿಂದಲೂ ಕ್ರಿಕೆಟ್ ನೋಡ್ತಿದ್ದೆ. ಲಕ್ಷ್ಮಣ್ ಟ್ವೀಟ್ ಮಾಡಿರೋದು ಖುಷಿ ಕೊಟ್ಟಿದೆ. ಲಕ್ಷ್ಮಣ್ ವೆರೆಗೂ ತಲುಪಿದ್ದು ಹೇಗೆ ಅನ್ನೋದೇ ಗೊತ್ತಿಲ್ಲ. ನೀವು ಹೇಳಿದಾಗಲೇ ಟ್ವೀಟ್ ಬಗ್ಗೆ ಗೊತ್ತಾಗ್ತಿರೋದು ಎಂದು ವೀಣಾ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಕುಡಿದ ಮತ್ತಿನಲ್ಲಿ ಈಜಲು ತೆರಳಿದ ಯುವಕ: ಬ್ರಿಡ್ಜ್‌ ಕಮ್‌ ಬ್ಯಾರೇಜ್‌ನಲ್ಲಿ ಜಲಸಮಾಧಿ

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more