ಯಕ್ಷಗಾನ ನಡೆಯುತ್ತಿರುವಾಗಲೇ ವೇದಿಕೆಯಲ್ಲಿ ಕುಸಿದುಬಿದ್ದ ಕಲಾವಿದ

ಯಕ್ಷಗಾನ ನಡೆಯುತ್ತಿರುವಾಗಲೇ ವೇದಿಕೆಯಲ್ಲಿ ಕುಸಿದುಬಿದ್ದ ಕಲಾವಿದ

Published : Aug 10, 2021, 04:30 PM ISTUpdated : Aug 10, 2021, 05:19 PM IST

ವೇದಿಕೆಯಲ್ಲಿಯೇ ಯಕ್ಷಗಾನ ಕಲಾವಿದ ಕುಸಿದು ಬಿದ್ದಿರುವ ಘಟನೆ ನಡೆದಿದೆ. ಮೂಡುಬಿದಿರೆಯ ಅಲಂಗಾರು ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಸಭಾಂಗಣದಲ್ಲಿ ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಘಟನೆ ನಡೆದಿದೆ.

ಮಂಗಳೂರು(ಆ.10): ವೇದಿಕೆಯಲ್ಲಿಯೇ ಯಕ್ಷಗಾನ ಕಲಾವಿದ ಕುಸಿದು ಬಿದ್ದಿರುವ ಘಟನೆ ನಡೆದಿದೆ. ಮೂಡುಬಿದಿರೆಯ ಅಲಂಗಾರು ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಸಭಾಂಗಣದಲ್ಲಿ ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಘಟನೆ ನಡೆದಿದೆ. ಯಕ್ಷಲೋಕದಲ್ಲಿ ಪ್ರಸಿದ್ಧ ಕಲಾವಿದ ಮೋಹನ್ ಕುಮಾರ್ ಅಮ್ಮುಂಜೆ ಕರ್ಣಪರ್ವದಲ್ಲಿ ಅರ್ಜುನ ಪಾತ್ರಧಾರಿಯಾಗಿ ವೇದಿಕೆಯಲ್ಲಿದ್ದಾಗ ಘಟನೆ ಸಂಭವಿಸಿದೆ.

ಯಕ್ಷಗಾನ ಮಾಡುವಾಗ ಕಲಾವಿದರಿಗೆ ದೈವ ಆವಾಹನೆ, ವಿಡಿಯೋ ವೈರಲ್..! 

ಅನ್‌ಲಾಕ್‌ ಪ್ರಕ್ರಿಯೆ ಆರಂಭವಾದ ನಂತರ ನಿಧಾನವಾಗಿ ಯಕ್ಷಗಾನ ಪ್ರದರ್ಶನಗಳು ಆರಂಭಗೊಳ್ಳುತ್ತಿದ್ದು ಇದೀಗ ಯಕ್ಷಗಾನ ನಡೆಯುವಾಗಲೇ ಕಲಾವಿದ ಕುಸಿದುಬಿದ್ದ ವಿಡಿಯೋ ವೈರಲ್ ಆಗಿದೆ. ವೇದಿಕೆಯಲ್ಲಿದ್ದವರೂ ಈ ಅನಿರೀಕ್ಷಿತ ಘಟನೆಯಿಂದ ಹೆದರಿಕೊಂಡಿದ್ದಾರೆ. ಆದರೆ ಅಮ್ಮುಂಜೆ ಮೋಹನ ಅವರು ಕುಸಿದು ಬಿದ್ದಿರುವ ವಿಡಿಯೋ, ಎಲ್ಲೆಡೆ ವೈರಲ್ ಆಗುತ್ತಿದೆ. ಅಮ್ಮುಂಜೆಯವರ ಅಪಾರ ಸಂಖ್ಯೆಯ ಅಭಿಮಾನಿಗಳು,ಈ ದೃಶ್ಯ ಕಂಡು ಗಾಬರಿ ಗೊಂಡಿದ್ದರು. ಇದೀಗ ಸ್ವತಹ ಅಮ್ಮುಂಜೆ ಮೋಹನ ಅವರು, ಆಡಿಯೋ ಒಂದನ್ನು ಹರಿಯಬಿಟ್ಟಿದ್ದು. ನನಗೆ ಯಾವುದೇ ತೊಂದರೆಯಾಗಿಲ್ಲ, ನಾನು ಆರಾಮಾಗಿದ್ದೇನೆ. 5 ತಿಂಗಳ ಬಳಿಕ ವೇಷ ಮಾಡಿದ್ದರಿಂದ, ಕಣ್ಣಿಗೆ ಬೆಳಕು ಹೊಡೆಯುತ್ತಿದ್ದಂತೆ ತಲೆಸುತ್ತು ಬಂದಂತಾಯಿತು. ವೈದ್ಯರು ಆರೋಗ್ಯದ ಪರೀಕ್ಷೆ ನಡೆಸಿದ್ದು, ಬಿಪಿ ಶುಗರ್ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿದ್ದಾರೆ, ಅಭಿಮಾನಿಗಳು ಗಾಬರಿಯಾಗುವುದು ಬೇಡ ಎಂದು ಹೇಳಿದ್ದಾರೆ.

ಪ್ರತಿದಿನ ಯಕ್ಷಗಾನ ಪ್ರದರ್ಶನ ನೀಡುವ ಕಲಾವಿದರು, ಕರೋನಾ ಲಾಕ್ಡೌನ್ ಆದನಂತರ, ಯಾವುದೇ ಪ್ರದರ್ಶನ ನೀಡಿರಲಿಲ್ಲ. ಇದೀಗ ಸೀಮಿತ ಪ್ರೇಕ್ಷಕರ ಮುಂದೆ, ಯೂಟ್ಯೂಬ್ ಪ್ರಸಾರಕ್ಕಾಗಿ ಯಕ್ಷಗಾನದ ದಾಖಲೀಕರಣ ಕೆಲವೆಡೆ ನಡೆಯುತ್ತಿದ್ದು, ಬಹಳ ಸಮಯದ ನಂತರ ಕಲಾವಿದರು ವೇಷ ಧರಿಸುತ್ತಿದ್ದಾರೆ.

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್