ಯಕ್ಷಗಾನ ನಡೆಯುತ್ತಿರುವಾಗಲೇ ವೇದಿಕೆಯಲ್ಲಿ ಕುಸಿದುಬಿದ್ದ ಕಲಾವಿದ

ಯಕ್ಷಗಾನ ನಡೆಯುತ್ತಿರುವಾಗಲೇ ವೇದಿಕೆಯಲ್ಲಿ ಕುಸಿದುಬಿದ್ದ ಕಲಾವಿದ

Published : Aug 10, 2021, 04:30 PM ISTUpdated : Aug 10, 2021, 05:19 PM IST

ವೇದಿಕೆಯಲ್ಲಿಯೇ ಯಕ್ಷಗಾನ ಕಲಾವಿದ ಕುಸಿದು ಬಿದ್ದಿರುವ ಘಟನೆ ನಡೆದಿದೆ. ಮೂಡುಬಿದಿರೆಯ ಅಲಂಗಾರು ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಸಭಾಂಗಣದಲ್ಲಿ ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಘಟನೆ ನಡೆದಿದೆ.

ಮಂಗಳೂರು(ಆ.10): ವೇದಿಕೆಯಲ್ಲಿಯೇ ಯಕ್ಷಗಾನ ಕಲಾವಿದ ಕುಸಿದು ಬಿದ್ದಿರುವ ಘಟನೆ ನಡೆದಿದೆ. ಮೂಡುಬಿದಿರೆಯ ಅಲಂಗಾರು ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಸಭಾಂಗಣದಲ್ಲಿ ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಘಟನೆ ನಡೆದಿದೆ. ಯಕ್ಷಲೋಕದಲ್ಲಿ ಪ್ರಸಿದ್ಧ ಕಲಾವಿದ ಮೋಹನ್ ಕುಮಾರ್ ಅಮ್ಮುಂಜೆ ಕರ್ಣಪರ್ವದಲ್ಲಿ ಅರ್ಜುನ ಪಾತ್ರಧಾರಿಯಾಗಿ ವೇದಿಕೆಯಲ್ಲಿದ್ದಾಗ ಘಟನೆ ಸಂಭವಿಸಿದೆ.

ಯಕ್ಷಗಾನ ಮಾಡುವಾಗ ಕಲಾವಿದರಿಗೆ ದೈವ ಆವಾಹನೆ, ವಿಡಿಯೋ ವೈರಲ್..! 

ಅನ್‌ಲಾಕ್‌ ಪ್ರಕ್ರಿಯೆ ಆರಂಭವಾದ ನಂತರ ನಿಧಾನವಾಗಿ ಯಕ್ಷಗಾನ ಪ್ರದರ್ಶನಗಳು ಆರಂಭಗೊಳ್ಳುತ್ತಿದ್ದು ಇದೀಗ ಯಕ್ಷಗಾನ ನಡೆಯುವಾಗಲೇ ಕಲಾವಿದ ಕುಸಿದುಬಿದ್ದ ವಿಡಿಯೋ ವೈರಲ್ ಆಗಿದೆ. ವೇದಿಕೆಯಲ್ಲಿದ್ದವರೂ ಈ ಅನಿರೀಕ್ಷಿತ ಘಟನೆಯಿಂದ ಹೆದರಿಕೊಂಡಿದ್ದಾರೆ. ಆದರೆ ಅಮ್ಮುಂಜೆ ಮೋಹನ ಅವರು ಕುಸಿದು ಬಿದ್ದಿರುವ ವಿಡಿಯೋ, ಎಲ್ಲೆಡೆ ವೈರಲ್ ಆಗುತ್ತಿದೆ. ಅಮ್ಮುಂಜೆಯವರ ಅಪಾರ ಸಂಖ್ಯೆಯ ಅಭಿಮಾನಿಗಳು,ಈ ದೃಶ್ಯ ಕಂಡು ಗಾಬರಿ ಗೊಂಡಿದ್ದರು. ಇದೀಗ ಸ್ವತಹ ಅಮ್ಮುಂಜೆ ಮೋಹನ ಅವರು, ಆಡಿಯೋ ಒಂದನ್ನು ಹರಿಯಬಿಟ್ಟಿದ್ದು. ನನಗೆ ಯಾವುದೇ ತೊಂದರೆಯಾಗಿಲ್ಲ, ನಾನು ಆರಾಮಾಗಿದ್ದೇನೆ. 5 ತಿಂಗಳ ಬಳಿಕ ವೇಷ ಮಾಡಿದ್ದರಿಂದ, ಕಣ್ಣಿಗೆ ಬೆಳಕು ಹೊಡೆಯುತ್ತಿದ್ದಂತೆ ತಲೆಸುತ್ತು ಬಂದಂತಾಯಿತು. ವೈದ್ಯರು ಆರೋಗ್ಯದ ಪರೀಕ್ಷೆ ನಡೆಸಿದ್ದು, ಬಿಪಿ ಶುಗರ್ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿದ್ದಾರೆ, ಅಭಿಮಾನಿಗಳು ಗಾಬರಿಯಾಗುವುದು ಬೇಡ ಎಂದು ಹೇಳಿದ್ದಾರೆ.

ಪ್ರತಿದಿನ ಯಕ್ಷಗಾನ ಪ್ರದರ್ಶನ ನೀಡುವ ಕಲಾವಿದರು, ಕರೋನಾ ಲಾಕ್ಡೌನ್ ಆದನಂತರ, ಯಾವುದೇ ಪ್ರದರ್ಶನ ನೀಡಿರಲಿಲ್ಲ. ಇದೀಗ ಸೀಮಿತ ಪ್ರೇಕ್ಷಕರ ಮುಂದೆ, ಯೂಟ್ಯೂಬ್ ಪ್ರಸಾರಕ್ಕಾಗಿ ಯಕ್ಷಗಾನದ ದಾಖಲೀಕರಣ ಕೆಲವೆಡೆ ನಡೆಯುತ್ತಿದ್ದು, ಬಹಳ ಸಮಯದ ನಂತರ ಕಲಾವಿದರು ವೇಷ ಧರಿಸುತ್ತಿದ್ದಾರೆ.

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!