ಮಗಳು ಎರಡೆರಡು ಬಾರಿ ಓಡಿ ಹೋಗಿದ್ದರೂ ಅಂತರ್ಜಾತಿ ಪ್ರೀತಿಗೆ ವಿರೋಧ; ಯುವಕನ ಮೇಲೆ ಹಲ್ಲೆ!

ಮಗಳು ಎರಡೆರಡು ಬಾರಿ ಓಡಿ ಹೋಗಿದ್ದರೂ ಅಂತರ್ಜಾತಿ ಪ್ರೀತಿಗೆ ವಿರೋಧ; ಯುವಕನ ಮೇಲೆ ಹಲ್ಲೆ!

Published : Dec 17, 2024, 05:27 PM IST

ಯಾದಗಿರಿ ಜಿಲ್ಲೆಯಲ್ಲಿ ಅಂತರ್ಜಾತಿ ಪ್ರೇಮಿಗಳಿಗೆ ಕುಟುಂಬದಿಂದಲೇ ವಿರೋಧ ವ್ಯಕ್ತವಾಗಿದೆ. ಯುವತಿಯ ಕುಟುಂಬಸ್ಥರು ಯುವಕನ ಮೇಲೆ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ಬಂದಳ್ಳಿ ಗ್ರಾಮದಲ್ಲಿ ನಡೆದಿದ್ದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾದಗಿರಿ (ಡಿ.17): ಭಾರತದ ಪ್ರತಿಯೊಬ್ಬ ಪ್ರಜೆಯೂ ಸಮಾನರು ಎಂಬಂತೆ ಸಮಾತನೆಗಾಗಿ ರಚಿಸಲಾದ ಸಂವಿಧಾನ ಜಾರಿಗೊಂಡು 75 ವರ್ಷಗಳು ಕಳೆದರೂ ಇನ್ನೂ ಸಮಾನತೆ ಎಂಬ ಭಾವನೆಯೇ ಬಂದಿಲ್ಲ. ಇಲ್ಲಿ ಅಂತರ್ಜಾತಿಯ ಯುವಕ-ಯುವತಿ ಪರಸ್ಪರ ಪ್ರೀತಿ ಮಾಡಿದ್ದಕ್ಕೆ ಅವರ ಕುಟುಂಬದಿಂದ ವಿರೋಧ ವ್ಯಕ್ತವಾಗಿದ್ದು, ಜಾತಿನಿಂದನೆ ಮಾಡಿ ಹಲ್ಲೆ ಮಾಡಿರುವ ಘಟನೆ ಹೈದರಾಬಾದ್ ಕರ್ನಾಟಕದ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.

ಯಾದಗಿರಿಯ ಬಂದಳ್ಳಿ ಗ್ರಾಮದಲ್ಲಿ  ನಡೆದಿದೆ. ಅಂತರ್​ಜಾತಿ ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿ ಯುವಕನ ಮೇಲೆ ಯುವತಿ ಪೋಷಕರಿಂದ ಹಲ್ಲೆ ಮಾಡಲಾಗಿದೆ. ದೊಣ್ಣೆ ಹಾಗೂ ಕಬ್ಬಿಣದ ರಾಡ್‌ಗಳನ್ನು ಹಿಡಿದು ಯುವಕನನ್ನು ಥಳಿಸಿ ಕೊಲೆ ಮಾಡುವುದಕ್ಕೆ ಯತ್ನಿಸಲಾಗಿದೆ. ಇನ್ನು ಜನರು ಗುಂಪು ಸೇರಿದ್ದರಿಂದ ಯುವಕನನ್ನು ಬಿಟ್ಟು ಪರಾರಿ ಆಗಿದ್ದಾರೆ. ಗಂಭೀರ ಗಾಯಗೊಂಡು ಬಳಲುತ್ತಿದ್ದ ಯುವಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರಿಂದ ಇದೀಗ ಚೇತರಿಸಿಕೊಂಡಿದ್ದಾನೆ.

ಯಾದಗಿರಿ ಜಿಲ್ಲೆಯ ಬಂದಳ್ಳಿ ಗ್ರಾಮದವರಾದ ಸಂಗೀತಾ ಹಾಗೂ ನಿಂಗಪ್ಪ ಎನ್ನುವವರು ಕಳೆದ ಮೂರು ವರ್ಷಗಳಿಂದ ಪರಸ್ಪರ ಪ್ರೀತಿ ಮಾಡುತ್ತಿದ್ದಾರೆ. ಆದರೆ, ಕಳೆದ ಒಂದು ತಿಂಗಳ ಹಿಂದೆ ಮನೆ ಬಿಟ್ಟು ಓಡಿ ಹೋಗಿ ಗುಜರಾತ್‌ನಲ್ಲಿ ನೆಲೆಗೊಂಡಿದ್ದರು. ಆದರೆ, ಎರಡೂ ಕುಟುಂಬದವರು ನ್ಯಾಯ ಪಂಚಾಯಿತಿ ಮಾಡಿ ಓಡಿ ಹೋಗಿದ್ದ ಯುವಕ-ಯುವತಿಯನ್ನು ವಾಪಸ್ ಕರೆಸಿಕೊಂಡಿದ್ದರು. ಇದಾದ ನಂತರ ಪ್ರೀತಿ ಮಾಡಿದ ಯುವತಿ ಸಂಗೀತಾ ಪುನಃ ಮತ್ತೊಮ್ಮೆ ನಿಂಗಪ್ಪನೊಂದಿಗೆ ಓಡಿ ಹೋಗಿದ್ದಾಳೆ.

ಇದರಿಂದ ಸಂಗೀತಾ ಕುಟುಂಬ ಸದಸ್ಯರಿಂದ ಯುವಕ ನಿಂಗಪ್ಪನ ಮೇಲೆ ಹಲ್ಲೆ ಮಾಡಲಾಗಿದೆ. ನಿಂಗಪ್ಪನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ, ಜಾತಿ ನಿಂದನೆ ಮಾಡಿದ್ದಾರೆ ಎಂದು ನಿಂಗಪ್ಪನ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಯಾದಗಿರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಜಾತಿ ನಿಂದನೆ ಕೇಸ್ ದಾಖಲಾಗಿದೆ.

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more