ಮೈಸೂರಲ್ಲಿ ಸಿಎಂ ಪುತ್ರ ಯತೀಂದ್ರ ದರ್ಬಾರ್? ಯತೀಂದ್ರ ಯಾರ ಜೊತೆ ಮತಾಡಿದ್ದು? ವಿಡಿಯೋದಲ್ಲಿ ಏನಿದೆ?

ಮೈಸೂರಲ್ಲಿ ಸಿಎಂ ಪುತ್ರ ಯತೀಂದ್ರ ದರ್ಬಾರ್? ಯತೀಂದ್ರ ಯಾರ ಜೊತೆ ಮತಾಡಿದ್ದು? ವಿಡಿಯೋದಲ್ಲಿ ಏನಿದೆ?

Published : Nov 16, 2023, 11:08 AM IST

ಮನಹದೇವ್ ಜೊತೆ ಲಿಸ್ಟ್ ಬಗ್ಗೆ ಮಾತಾಡಿದ್ರಾ ಯತೀಂದ್ರ?
ಕಾರ್ಮಿಕ ಇಲಾಖೆಯಲ್ಲಿ ಇನ್‌ಸ್ಪೆಕ್ಟರ್ ಆಗಿದ್ದ ಮಹದೇವ್
ಸಿದ್ದರಾಮಯ್ಯ ವಿರುದ್ಧ ಹೆಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ


ಸಿಎಂ ಪುತ್ರ ಯತೀಂದ್ರ ಮಾತಾಡಿದ ವಿಡಿಯೋವೊಂದು ವೈರಲ್‌ ಆಗಿದೆ. ಈ ವಿಡಿಯೋ ಕೇಳಿದ್ರೆ ಮೈಸೂರಿನಲ್ಲಿ(Mysore) ಯತೀಂದ್ರ ದರ್ಬಾರ್‌ ನಡೆಯುತ್ತಿದೆಯಾ ಎಂಬ ಪ್ರಶ್ನೆ ಕಾಡುತ್ತದೆ. ಈ ವಿಡಿಯೋದಲ್ಲಿ ಯತೀಂದ್ರ(Yatindra) ತಾವು ನೀಡಿದ ಲಿಸ್ಟ್ ಬಗ್ಗೆ ಮಾತನಾಡಿದ್ದಾರೆ. ಜನರೇ ಎದುರೇ ತಾವು ನೀಡಿದ ಲಿಸ್ಟ್(List) ಬಗ್ಗೆ ಚರ್ಚೆ ನಡೆಸಿದ್ದು, ‘ಅಪ್ಪ ಹೇಳಿ’ ಎಂದು ಮಾತನ್ನು ಶುರು ಮಾಡಿದ್ದಾರೆ. ಆ ಮಹದೇವ್‌ಗೆ ಫೋನ್ ಕೊಡುವಂತೆ ಯತೀಂದ್ರ ಹೇಳಿದ್ದಾರೆ. ನಾನು ಕೊಟ್ಟಿದ್ದು ಬಿಟ್ಟು ಬೇರೆ ಯಾವುದು? ಎಂದು ವಿಡಿಯೋದಲ್ಲಿ(videos) ಮಾತನಾಡಿದ್ದಾರೆ. ವರುಣ ಕ್ಷೇತ್ರದಲ್ಲಿ ಡಾ.ಯತೀಂದ್ರ ಜನ ಸಂಪರ್ಕ ಸಭೆ ನಡೆಸುತ್ತಿದ್ದರು. ಮೈಸೂರಿನ ಕೀಳನಪುರ ಗ್ರಾಮದ ಬಳಿ ಜನ ಸಂಪರ್ಕ ಸಭೆ ನಡೆಯುತ್ತಿದ್ದು, ಈ ವೇಳೆ ಹೀಗೆ ಮಾತನಾಡಿದ್ದಾರೆ. ನಾನು ನೀಡಿದ ಲಿಸ್ಟ್‌ನ್ನು ಮಾಡಿಸುವಂತೆ ಖಡಕ್ ಸೂಚನೆಯನ್ನು ನೀಡಿದ್ದಾರೆ. ಈ ವಿಡಿಯೋದಿಂದ ಕಾಂಗ್ರೆಸ್ ಸರ್ಕಾರದ ವಸೂಲಿ ದಂಧೆ ಹಾದಿಬೀದಿಗೆ ಬಂದಂತೆ ಆಗಿದೆ.  ಸಿಎಂ ಸಚಿವಾಲಯವನ್ನು ಸುಲಿಗೆ ಅಡ್ಡಾ ಮಾಡಿಕೊಂಡಿದ್ದಾರೆ. ಯತೀಂದ್ರ ವಿಡಿಯೋಗಿಂತ ದೊಡ್ಡ ಪುರಾವೆ ಬೇಕಿಲ್ಲ? ಸಾರ್ವಜನಿಕ ಸಭೆಯಲ್ಲೇ ವರ್ಗಾವಣೆ ದಂಧೆಯನ್ನು ಸಿಎಂ ಪುತ್ರ ನಡೆಸಿದ್ದಾರೆ ಎನ್ನಲಾಗ್ತಿದೆ. ಟ್ವೀಟ್ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಸಿಗಾಗಿ ವರ್ಗಾವಣೆ ದಂಧೆ ಅವ್ಯಾಹತವಾಗಿ ನಡೀತಿದೆ. ವರ್ಗಾವಣೆ ದಂಧೆಗೆ ಈ ವಿಡಿಯೋ ತುಣುಕೇ ಸಾಕ್ಷಿ. ಸರ್ಕಾರ ವಸೂಲಿ ಬಿಸ್ನೆಸ್ ಹಾದಿಬೀದಿಗೆ ಬಂದಿದೆ. ಕಾಸಿಗಾಗಿ ಹುದ್ದೆ ದಂಧೆ ಎಗ್ಗಿಲ್ಲದೆ ನಡೆದಿದೆ ಎಂದು ಟ್ವೀಟ್‌ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ಕರ್ನಾಟಕ ಸೋಲಿನಿಂದ ಪಾಠ ಕಲಿಯಿತಾ ಬಿಜೆಪಿ ಹೈಕಮಾಂಡ್..? ಮಧ್ಯಪ್ರದೇಶದಲ್ಲಿ ಸೀನಿಯರ್ಸ್ ಮೊರೆ ಹೋದ ಕಮಲ !

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more