ಬೆಂಗಳೂರಿನ ಹೈಟೆಕ್ ಹೆರಿಗೆ ಆಸ್ಪತ್ರೆಗೆ ಬೀಗ: ಯಶವಂತಪುರದ ದೊಡ್ಡ ದವಖಾನೆಯೇ ಮೂಲೆಗುಂಪು

ಬೆಂಗಳೂರಿನ ಹೈಟೆಕ್ ಹೆರಿಗೆ ಆಸ್ಪತ್ರೆಗೆ ಬೀಗ: ಯಶವಂತಪುರದ ದೊಡ್ಡ ದವಖಾನೆಯೇ ಮೂಲೆಗುಂಪು

Published : Nov 03, 2023, 10:18 AM IST

ಆ ಆಸ್ಪತ್ರೆ ಅನೇಕ ತಾಯಂದಿರ ಪಾಲಿಗೆ ವರದಾನವಾಗಿತ್ತು.ಕೋವಿಡ್ ಬಳಿಕ ಅದನ್ನ ಕೇರ್ ಸೆಂಟರ್ ಆಗಿ ಬದಲಾಯಿಸಲಾಗಿತ್ತು. ಆದ್ರೆ ಕೊರೊನಾ ಹೋಗಿ 3 ವರ್ಷ ಕಳೆದ್ರೂ ದೊಡ್ಡ ಆಸ್ಪತ್ರೆಗೆ ಬಿಬಿಎಂಪಿ ಬೀಗ ಹಾಕಿದೆ. ರೋಗಿಗಳಿಗೆ ಸೂಕ್ತ ಚಿಕಿತ್ಸೆ ಪರದಾಡುತ್ತಿದ್ದಾರೆ.
 

ಸಿಲಿಕಾನ್ ಸಿಟಿ ಜನರಿಗೆ ಉತ್ತಮ ಆರೋಗ್ಯ ಸಿಗಬೇಕು ಅಂದ್ರನೇ ಕಷ್ಟ. ಜನರಂತೂ ಸರ್ಕಾರಿ ಆಸ್ಪತ್ರೆಯೆಂದರೆ(Hospital) ಮೂಗು ಮೂರಿಯೋದೇ ಹೆಚ್ಚು. ಆದ್ರೆ ಇರೋ ಒಳ್ಳೆಯ ಆಸ್ಪತ್ರೆಗಳಿಗೆ ಬಿಬಿಎಂಪಿ(BBMP) ಬೀಗ ಹಾಕ್ತಿದೆ. ಲಕ್ಷಾಂತರ ಮಂದಿ ಓಡಾಟ ನಡೆಸುವ ಯಶವಂತಪುರದಲ್ಲಿ ದೊಡ್ಡ ಆಸ್ಪತ್ರೆಗೆ ಬೀಗ ಹಾಕಲಾಗಿದೆ. ಯಶವಂತಪುರ ರೈಲ್ವೆ ಸ್ಟೇಷನ್‌ ಬಳಿ ಹೆರಿಗೆ ಆಸ್ಪತ್ರೆ ಇತ್ತು. ಕೊರೊನಾ(Corona) ಸಮಯದಲ್ಲಿ ಸಚಿವರಾಗಿದ್ದ ಮುನಿರತ್ನ(Muniratna) ಇದನ್ನ ಕೋವಿಡ್‌ ಆಸ್ಪತ್ರೆಯಾಗಿ ಮಾರ್ಪಾಡು ಮಾಡಿದ್ರು. ಆದ್ರೆ ಕೊರೊನಾ ಹೋಗಿ ಇಷ್ಟು ದಿನ ಆದ್ರೂ ಈ ಆಸ್ಪತ್ರೆ  ಬಿಬಿಎಂಪಿ ಅಧಿಕಾರಗಳ ಗಮನಕ್ಕೆ ಬಂದಿಲ್ಲ. ಇಂತಹ ದೊಡ್ಡ ಆಸ್ಪತ್ರೆಗೆ ಅಧಿಕಾರಿಗಳು ಬೀಗ ಹಾಕಿದ್ದು ರೋಗಿಗಳು ಪರದಾಡುತ್ತಿದ್ದಾರೆ. ಆಸ್ಪತ್ರೆ ನಿರ್ವಹಣೆ ಮಾಡಲು 5 ಸಿಬ್ಬಂದಿ ಜೊತೆ ಸೆಕ್ಯೂರಿಟಿಗಳನ್ನು ನೇಮಿಸಲಾಗಿದೆ. ಆದ್ರೆ ಅವರಿಗೆ ಬಿಬಿಎಂಪಿ 5 ತಿಂಗಳಿಂದ ಸಂಬಳ ಕೊಟ್ಟಿಲ್ವಂತೆ.. ಇನ್ನು ಸುತ್ತಮುತ್ತಲಿನ ಹಲವರು ಕೋವಿಡ್ ಸೆಂಟರ್ ಆಗಿರುವ ಇದನ್ನ ಬದಲಾವಣೆ ಮಾಡಿ.. ರೋಗಿಗಳಿಗೆ ಉಪಯೋಗ ಆಗುವಂತೆ ಮಾಡಿ ಎಂದು ಮನವಿ ಮಾಡ್ತಿದ್ದಾರೆ.ಗ್ರಾಮಗಳಲ್ಲಿ ಆಸ್ಪತ್ರೆಗೆ ಸೂಕ್ತ ವ್ಯವಸ್ಥೆ ಇಲ್ಲದೇ ಪರದಾಟ ನಡೆಸೋದು ಮಾಮೂಲಿ.. ಆದ್ರೆ ಬೆಂಗಳೂರಿನಂತಹ ಸಿಟಿಯಲ್ಲೇ ಜನ ಚಿಕಿತ್ಸೆ ಸಿಗದೇ ಒದ್ದಾಡುತ್ತಿದ್ದಾರೆ. ಬಿಬಿಎಂಪಿ ಅಧಿಕಾರಿಗಳ ಯಡವಟ್ಟಿಗೆ ದೊಡ್ಡ ಆಸ್ಪತ್ರೆಗೆ ಬೀಗ ಬಿದ್ದಿದೆ. ಇನ್ನಾದ್ರೂ ಅಧಿಕಾರಿಗಳು ಎಚ್ಚೆತ್ತು ಆಸ್ಪತ್ರೆಗೆ ಹೈಟೆಕ್ ಸ್ಪರ್ಶ ನೀಡಬೇಕಿದೆ.

ಇದನ್ನೂ ವೀಕ್ಷಿಸಿ:  ಅಪ್ಪು ಹೆಸರಲ್ಲಿ ಯಶ್-ಪ್ರಕಾಶ್ ರಾಜ್ ದೊಡ್ಡ ಸಾಧನೆ: ಕೊಟ್ಟ ಮಾತು ಉಳಿಸಿಕೊಂಡ ಸ್ಟಾರ್ಸ್..!

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more