ಮತ್ತೆ ಕಲಬುರಗಿ ಮಹಾನಗರ ಪಾಲಿಕೆ ನಿರ್ಲಕ್ಷ:  ಮಕ್ಕಳ ಶಾಲಾ ವಾಹನಕ್ಕೆ ಕರೆಂಟ್ ಶಾಕ್, ಮಹಿಳೆ ಸ್ಥಿತಿ ಗಂಭೀರ

ಮತ್ತೆ ಕಲಬುರಗಿ ಮಹಾನಗರ ಪಾಲಿಕೆ ನಿರ್ಲಕ್ಷ: ಮಕ್ಕಳ ಶಾಲಾ ವಾಹನಕ್ಕೆ ಕರೆಂಟ್ ಶಾಕ್, ಮಹಿಳೆ ಸ್ಥಿತಿ ಗಂಭೀರ

Published : Dec 24, 2024, 01:58 PM IST

ಕರೆಂಟ್ ಶಾಕ್ ನಿಂದ ಸ್ಥಳದಲ್ಲೇ ಮಹಿಳೆ ಕುಸಿದು ಬಿದ್ದಿದ್ದಾಳೆ. ಮಹಿಳೆಯ ಹೊಟ್ಟೆ, ಕಾಲು ಕೈ ಸುಟ್ಟು ತೀವ್ರತರವಾದ ಗಾಯಗಳಾಗಿವೆ. ಗಾಬರಿಯಿಂದ ಚೀರಾಡುತ್ತಿದ್ದ ಶಾಲಾ ಮಕ್ಕಳನ್ನು ಸ್ಥಳಿಯರು ರಕ್ಷಿಸಿದ್ದಾರೆ. ಕರೆಂಟ್ ಶಾಕ್ ನಿಂದ ಗಂಭಿರವಾಗಿ ಗಾಯಗೊಂಡ ಮಹಿಳೆ ಭಾಗ್ಯಶ್ರೀಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. 
 

ಕಲಬುರಗಿ(ಡಿ.24):  ಮಹಾನಗರ ಪಾಲಿಕೆಯಿಂದ ಮತ್ತೊಂದು ನಿರ್ಲಕ್ಷಕ್ಕೆ ವಿಶೇಷ ಮಕ್ಕಳ ಶಾಲಾ ವಾಹನಕ್ಕೆ ಕರೆಂಟ್ ತಾಗಿ ಓರ್ಹ ಮಹಿಳೆಯ ಮಹಿಳೆ ಸ್ಥಿತಿ ಗಂಭೀರವಾದ ಘಟನೆ ನಗರದಲ್ಲಿ ನಡೆದಿದೆ. ದುರ್ಘಟನೆಯಲ್ಲಿ 11 ಶಾಲಾ ವಿದ್ಯಾರ್ಥಿಗಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.  ಕಲಬುರಗಿ ನಗರದ ಮೋಹನ್ ಲಾಡ್ಜ್ ಸಮೀಪದ ಬೀದಿ ದೀಪದ ಬಳಿ ಘಟನೆ ಸಂಭವಿಸಿದೆ. 

ರಸ್ತೆ ಬದಿ ನಿಂತ ಶಾಲಾ ವಾಹನಕ್ಕೆ ವಿದ್ಯುತ್ ತಂತಿ ತಗುಲಿದೆ. ಆದ್ರೆ ಟಯರಗಳ ಕಾರಣ ಬಸ್ ನಲ್ಲಿದ್ದ ಮಕ್ಕಳಿಗೆ ಕರೆಂಟ್ ಶಾಕ್ ಅನುಭವ ಆಗಿರಲಿಲ್ಲ. ಮಹಿಳೆಯೊಬ್ಬರು ತನ್ನ ಮಗುವನ್ನು ಬಸ್ ನಲ್ಲಿ ಹತ್ತಿಸಿ ಬಸ್ ಗೆ ಕೈ ತಾಕಿಸಿ ನಿಂತಾಗ ಮಹಿಳೆಗೆ ಕರೆಂಟ್ ಶಾಕ್ ಹೊಡೆದಿದೆ.  ಮಹಿಳೆ ಬಸ್ ಗೆ ಟಚ್ ಮಾಡುತ್ತಿದ್ದಂತೆಯೇ ಗ್ರೌಂಡ್ ಅರ್ಥಿಂಗ್ ಆಗಿ ಕರೆಂಟ್ ಶಾಕ್ ಹೊಡೆದಿದೆ. 

ನೌಕರಿಗೆ ಹೋದ ಹೆಂಡತಿಯ ನಡವಳಿಕೆ ಬದಲಾಯ್ತು: ಪತ್ನಿ ಬಗ್ಗೆ ಕನಸು ಕಂಡವನು ನೇಣಿಗೆ ಶರಣಾದ!

ಕರೆಂಟ್ ಶಾಕ್ ನಿಂದ ಸ್ಥಳದಲ್ಲೇ ಮಹಿಳೆ ಕುಸಿದು ಬಿದ್ದಿದ್ದಾಳೆ. ಮಹಿಳೆಯ ಹೊಟ್ಟೆ, ಕಾಲು ಕೈ ಸುಟ್ಟು ತೀವ್ರತರವಾದ ಗಾಯಗಳಾಗಿವೆ. ಗಾಬರಿಯಿಂದ ಚೀರಾಡುತ್ತಿದ್ದ ಶಾಲಾ ಮಕ್ಕಳನ್ನು ಸ್ಥಳಿಯರು ರಕ್ಷಿಸಿದ್ದಾರೆ. ಕರೆಂಟ್ ಶಾಕ್ ನಿಂದ ಗಂಭಿರವಾಗಿ ಗಾಯಗೊಂಡ ಮಹಿಳೆ ಭಾಗ್ಯಶ್ರೀ ಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. 

ಘಟನಾ ಸ್ಥಳಕ್ಕೆ ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ್, ನಗರ ಪೊಲೀಸ್ ಕಮೀಷನರ್ ಡಾ.ಶರಣಪ್ಪ ಎಸ್.ಡಿ ಭೇಟಿ ಪರಿಶೀಲನೆ ನಡೆಸಿದ್ದಾರೆ.  ಇದೇ ಮಾದರಿಯ ಘಟನೆಯಿಂದ ಬಸ್ ನಿಲ್ದಾಣದ ಬಳಿ ಶಾಲಾ ಬಾಲಕನೊಬ್ಬ ಮೃತಪಟ್ಟಿದ್ದ ಘಟನೆ ಇನ್ನೂ ಹಸಿರಾಗಿರುವಾಗಲೇ ಮತ್ತೊಂದು ದುರ್ಘಟನೆ ನಡೆದಿದೆ.  ಮಹಾನಗರ ಪಾಲಿಕೆಯ ನಿರ್ಲಕ್ಷತನಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಕಲಬುರಗಿಯ ಕೇಂದ್ರ ಬಸ್ ನಿಲ್ದಾಣದ ರಸ್ತೆ ದಾಟುತ್ತಿದ್ದ 14 ವರ್ಷದ ಬಾಲಕ ಕರೆಂಟ್ ತಗುಲಿ ಸಾವಿಗೀಡಾಗಿದ್ದ, ಈ ಘಟನೆಯ ನಂತರವೂ ಬೀದಿ ದೀಪಗಳ ಸುತ್ತ ಕರೆಂಟ್ ವಯರಗಳು ಹರಿದು ಬಿದ್ದಿರುವ ಬಗ್ಗೆ ಸುವರ್ಣ ನ್ಯೂಸ್ ವರದಿ ಮಾಡಿತ್ತು. ಮಹಾನಗರ ಪಾಲಿಕೆ ಎಚ್ಚೆತ್ತುಕೊಳ್ಳದಿದ್ರೆ ಮತ್ತಷ್ಟು ಬಲಿ ಸಾಧ್ಯತೆ ಎಂದು ಸುವರ್ಣ ನ್ಯೂಸ್ ಎಚ್ಚರಿಸಿತ್ತು. ಆದರೂ ಮಹಾನಗರ ಪಾಲಿಕೆ ಎಚ್ಚರಗೊಂಡಿಲ್ಲ. ಇದರ ಪರಿಣಾಮ ಇಂದು ಕರೆಂಟ್ ತಗುಲಿ ಮಹಿಳೆಯ ಸ್ಥಿತಿ ಗಂಭೀರವಾಗಿದೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more