ಮೈಸೂರಲ್ಲಿ ಸಿಎಂ ಪುತ್ರ ಯತೀಂದ್ರ ದರ್ಬಾರ್? ಯತೀಂದ್ರ ಯಾರ ಜೊತೆ ಮತಾಡಿದ್ದು? ವಿಡಿಯೋದಲ್ಲಿ ಏನಿದೆ?

ಮೈಸೂರಲ್ಲಿ ಸಿಎಂ ಪುತ್ರ ಯತೀಂದ್ರ ದರ್ಬಾರ್? ಯತೀಂದ್ರ ಯಾರ ಜೊತೆ ಮತಾಡಿದ್ದು? ವಿಡಿಯೋದಲ್ಲಿ ಏನಿದೆ?

Published : Nov 16, 2023, 11:08 AM IST

ಮನಹದೇವ್ ಜೊತೆ ಲಿಸ್ಟ್ ಬಗ್ಗೆ ಮಾತಾಡಿದ್ರಾ ಯತೀಂದ್ರ?
ಕಾರ್ಮಿಕ ಇಲಾಖೆಯಲ್ಲಿ ಇನ್‌ಸ್ಪೆಕ್ಟರ್ ಆಗಿದ್ದ ಮಹದೇವ್
ಸಿದ್ದರಾಮಯ್ಯ ವಿರುದ್ಧ ಹೆಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ


ಸಿಎಂ ಪುತ್ರ ಯತೀಂದ್ರ ಮಾತಾಡಿದ ವಿಡಿಯೋವೊಂದು ವೈರಲ್‌ ಆಗಿದೆ. ಈ ವಿಡಿಯೋ ಕೇಳಿದ್ರೆ ಮೈಸೂರಿನಲ್ಲಿ(Mysore) ಯತೀಂದ್ರ ದರ್ಬಾರ್‌ ನಡೆಯುತ್ತಿದೆಯಾ ಎಂಬ ಪ್ರಶ್ನೆ ಕಾಡುತ್ತದೆ. ಈ ವಿಡಿಯೋದಲ್ಲಿ ಯತೀಂದ್ರ(Yatindra) ತಾವು ನೀಡಿದ ಲಿಸ್ಟ್ ಬಗ್ಗೆ ಮಾತನಾಡಿದ್ದಾರೆ. ಜನರೇ ಎದುರೇ ತಾವು ನೀಡಿದ ಲಿಸ್ಟ್(List) ಬಗ್ಗೆ ಚರ್ಚೆ ನಡೆಸಿದ್ದು, ‘ಅಪ್ಪ ಹೇಳಿ’ ಎಂದು ಮಾತನ್ನು ಶುರು ಮಾಡಿದ್ದಾರೆ. ಆ ಮಹದೇವ್‌ಗೆ ಫೋನ್ ಕೊಡುವಂತೆ ಯತೀಂದ್ರ ಹೇಳಿದ್ದಾರೆ. ನಾನು ಕೊಟ್ಟಿದ್ದು ಬಿಟ್ಟು ಬೇರೆ ಯಾವುದು? ಎಂದು ವಿಡಿಯೋದಲ್ಲಿ(videos) ಮಾತನಾಡಿದ್ದಾರೆ. ವರುಣ ಕ್ಷೇತ್ರದಲ್ಲಿ ಡಾ.ಯತೀಂದ್ರ ಜನ ಸಂಪರ್ಕ ಸಭೆ ನಡೆಸುತ್ತಿದ್ದರು. ಮೈಸೂರಿನ ಕೀಳನಪುರ ಗ್ರಾಮದ ಬಳಿ ಜನ ಸಂಪರ್ಕ ಸಭೆ ನಡೆಯುತ್ತಿದ್ದು, ಈ ವೇಳೆ ಹೀಗೆ ಮಾತನಾಡಿದ್ದಾರೆ. ನಾನು ನೀಡಿದ ಲಿಸ್ಟ್‌ನ್ನು ಮಾಡಿಸುವಂತೆ ಖಡಕ್ ಸೂಚನೆಯನ್ನು ನೀಡಿದ್ದಾರೆ. ಈ ವಿಡಿಯೋದಿಂದ ಕಾಂಗ್ರೆಸ್ ಸರ್ಕಾರದ ವಸೂಲಿ ದಂಧೆ ಹಾದಿಬೀದಿಗೆ ಬಂದಂತೆ ಆಗಿದೆ.  ಸಿಎಂ ಸಚಿವಾಲಯವನ್ನು ಸುಲಿಗೆ ಅಡ್ಡಾ ಮಾಡಿಕೊಂಡಿದ್ದಾರೆ. ಯತೀಂದ್ರ ವಿಡಿಯೋಗಿಂತ ದೊಡ್ಡ ಪುರಾವೆ ಬೇಕಿಲ್ಲ? ಸಾರ್ವಜನಿಕ ಸಭೆಯಲ್ಲೇ ವರ್ಗಾವಣೆ ದಂಧೆಯನ್ನು ಸಿಎಂ ಪುತ್ರ ನಡೆಸಿದ್ದಾರೆ ಎನ್ನಲಾಗ್ತಿದೆ. ಟ್ವೀಟ್ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಸಿಗಾಗಿ ವರ್ಗಾವಣೆ ದಂಧೆ ಅವ್ಯಾಹತವಾಗಿ ನಡೀತಿದೆ. ವರ್ಗಾವಣೆ ದಂಧೆಗೆ ಈ ವಿಡಿಯೋ ತುಣುಕೇ ಸಾಕ್ಷಿ. ಸರ್ಕಾರ ವಸೂಲಿ ಬಿಸ್ನೆಸ್ ಹಾದಿಬೀದಿಗೆ ಬಂದಿದೆ. ಕಾಸಿಗಾಗಿ ಹುದ್ದೆ ದಂಧೆ ಎಗ್ಗಿಲ್ಲದೆ ನಡೆದಿದೆ ಎಂದು ಟ್ವೀಟ್‌ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ಕರ್ನಾಟಕ ಸೋಲಿನಿಂದ ಪಾಠ ಕಲಿಯಿತಾ ಬಿಜೆಪಿ ಹೈಕಮಾಂಡ್..? ಮಧ್ಯಪ್ರದೇಶದಲ್ಲಿ ಸೀನಿಯರ್ಸ್ ಮೊರೆ ಹೋದ ಕಮಲ !

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more