ಕಾಲುವೆಯಲ್ಲಿ ಬೆಳೆದು ನಿಂತ ಗಿಡಗಳು.. ರೈತರಿಗೆ ಸಂಕಷ್ಟ: ಯಾದಗಿರಿ ಅನ್ನದಾತ ಕಂಗಾಲು

ಕಾಲುವೆಯಲ್ಲಿ ಬೆಳೆದು ನಿಂತ ಗಿಡಗಳು.. ರೈತರಿಗೆ ಸಂಕಷ್ಟ: ಯಾದಗಿರಿ ಅನ್ನದಾತ ಕಂಗಾಲು

Published : Oct 26, 2023, 11:08 AM IST

ಬರಾಗಲದ ಬರಡಿಸಿಲು ಬಡಿದು ರೈತರು ಮೊದಲೇ ಕಂಗೆಟ್ಟಿದ್ದಾರೆ. ಈ ಮಧ್ಯೆ ರೈತರ ಜಮೀನುಗಳಿಗೆ ನೀರು ಹರಿಸಲು ಕಾಲಿವೆ ನಿರ್ಮಿಸಿದ್ರೂ ಉಪಯೋಗವಾಗಿಲ್ಲ. ಕಾಲುವೆ ನಿರ್ಮಿಸಿ ದಶಕಗಳೇ ಕಳೆದ್ರೂ ರೈತರ ಜಮೀನಿಗೆ ನೀರು ಹರಿದಿಲ್ಲ. 
 

ಮುಂಗಾರು ಮುನಿಸಿನಿಂದಾಗಿ ಬರಗಾಲ ಆವರಿಸಿದ್ದು, ರೈತರ(Farmer) ಬದುಕು ದುಸ್ತರವಾಗಿದೆ. ಲೋಡ್ ಶೆಡ್ಡಿಂಗ್ ಅನ್ನದಾತರ ಗಾಯದ ಮೇಲೆ ಬರೆ ಎಳೆದಿದೆ. ಇನ್ನು ಕಾಲುವೆ ನಿರ್ಮಿಸಿದ್ರೂ ಜಮೀನುಗಳಿಗೆ ನೀರು ಹರಿಯದೇ ಯಾದಗಿರಿಯ(Yadagiri) ರೈತರು ಕಂಗೆಟ್ಟಿದ್ದಾರೆ. ಬಸವಸಾಗರ ಜಲಾಶಯದ ನೀರನ್ನ ರೈತರ ಜಮೀನುಗಳಿಗೆ ಹರಿಸಲು ದಶಕಗಳ ಹಿಂದೆಯೇ ಕೋಟ್ಯಾಂತರ ರೂಪಾಯಿ ವೆಚ್ಚ ಮಾಡಿ ಕಾಲುವೆ ನಿರ್ಮಿಸಲಾಗಿದೆ. ಆದ್ರೆ ಸೂಕ್ತ ನಿರ್ವಹಣೆ ಇಲ್ಲದೇ ಕಾಲುವೆಗಳಲ್ಲಿ ಗಿಡಗಳು ಬೆಳೆದು ನಿಂತಿದ್ದು, ಕೊನೆ ಭಾಗದ ರೈತರ ಜಮೀನುಗಳಿಗೆ ನೀರು(Water) ತಲುಪುತ್ತಿಲ್ಲ. ಇದರಿಂದಾಗಿ ಹತ್ತಾರು ಗ್ರಾಮದ ಬೆಳೆ ನಾಶವಾಗುವ ಆತಂಕ ಎದುರಾಗಿದೆ. ವಡಗೇರಾದ ವಿತರಣಾ ಕಾಲುವೆಯ 21ರ ಮೂಲಕ ಬಿಳ್ಹಾರ, ಕೋನಳ್ಳಿ, ತುಮಕೂರು ಹಾಗೂ ಕೊಂಕಲ್ ಗ್ರಾಮದ ಉಪ ಕಾಲುವೆಗಳಿಗೆ ನೀರು ಬರಬೇಕಿತ್ತು. ಆದ್ರೆ, ಕಾಲುವೆ ತುಂಬೆಲ್ಲಾ ಜಾಲಿಗಿಡ ಬೆಳೆದುಕೊಂಡಿದ್ದು, ಹೂಳು ತುಂಬಿದೆ. ಇದಕ್ಕೆ  ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯವೇ ಕಾರಣ ಎಂದು ಅನ್ನದಾತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕಾಲುವೆಗಳು ದುಸ್ಥಿತಿಗೆ ತಲುಪಿವೆ. ಶ್ರಮದ ಬೆಳೆ ಉಳಿಸಿಕೊಳ್ಳಲು ಅನ್ನದಾತರು ಪರದಾಡುತ್ತಿದ್ದಾರೆ. ಕುಂಭಕರ್ಣ ನಿದ್ರೆಗೆ ಜಾರಿರುವ ಅಧಿಕಾರಿಗಳು ಇನ್ನಾದ್ರೂ ಎಚ್ಚೆತ್ತು ಕಾಲುವೆಗಳಿಗೆ ಕಾಯಕಲ್ಪ ನೀಡಬೇಕಿದೆ.

ಇದನ್ನೂ ವೀಕ್ಷಿಸಿ:  ವಿಜಯಪುರ ಆಗಲಿದ್ಯಾ ಬಸವೇಶ್ವರ ಜಿಲ್ಲೆ? ಅಭಿಪ್ರಾಯ ಸಂಗ್ರಹಕ್ಕೆ ಮುಂದಾದ ಜಿಲ್ಲಾಡಳಿತ..!

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
Read more