ಅಪಘಾತದಲ್ಲಿ ಕಾಲು ಕಳೆದುಕೊಂಡಾಕೆ ಈಗ ಉದ್ಯಮಿ ! ವಿವಿಎಸ್ ಲಕ್ಷ್ಮಣ್ ಟ್ವೀಟ್ ಮಾಡಿ ಪ್ರಶಂಸೆ

ಅಪಘಾತದಲ್ಲಿ ಕಾಲು ಕಳೆದುಕೊಂಡಾಕೆ ಈಗ ಉದ್ಯಮಿ ! ವಿವಿಎಸ್ ಲಕ್ಷ್ಮಣ್ ಟ್ವೀಟ್ ಮಾಡಿ ಪ್ರಶಂಸೆ

Published : May 24, 2024, 01:35 PM IST

ಇದು ಬೆಂಗಳೂರು ಮಹಿಳೆಯ ಸ್ಫೂರ್ತಿದಾಯಕ ಕಥೆ 
ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಟ್ವೀಟ್ ಮಾಡಿ ಪ್ರಶಂಸೆ 
ಅಪಘಾತದಲ್ಲಿ ಕಾಲು ಕಳೆದುಕೊಂಡಿರುವ ವೀಣಾ 

ಇದು ಬೆಂಗಳೂರು(Bengaluru) ಮಹಿಳೆಯೊಬ್ಬರ ಸ್ಫೂರ್ತಿದಾಯಕ ಕಥೆಯಾಗಿದ್ದು, ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್(Cricketer VVS Laxman) ಟ್ವೀಟ್ ಮಾಡಿ ಪ್ರಶಂಸೆಯನ್ನು ವ್ಯಕ್ತಪಡಿಸಿದ್ದಾರೆ. ಭರತನಾಟ್ಯ ಕಲಾವಿದೆ ಉದ್ಯಮಿಯಾಗಿದ್ದಾರೆ(Businessman). ಅಪಘಾತದಲ್ಲಿ(Accident) ಬೆಂಗಳೂರಿನ ವೀಣಾ(Veena) ಕಾಲು ಕಳೆದುಕೊಂಡಿದ್ದರು. 17 ವರ್ಷ ಇರುವಾಗ ಬಿಎಂಟಿಸಿ ಬಸ್ ಹರಿದು ಕಾಲಿಗೆ ಗಾಯವಾದ ಪರಿಣಾಮ ಭರತನಾಟ್ಯವನ್ನು ಅವರು ಮುಂದುವರಿಸಲಿಲ್ಲ. ಎಂಎನ್‌ಸಿ ಕಂಪನಿಯಲ್ಲೂ ಸ್ವಲ್ಪ ದಿನ ಕೆಲಸ ಮಾಡಿದ್ದ ವೀಣಾ,ಎಲ್ಲವನ್ನು  ಬಿಟ್ಟು ದೋಸೆ ಕ್ಯಾಂಟೀನ್ ಶುರು ಮಾಡಿದರು. ಜೆ.ಪಿ. ನಗರದಲ್ಲಿ ಕರಿದೋಸೆ ಅನ್ನೋ ಕ್ಯಾಂಟೀನ್‌ನನ್ನು ವೀಣಾ ನಡೆಸುತ್ತಿದ್ದಾರೆ. ವೀಣಾ ಕಾರ್ಯವನ್ನು ಮೆಚ್ಚಿ ವಿವಿಎಸ್ ಲಕ್ಷ್ಮಣ್ ಟ್ವೀಟ್ ಮಾಡಿದ್ದಾರೆ. ಜೀವನದಲ್ಲಿ ಎಷ್ಟೇ ಕಷ್ಟ ಬಂದರೂ ಬಲಶಾಲಿಯಾಗಿರು. ನಿಮ್ಮ ಬದುಕು ನಮಗೆ ಸ್ಫೂರ್ತಿದಾಯಕ ಎಂದು ಲಕ್ಷ್ಮಣ್ ಟ್ವೀಟ್ ಮಾಡಿದ್ದಾರೆ.

ಮೊದಲು ಸಣ್ಣದಾಗಿ ಜೆಪಿ ನಗರದಲ್ಲಿ ಶುರು ಮಾಡಿದ್ವಿ. ಮಧುರೈ ಕಡೆ ಕರಿದೋಸೆ ಅನ್ನೋದು ಫೇಮಸ್. ಬೆಂಗಳೂರಲ್ಲಿ ಎಲ್ಲೂ ಕರಿದೋಸೆ ಸಿಗ್ತಾ ಇರಲಿಲ್ಲ. ಛಲ ಬಿಡದೆ ಎದ್ದು ನಿಂತ್ರೆ ಖಂಡಿತಾ ಸಕ್ಸಸ್ ಆಗುತ್ತೆ. ನಾನು ಬಾಲ್ಯದಿಂದಲೂ ಕ್ರಿಕೆಟ್ ನೋಡ್ತಿದ್ದೆ. ಲಕ್ಷ್ಮಣ್ ಟ್ವೀಟ್ ಮಾಡಿರೋದು ಖುಷಿ ಕೊಟ್ಟಿದೆ. ಲಕ್ಷ್ಮಣ್ ವೆರೆಗೂ ತಲುಪಿದ್ದು ಹೇಗೆ ಅನ್ನೋದೇ ಗೊತ್ತಿಲ್ಲ. ನೀವು ಹೇಳಿದಾಗಲೇ ಟ್ವೀಟ್ ಬಗ್ಗೆ ಗೊತ್ತಾಗ್ತಿರೋದು ಎಂದು ವೀಣಾ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಕುಡಿದ ಮತ್ತಿನಲ್ಲಿ ಈಜಲು ತೆರಳಿದ ಯುವಕ: ಬ್ರಿಡ್ಜ್‌ ಕಮ್‌ ಬ್ಯಾರೇಜ್‌ನಲ್ಲಿ ಜಲಸಮಾಧಿ

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more