ಬೆಳಗಾವಿ: ವೈನ್‌ ಶಾಪ್‌ ಮಾಲೀಕನ‌ ಬೆವರಿಳಿಸಿ, ಅಂಗಡಿ ಬಂದ್‌ ಮಾಡಿಸಿದ ನಾರಿಮಣಿಯರು..!

ಬೆಳಗಾವಿ: ವೈನ್‌ ಶಾಪ್‌ ಮಾಲೀಕನ‌ ಬೆವರಿಳಿಸಿ, ಅಂಗಡಿ ಬಂದ್‌ ಮಾಡಿಸಿದ ನಾರಿಮಣಿಯರು..!

Published : Jun 26, 2023, 03:10 PM IST

ಬೆಳ್ಳಂಬೆಳಗ್ಗೆ ವೈನ್ಸ್ ಮಾಲೀಕನ‌ ಬೆವರನ್ನು ನಾರಿಮಣಿಯರು ಇಳಿಸಿದ್ದಾರೆ. ಅಲ್ಲದೇ ಊರ ಮದ್ಯದಲ್ಲಿದ್ದ ವೈನ್ಸ್‌ಗೆ ಬೀಗವನ್ನು ಮಹಿಳೆಯರು ಜಡಿದಿದ್ದಾರೆ. 
 

ಚಿಕ್ಕೋಡಿ: ಊರ ಮದ್ಯದಲ್ಲಿದ್ದ ವೈನ್ಸ್‌ ಶಾಪ್‌ಗೆ ಮಹಿಳೆಯರು ಬೀಗ ಜಡಿದಿದ್ದಾರೆ. ಬೆಳ್ಳಂಬೆಳಗ್ಗೆ ವೈನ್ಸ್ ಮಾಲೀಕನ‌ ಬೆವರಿಳಿಸಿ ನಾರಿಮಣಿಯರು ಶಾಪ್‌ಗೆ ಬೀಗ ಹಾಕಿದ್ದಾರೆ. ಈ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ‌ ನಂದಿಕುರಳಿ ಗ್ರಾಮದಲ್ಲಿ  ನಡೆದಿದೆ. ಗ್ರಾಮದ ಮಧ್ಯದಲ್ಲಿರೋ ಶ್ರೀ ಲಕ್ಷ್ಮಿ ವೈನ್ಸ್‌ ವಿರುದ್ಧ ಮಹಿಳೆಯರು ಆಕ್ರೋಶವನ್ನು ಹೊರಹಾಕಿದ್ದಾರೆ. ಮದ್ಯಪಾನ ಮಾಡಿ ಕಾಲೇಜು ವಿದ್ಯಾರ್ಥಿನಿಯರಿಗೆ ಹಾಗೂ ಮಹಿಳೆಯರಿಗೆ ಕುಡುಕರು ಚುಡಾಯಿಸುತ್ತಿದ್ದಾರೆ ಎಂದು ಮಹಿಳೆಯರು ಆರೋಪಿಸಿದ್ದಾರೆ. ಅಲ್ಲದೇ ಕಂಠಪೂರ್ತಿ ಕುಡಿದು ಬಸ್ ನಿಲ್ದಾಣದ ಬಳಿ ದಾಂಧಲೆ ಮಾಡ್ತಾರೆ ಎಂದು ಹೇಳಲಾಗ್ತಿದೆ. ನಮ್ಮ ಗಂಡದಿರು ಬೆಳಂಬೆಳಗ್ಗೆ ಕುಡಿದು ಕೆಲಸಕ್ಕೂ ಹೋಗದೇ , ನಮ್ಮ ಹೊಟ್ಟೆಗೆ ತಣ್ಣೀರು ಬಟ್ಟೆನೇ ಗತಿಯಾಗಿದೆ.ಅಷ್ಟೇ ಅಲ್ಲದೇ ಶ್ರೀ ಲಕ್ಷ್ಮೀ ವೈನ್ಸ್‌ನ ಕೂದಲಳತೆ ದೂರದಲ್ಲಿಯೇ ಸರ್ಕಾರಿ ಶಾಲೆ ಇದೆ. ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಇದನ್ನೂ ವೀಕ್ಷಿಸಿ: ಕಾಂಗ್ರೆಸ್‌ ಗಾಳಿ ನಮ್ಮ ಮೇಲೂ ಬಿದ್ದಿದೆ, ಹಾಗಾಗಿ ಬಿಜೆಪಿಯಲ್ಲಿ ಶಿಸ್ತು ಕಡಿಮೆಯಾಗಿದೆ: ಈಶ್ವರಪ್ಪ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more