ಬೆಂಗಳೂರಿನ ಹೈಟೆಕ್ ಹೆರಿಗೆ ಆಸ್ಪತ್ರೆಗೆ ಬೀಗ: ಯಶವಂತಪುರದ ದೊಡ್ಡ ದವಖಾನೆಯೇ ಮೂಲೆಗುಂಪು

ಬೆಂಗಳೂರಿನ ಹೈಟೆಕ್ ಹೆರಿಗೆ ಆಸ್ಪತ್ರೆಗೆ ಬೀಗ: ಯಶವಂತಪುರದ ದೊಡ್ಡ ದವಖಾನೆಯೇ ಮೂಲೆಗುಂಪು

Published : Nov 03, 2023, 10:18 AM IST

ಆ ಆಸ್ಪತ್ರೆ ಅನೇಕ ತಾಯಂದಿರ ಪಾಲಿಗೆ ವರದಾನವಾಗಿತ್ತು.ಕೋವಿಡ್ ಬಳಿಕ ಅದನ್ನ ಕೇರ್ ಸೆಂಟರ್ ಆಗಿ ಬದಲಾಯಿಸಲಾಗಿತ್ತು. ಆದ್ರೆ ಕೊರೊನಾ ಹೋಗಿ 3 ವರ್ಷ ಕಳೆದ್ರೂ ದೊಡ್ಡ ಆಸ್ಪತ್ರೆಗೆ ಬಿಬಿಎಂಪಿ ಬೀಗ ಹಾಕಿದೆ. ರೋಗಿಗಳಿಗೆ ಸೂಕ್ತ ಚಿಕಿತ್ಸೆ ಪರದಾಡುತ್ತಿದ್ದಾರೆ.
 

ಸಿಲಿಕಾನ್ ಸಿಟಿ ಜನರಿಗೆ ಉತ್ತಮ ಆರೋಗ್ಯ ಸಿಗಬೇಕು ಅಂದ್ರನೇ ಕಷ್ಟ. ಜನರಂತೂ ಸರ್ಕಾರಿ ಆಸ್ಪತ್ರೆಯೆಂದರೆ(Hospital) ಮೂಗು ಮೂರಿಯೋದೇ ಹೆಚ್ಚು. ಆದ್ರೆ ಇರೋ ಒಳ್ಳೆಯ ಆಸ್ಪತ್ರೆಗಳಿಗೆ ಬಿಬಿಎಂಪಿ(BBMP) ಬೀಗ ಹಾಕ್ತಿದೆ. ಲಕ್ಷಾಂತರ ಮಂದಿ ಓಡಾಟ ನಡೆಸುವ ಯಶವಂತಪುರದಲ್ಲಿ ದೊಡ್ಡ ಆಸ್ಪತ್ರೆಗೆ ಬೀಗ ಹಾಕಲಾಗಿದೆ. ಯಶವಂತಪುರ ರೈಲ್ವೆ ಸ್ಟೇಷನ್‌ ಬಳಿ ಹೆರಿಗೆ ಆಸ್ಪತ್ರೆ ಇತ್ತು. ಕೊರೊನಾ(Corona) ಸಮಯದಲ್ಲಿ ಸಚಿವರಾಗಿದ್ದ ಮುನಿರತ್ನ(Muniratna) ಇದನ್ನ ಕೋವಿಡ್‌ ಆಸ್ಪತ್ರೆಯಾಗಿ ಮಾರ್ಪಾಡು ಮಾಡಿದ್ರು. ಆದ್ರೆ ಕೊರೊನಾ ಹೋಗಿ ಇಷ್ಟು ದಿನ ಆದ್ರೂ ಈ ಆಸ್ಪತ್ರೆ  ಬಿಬಿಎಂಪಿ ಅಧಿಕಾರಗಳ ಗಮನಕ್ಕೆ ಬಂದಿಲ್ಲ. ಇಂತಹ ದೊಡ್ಡ ಆಸ್ಪತ್ರೆಗೆ ಅಧಿಕಾರಿಗಳು ಬೀಗ ಹಾಕಿದ್ದು ರೋಗಿಗಳು ಪರದಾಡುತ್ತಿದ್ದಾರೆ. ಆಸ್ಪತ್ರೆ ನಿರ್ವಹಣೆ ಮಾಡಲು 5 ಸಿಬ್ಬಂದಿ ಜೊತೆ ಸೆಕ್ಯೂರಿಟಿಗಳನ್ನು ನೇಮಿಸಲಾಗಿದೆ. ಆದ್ರೆ ಅವರಿಗೆ ಬಿಬಿಎಂಪಿ 5 ತಿಂಗಳಿಂದ ಸಂಬಳ ಕೊಟ್ಟಿಲ್ವಂತೆ.. ಇನ್ನು ಸುತ್ತಮುತ್ತಲಿನ ಹಲವರು ಕೋವಿಡ್ ಸೆಂಟರ್ ಆಗಿರುವ ಇದನ್ನ ಬದಲಾವಣೆ ಮಾಡಿ.. ರೋಗಿಗಳಿಗೆ ಉಪಯೋಗ ಆಗುವಂತೆ ಮಾಡಿ ಎಂದು ಮನವಿ ಮಾಡ್ತಿದ್ದಾರೆ.ಗ್ರಾಮಗಳಲ್ಲಿ ಆಸ್ಪತ್ರೆಗೆ ಸೂಕ್ತ ವ್ಯವಸ್ಥೆ ಇಲ್ಲದೇ ಪರದಾಟ ನಡೆಸೋದು ಮಾಮೂಲಿ.. ಆದ್ರೆ ಬೆಂಗಳೂರಿನಂತಹ ಸಿಟಿಯಲ್ಲೇ ಜನ ಚಿಕಿತ್ಸೆ ಸಿಗದೇ ಒದ್ದಾಡುತ್ತಿದ್ದಾರೆ. ಬಿಬಿಎಂಪಿ ಅಧಿಕಾರಿಗಳ ಯಡವಟ್ಟಿಗೆ ದೊಡ್ಡ ಆಸ್ಪತ್ರೆಗೆ ಬೀಗ ಬಿದ್ದಿದೆ. ಇನ್ನಾದ್ರೂ ಅಧಿಕಾರಿಗಳು ಎಚ್ಚೆತ್ತು ಆಸ್ಪತ್ರೆಗೆ ಹೈಟೆಕ್ ಸ್ಪರ್ಶ ನೀಡಬೇಕಿದೆ.

ಇದನ್ನೂ ವೀಕ್ಷಿಸಿ:  ಅಪ್ಪು ಹೆಸರಲ್ಲಿ ಯಶ್-ಪ್ರಕಾಶ್ ರಾಜ್ ದೊಡ್ಡ ಸಾಧನೆ: ಕೊಟ್ಟ ಮಾತು ಉಳಿಸಿಕೊಂಡ ಸ್ಟಾರ್ಸ್..!

15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
Read more