ಮಗಳು ಎರಡೆರಡು ಬಾರಿ ಓಡಿ ಹೋಗಿದ್ದರೂ ಅಂತರ್ಜಾತಿ ಪ್ರೀತಿಗೆ ವಿರೋಧ; ಯುವಕನ ಮೇಲೆ ಹಲ್ಲೆ!

ಮಗಳು ಎರಡೆರಡು ಬಾರಿ ಓಡಿ ಹೋಗಿದ್ದರೂ ಅಂತರ್ಜಾತಿ ಪ್ರೀತಿಗೆ ವಿರೋಧ; ಯುವಕನ ಮೇಲೆ ಹಲ್ಲೆ!

Published : Dec 17, 2024, 05:27 PM IST

ಯಾದಗಿರಿ ಜಿಲ್ಲೆಯಲ್ಲಿ ಅಂತರ್ಜಾತಿ ಪ್ರೇಮಿಗಳಿಗೆ ಕುಟುಂಬದಿಂದಲೇ ವಿರೋಧ ವ್ಯಕ್ತವಾಗಿದೆ. ಯುವತಿಯ ಕುಟುಂಬಸ್ಥರು ಯುವಕನ ಮೇಲೆ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ಬಂದಳ್ಳಿ ಗ್ರಾಮದಲ್ಲಿ ನಡೆದಿದ್ದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾದಗಿರಿ (ಡಿ.17): ಭಾರತದ ಪ್ರತಿಯೊಬ್ಬ ಪ್ರಜೆಯೂ ಸಮಾನರು ಎಂಬಂತೆ ಸಮಾತನೆಗಾಗಿ ರಚಿಸಲಾದ ಸಂವಿಧಾನ ಜಾರಿಗೊಂಡು 75 ವರ್ಷಗಳು ಕಳೆದರೂ ಇನ್ನೂ ಸಮಾನತೆ ಎಂಬ ಭಾವನೆಯೇ ಬಂದಿಲ್ಲ. ಇಲ್ಲಿ ಅಂತರ್ಜಾತಿಯ ಯುವಕ-ಯುವತಿ ಪರಸ್ಪರ ಪ್ರೀತಿ ಮಾಡಿದ್ದಕ್ಕೆ ಅವರ ಕುಟುಂಬದಿಂದ ವಿರೋಧ ವ್ಯಕ್ತವಾಗಿದ್ದು, ಜಾತಿನಿಂದನೆ ಮಾಡಿ ಹಲ್ಲೆ ಮಾಡಿರುವ ಘಟನೆ ಹೈದರಾಬಾದ್ ಕರ್ನಾಟಕದ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.

ಯಾದಗಿರಿಯ ಬಂದಳ್ಳಿ ಗ್ರಾಮದಲ್ಲಿ  ನಡೆದಿದೆ. ಅಂತರ್​ಜಾತಿ ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿ ಯುವಕನ ಮೇಲೆ ಯುವತಿ ಪೋಷಕರಿಂದ ಹಲ್ಲೆ ಮಾಡಲಾಗಿದೆ. ದೊಣ್ಣೆ ಹಾಗೂ ಕಬ್ಬಿಣದ ರಾಡ್‌ಗಳನ್ನು ಹಿಡಿದು ಯುವಕನನ್ನು ಥಳಿಸಿ ಕೊಲೆ ಮಾಡುವುದಕ್ಕೆ ಯತ್ನಿಸಲಾಗಿದೆ. ಇನ್ನು ಜನರು ಗುಂಪು ಸೇರಿದ್ದರಿಂದ ಯುವಕನನ್ನು ಬಿಟ್ಟು ಪರಾರಿ ಆಗಿದ್ದಾರೆ. ಗಂಭೀರ ಗಾಯಗೊಂಡು ಬಳಲುತ್ತಿದ್ದ ಯುವಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರಿಂದ ಇದೀಗ ಚೇತರಿಸಿಕೊಂಡಿದ್ದಾನೆ.

ಯಾದಗಿರಿ ಜಿಲ್ಲೆಯ ಬಂದಳ್ಳಿ ಗ್ರಾಮದವರಾದ ಸಂಗೀತಾ ಹಾಗೂ ನಿಂಗಪ್ಪ ಎನ್ನುವವರು ಕಳೆದ ಮೂರು ವರ್ಷಗಳಿಂದ ಪರಸ್ಪರ ಪ್ರೀತಿ ಮಾಡುತ್ತಿದ್ದಾರೆ. ಆದರೆ, ಕಳೆದ ಒಂದು ತಿಂಗಳ ಹಿಂದೆ ಮನೆ ಬಿಟ್ಟು ಓಡಿ ಹೋಗಿ ಗುಜರಾತ್‌ನಲ್ಲಿ ನೆಲೆಗೊಂಡಿದ್ದರು. ಆದರೆ, ಎರಡೂ ಕುಟುಂಬದವರು ನ್ಯಾಯ ಪಂಚಾಯಿತಿ ಮಾಡಿ ಓಡಿ ಹೋಗಿದ್ದ ಯುವಕ-ಯುವತಿಯನ್ನು ವಾಪಸ್ ಕರೆಸಿಕೊಂಡಿದ್ದರು. ಇದಾದ ನಂತರ ಪ್ರೀತಿ ಮಾಡಿದ ಯುವತಿ ಸಂಗೀತಾ ಪುನಃ ಮತ್ತೊಮ್ಮೆ ನಿಂಗಪ್ಪನೊಂದಿಗೆ ಓಡಿ ಹೋಗಿದ್ದಾಳೆ.

ಇದರಿಂದ ಸಂಗೀತಾ ಕುಟುಂಬ ಸದಸ್ಯರಿಂದ ಯುವಕ ನಿಂಗಪ್ಪನ ಮೇಲೆ ಹಲ್ಲೆ ಮಾಡಲಾಗಿದೆ. ನಿಂಗಪ್ಪನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ, ಜಾತಿ ನಿಂದನೆ ಮಾಡಿದ್ದಾರೆ ಎಂದು ನಿಂಗಪ್ಪನ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಯಾದಗಿರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಜಾತಿ ನಿಂದನೆ ಕೇಸ್ ದಾಖಲಾಗಿದೆ.

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
Read more