ಬೆಂಗಳೂರಿನ ಹೈಟೆಕ್ ಹೆರಿಗೆ ಆಸ್ಪತ್ರೆಗೆ ಬೀಗ: ಯಶವಂತಪುರದ ದೊಡ್ಡ ದವಖಾನೆಯೇ ಮೂಲೆಗುಂಪು

ಬೆಂಗಳೂರಿನ ಹೈಟೆಕ್ ಹೆರಿಗೆ ಆಸ್ಪತ್ರೆಗೆ ಬೀಗ: ಯಶವಂತಪುರದ ದೊಡ್ಡ ದವಖಾನೆಯೇ ಮೂಲೆಗುಂಪು

Published : Nov 03, 2023, 10:18 AM IST

ಆ ಆಸ್ಪತ್ರೆ ಅನೇಕ ತಾಯಂದಿರ ಪಾಲಿಗೆ ವರದಾನವಾಗಿತ್ತು.ಕೋವಿಡ್ ಬಳಿಕ ಅದನ್ನ ಕೇರ್ ಸೆಂಟರ್ ಆಗಿ ಬದಲಾಯಿಸಲಾಗಿತ್ತು. ಆದ್ರೆ ಕೊರೊನಾ ಹೋಗಿ 3 ವರ್ಷ ಕಳೆದ್ರೂ ದೊಡ್ಡ ಆಸ್ಪತ್ರೆಗೆ ಬಿಬಿಎಂಪಿ ಬೀಗ ಹಾಕಿದೆ. ರೋಗಿಗಳಿಗೆ ಸೂಕ್ತ ಚಿಕಿತ್ಸೆ ಪರದಾಡುತ್ತಿದ್ದಾರೆ.
 

ಸಿಲಿಕಾನ್ ಸಿಟಿ ಜನರಿಗೆ ಉತ್ತಮ ಆರೋಗ್ಯ ಸಿಗಬೇಕು ಅಂದ್ರನೇ ಕಷ್ಟ. ಜನರಂತೂ ಸರ್ಕಾರಿ ಆಸ್ಪತ್ರೆಯೆಂದರೆ(Hospital) ಮೂಗು ಮೂರಿಯೋದೇ ಹೆಚ್ಚು. ಆದ್ರೆ ಇರೋ ಒಳ್ಳೆಯ ಆಸ್ಪತ್ರೆಗಳಿಗೆ ಬಿಬಿಎಂಪಿ(BBMP) ಬೀಗ ಹಾಕ್ತಿದೆ. ಲಕ್ಷಾಂತರ ಮಂದಿ ಓಡಾಟ ನಡೆಸುವ ಯಶವಂತಪುರದಲ್ಲಿ ದೊಡ್ಡ ಆಸ್ಪತ್ರೆಗೆ ಬೀಗ ಹಾಕಲಾಗಿದೆ. ಯಶವಂತಪುರ ರೈಲ್ವೆ ಸ್ಟೇಷನ್‌ ಬಳಿ ಹೆರಿಗೆ ಆಸ್ಪತ್ರೆ ಇತ್ತು. ಕೊರೊನಾ(Corona) ಸಮಯದಲ್ಲಿ ಸಚಿವರಾಗಿದ್ದ ಮುನಿರತ್ನ(Muniratna) ಇದನ್ನ ಕೋವಿಡ್‌ ಆಸ್ಪತ್ರೆಯಾಗಿ ಮಾರ್ಪಾಡು ಮಾಡಿದ್ರು. ಆದ್ರೆ ಕೊರೊನಾ ಹೋಗಿ ಇಷ್ಟು ದಿನ ಆದ್ರೂ ಈ ಆಸ್ಪತ್ರೆ  ಬಿಬಿಎಂಪಿ ಅಧಿಕಾರಗಳ ಗಮನಕ್ಕೆ ಬಂದಿಲ್ಲ. ಇಂತಹ ದೊಡ್ಡ ಆಸ್ಪತ್ರೆಗೆ ಅಧಿಕಾರಿಗಳು ಬೀಗ ಹಾಕಿದ್ದು ರೋಗಿಗಳು ಪರದಾಡುತ್ತಿದ್ದಾರೆ. ಆಸ್ಪತ್ರೆ ನಿರ್ವಹಣೆ ಮಾಡಲು 5 ಸಿಬ್ಬಂದಿ ಜೊತೆ ಸೆಕ್ಯೂರಿಟಿಗಳನ್ನು ನೇಮಿಸಲಾಗಿದೆ. ಆದ್ರೆ ಅವರಿಗೆ ಬಿಬಿಎಂಪಿ 5 ತಿಂಗಳಿಂದ ಸಂಬಳ ಕೊಟ್ಟಿಲ್ವಂತೆ.. ಇನ್ನು ಸುತ್ತಮುತ್ತಲಿನ ಹಲವರು ಕೋವಿಡ್ ಸೆಂಟರ್ ಆಗಿರುವ ಇದನ್ನ ಬದಲಾವಣೆ ಮಾಡಿ.. ರೋಗಿಗಳಿಗೆ ಉಪಯೋಗ ಆಗುವಂತೆ ಮಾಡಿ ಎಂದು ಮನವಿ ಮಾಡ್ತಿದ್ದಾರೆ.ಗ್ರಾಮಗಳಲ್ಲಿ ಆಸ್ಪತ್ರೆಗೆ ಸೂಕ್ತ ವ್ಯವಸ್ಥೆ ಇಲ್ಲದೇ ಪರದಾಟ ನಡೆಸೋದು ಮಾಮೂಲಿ.. ಆದ್ರೆ ಬೆಂಗಳೂರಿನಂತಹ ಸಿಟಿಯಲ್ಲೇ ಜನ ಚಿಕಿತ್ಸೆ ಸಿಗದೇ ಒದ್ದಾಡುತ್ತಿದ್ದಾರೆ. ಬಿಬಿಎಂಪಿ ಅಧಿಕಾರಿಗಳ ಯಡವಟ್ಟಿಗೆ ದೊಡ್ಡ ಆಸ್ಪತ್ರೆಗೆ ಬೀಗ ಬಿದ್ದಿದೆ. ಇನ್ನಾದ್ರೂ ಅಧಿಕಾರಿಗಳು ಎಚ್ಚೆತ್ತು ಆಸ್ಪತ್ರೆಗೆ ಹೈಟೆಕ್ ಸ್ಪರ್ಶ ನೀಡಬೇಕಿದೆ.

ಇದನ್ನೂ ವೀಕ್ಷಿಸಿ:  ಅಪ್ಪು ಹೆಸರಲ್ಲಿ ಯಶ್-ಪ್ರಕಾಶ್ ರಾಜ್ ದೊಡ್ಡ ಸಾಧನೆ: ಕೊಟ್ಟ ಮಾತು ಉಳಿಸಿಕೊಂಡ ಸ್ಟಾರ್ಸ್..!

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more