ಮೈಸೂರಲ್ಲಿ ಸಿಎಂ ಪುತ್ರ ಯತೀಂದ್ರ ದರ್ಬಾರ್? ಯತೀಂದ್ರ ಯಾರ ಜೊತೆ ಮತಾಡಿದ್ದು? ವಿಡಿಯೋದಲ್ಲಿ ಏನಿದೆ?

ಮೈಸೂರಲ್ಲಿ ಸಿಎಂ ಪುತ್ರ ಯತೀಂದ್ರ ದರ್ಬಾರ್? ಯತೀಂದ್ರ ಯಾರ ಜೊತೆ ಮತಾಡಿದ್ದು? ವಿಡಿಯೋದಲ್ಲಿ ಏನಿದೆ?

Published : Nov 16, 2023, 11:08 AM IST

ಮನಹದೇವ್ ಜೊತೆ ಲಿಸ್ಟ್ ಬಗ್ಗೆ ಮಾತಾಡಿದ್ರಾ ಯತೀಂದ್ರ?
ಕಾರ್ಮಿಕ ಇಲಾಖೆಯಲ್ಲಿ ಇನ್‌ಸ್ಪೆಕ್ಟರ್ ಆಗಿದ್ದ ಮಹದೇವ್
ಸಿದ್ದರಾಮಯ್ಯ ವಿರುದ್ಧ ಹೆಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ


ಸಿಎಂ ಪುತ್ರ ಯತೀಂದ್ರ ಮಾತಾಡಿದ ವಿಡಿಯೋವೊಂದು ವೈರಲ್‌ ಆಗಿದೆ. ಈ ವಿಡಿಯೋ ಕೇಳಿದ್ರೆ ಮೈಸೂರಿನಲ್ಲಿ(Mysore) ಯತೀಂದ್ರ ದರ್ಬಾರ್‌ ನಡೆಯುತ್ತಿದೆಯಾ ಎಂಬ ಪ್ರಶ್ನೆ ಕಾಡುತ್ತದೆ. ಈ ವಿಡಿಯೋದಲ್ಲಿ ಯತೀಂದ್ರ(Yatindra) ತಾವು ನೀಡಿದ ಲಿಸ್ಟ್ ಬಗ್ಗೆ ಮಾತನಾಡಿದ್ದಾರೆ. ಜನರೇ ಎದುರೇ ತಾವು ನೀಡಿದ ಲಿಸ್ಟ್(List) ಬಗ್ಗೆ ಚರ್ಚೆ ನಡೆಸಿದ್ದು, ‘ಅಪ್ಪ ಹೇಳಿ’ ಎಂದು ಮಾತನ್ನು ಶುರು ಮಾಡಿದ್ದಾರೆ. ಆ ಮಹದೇವ್‌ಗೆ ಫೋನ್ ಕೊಡುವಂತೆ ಯತೀಂದ್ರ ಹೇಳಿದ್ದಾರೆ. ನಾನು ಕೊಟ್ಟಿದ್ದು ಬಿಟ್ಟು ಬೇರೆ ಯಾವುದು? ಎಂದು ವಿಡಿಯೋದಲ್ಲಿ(videos) ಮಾತನಾಡಿದ್ದಾರೆ. ವರುಣ ಕ್ಷೇತ್ರದಲ್ಲಿ ಡಾ.ಯತೀಂದ್ರ ಜನ ಸಂಪರ್ಕ ಸಭೆ ನಡೆಸುತ್ತಿದ್ದರು. ಮೈಸೂರಿನ ಕೀಳನಪುರ ಗ್ರಾಮದ ಬಳಿ ಜನ ಸಂಪರ್ಕ ಸಭೆ ನಡೆಯುತ್ತಿದ್ದು, ಈ ವೇಳೆ ಹೀಗೆ ಮಾತನಾಡಿದ್ದಾರೆ. ನಾನು ನೀಡಿದ ಲಿಸ್ಟ್‌ನ್ನು ಮಾಡಿಸುವಂತೆ ಖಡಕ್ ಸೂಚನೆಯನ್ನು ನೀಡಿದ್ದಾರೆ. ಈ ವಿಡಿಯೋದಿಂದ ಕಾಂಗ್ರೆಸ್ ಸರ್ಕಾರದ ವಸೂಲಿ ದಂಧೆ ಹಾದಿಬೀದಿಗೆ ಬಂದಂತೆ ಆಗಿದೆ.  ಸಿಎಂ ಸಚಿವಾಲಯವನ್ನು ಸುಲಿಗೆ ಅಡ್ಡಾ ಮಾಡಿಕೊಂಡಿದ್ದಾರೆ. ಯತೀಂದ್ರ ವಿಡಿಯೋಗಿಂತ ದೊಡ್ಡ ಪುರಾವೆ ಬೇಕಿಲ್ಲ? ಸಾರ್ವಜನಿಕ ಸಭೆಯಲ್ಲೇ ವರ್ಗಾವಣೆ ದಂಧೆಯನ್ನು ಸಿಎಂ ಪುತ್ರ ನಡೆಸಿದ್ದಾರೆ ಎನ್ನಲಾಗ್ತಿದೆ. ಟ್ವೀಟ್ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಸಿಗಾಗಿ ವರ್ಗಾವಣೆ ದಂಧೆ ಅವ್ಯಾಹತವಾಗಿ ನಡೀತಿದೆ. ವರ್ಗಾವಣೆ ದಂಧೆಗೆ ಈ ವಿಡಿಯೋ ತುಣುಕೇ ಸಾಕ್ಷಿ. ಸರ್ಕಾರ ವಸೂಲಿ ಬಿಸ್ನೆಸ್ ಹಾದಿಬೀದಿಗೆ ಬಂದಿದೆ. ಕಾಸಿಗಾಗಿ ಹುದ್ದೆ ದಂಧೆ ಎಗ್ಗಿಲ್ಲದೆ ನಡೆದಿದೆ ಎಂದು ಟ್ವೀಟ್‌ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ಕರ್ನಾಟಕ ಸೋಲಿನಿಂದ ಪಾಠ ಕಲಿಯಿತಾ ಬಿಜೆಪಿ ಹೈಕಮಾಂಡ್..? ಮಧ್ಯಪ್ರದೇಶದಲ್ಲಿ ಸೀನಿಯರ್ಸ್ ಮೊರೆ ಹೋದ ಕಮಲ !

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more