ಯಕ್ಷಗಾನ ನಡೆಯುತ್ತಿರುವಾಗಲೇ ವೇದಿಕೆಯಲ್ಲಿ ಕುಸಿದುಬಿದ್ದ ಕಲಾವಿದ

ಯಕ್ಷಗಾನ ನಡೆಯುತ್ತಿರುವಾಗಲೇ ವೇದಿಕೆಯಲ್ಲಿ ಕುಸಿದುಬಿದ್ದ ಕಲಾವಿದ

Published : Aug 10, 2021, 04:30 PM ISTUpdated : Aug 10, 2021, 05:19 PM IST

ವೇದಿಕೆಯಲ್ಲಿಯೇ ಯಕ್ಷಗಾನ ಕಲಾವಿದ ಕುಸಿದು ಬಿದ್ದಿರುವ ಘಟನೆ ನಡೆದಿದೆ. ಮೂಡುಬಿದಿರೆಯ ಅಲಂಗಾರು ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಸಭಾಂಗಣದಲ್ಲಿ ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಘಟನೆ ನಡೆದಿದೆ.

ಮಂಗಳೂರು(ಆ.10): ವೇದಿಕೆಯಲ್ಲಿಯೇ ಯಕ್ಷಗಾನ ಕಲಾವಿದ ಕುಸಿದು ಬಿದ್ದಿರುವ ಘಟನೆ ನಡೆದಿದೆ. ಮೂಡುಬಿದಿರೆಯ ಅಲಂಗಾರು ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಸಭಾಂಗಣದಲ್ಲಿ ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಘಟನೆ ನಡೆದಿದೆ. ಯಕ್ಷಲೋಕದಲ್ಲಿ ಪ್ರಸಿದ್ಧ ಕಲಾವಿದ ಮೋಹನ್ ಕುಮಾರ್ ಅಮ್ಮುಂಜೆ ಕರ್ಣಪರ್ವದಲ್ಲಿ ಅರ್ಜುನ ಪಾತ್ರಧಾರಿಯಾಗಿ ವೇದಿಕೆಯಲ್ಲಿದ್ದಾಗ ಘಟನೆ ಸಂಭವಿಸಿದೆ.

ಯಕ್ಷಗಾನ ಮಾಡುವಾಗ ಕಲಾವಿದರಿಗೆ ದೈವ ಆವಾಹನೆ, ವಿಡಿಯೋ ವೈರಲ್..! 

ಅನ್‌ಲಾಕ್‌ ಪ್ರಕ್ರಿಯೆ ಆರಂಭವಾದ ನಂತರ ನಿಧಾನವಾಗಿ ಯಕ್ಷಗಾನ ಪ್ರದರ್ಶನಗಳು ಆರಂಭಗೊಳ್ಳುತ್ತಿದ್ದು ಇದೀಗ ಯಕ್ಷಗಾನ ನಡೆಯುವಾಗಲೇ ಕಲಾವಿದ ಕುಸಿದುಬಿದ್ದ ವಿಡಿಯೋ ವೈರಲ್ ಆಗಿದೆ. ವೇದಿಕೆಯಲ್ಲಿದ್ದವರೂ ಈ ಅನಿರೀಕ್ಷಿತ ಘಟನೆಯಿಂದ ಹೆದರಿಕೊಂಡಿದ್ದಾರೆ. ಆದರೆ ಅಮ್ಮುಂಜೆ ಮೋಹನ ಅವರು ಕುಸಿದು ಬಿದ್ದಿರುವ ವಿಡಿಯೋ, ಎಲ್ಲೆಡೆ ವೈರಲ್ ಆಗುತ್ತಿದೆ. ಅಮ್ಮುಂಜೆಯವರ ಅಪಾರ ಸಂಖ್ಯೆಯ ಅಭಿಮಾನಿಗಳು,ಈ ದೃಶ್ಯ ಕಂಡು ಗಾಬರಿ ಗೊಂಡಿದ್ದರು. ಇದೀಗ ಸ್ವತಹ ಅಮ್ಮುಂಜೆ ಮೋಹನ ಅವರು, ಆಡಿಯೋ ಒಂದನ್ನು ಹರಿಯಬಿಟ್ಟಿದ್ದು. ನನಗೆ ಯಾವುದೇ ತೊಂದರೆಯಾಗಿಲ್ಲ, ನಾನು ಆರಾಮಾಗಿದ್ದೇನೆ. 5 ತಿಂಗಳ ಬಳಿಕ ವೇಷ ಮಾಡಿದ್ದರಿಂದ, ಕಣ್ಣಿಗೆ ಬೆಳಕು ಹೊಡೆಯುತ್ತಿದ್ದಂತೆ ತಲೆಸುತ್ತು ಬಂದಂತಾಯಿತು. ವೈದ್ಯರು ಆರೋಗ್ಯದ ಪರೀಕ್ಷೆ ನಡೆಸಿದ್ದು, ಬಿಪಿ ಶುಗರ್ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿದ್ದಾರೆ, ಅಭಿಮಾನಿಗಳು ಗಾಬರಿಯಾಗುವುದು ಬೇಡ ಎಂದು ಹೇಳಿದ್ದಾರೆ.

ಪ್ರತಿದಿನ ಯಕ್ಷಗಾನ ಪ್ರದರ್ಶನ ನೀಡುವ ಕಲಾವಿದರು, ಕರೋನಾ ಲಾಕ್ಡೌನ್ ಆದನಂತರ, ಯಾವುದೇ ಪ್ರದರ್ಶನ ನೀಡಿರಲಿಲ್ಲ. ಇದೀಗ ಸೀಮಿತ ಪ್ರೇಕ್ಷಕರ ಮುಂದೆ, ಯೂಟ್ಯೂಬ್ ಪ್ರಸಾರಕ್ಕಾಗಿ ಯಕ್ಷಗಾನದ ದಾಖಲೀಕರಣ ಕೆಲವೆಡೆ ನಡೆಯುತ್ತಿದ್ದು, ಬಹಳ ಸಮಯದ ನಂತರ ಕಲಾವಿದರು ವೇಷ ಧರಿಸುತ್ತಿದ್ದಾರೆ.

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!