ಬೆಂಗಳೂರಿನ ಹೈಟೆಕ್ ಹೆರಿಗೆ ಆಸ್ಪತ್ರೆಗೆ ಬೀಗ: ಯಶವಂತಪುರದ ದೊಡ್ಡ ದವಖಾನೆಯೇ ಮೂಲೆಗುಂಪು

ಬೆಂಗಳೂರಿನ ಹೈಟೆಕ್ ಹೆರಿಗೆ ಆಸ್ಪತ್ರೆಗೆ ಬೀಗ: ಯಶವಂತಪುರದ ದೊಡ್ಡ ದವಖಾನೆಯೇ ಮೂಲೆಗುಂಪು

Published : Nov 03, 2023, 10:18 AM IST

ಆ ಆಸ್ಪತ್ರೆ ಅನೇಕ ತಾಯಂದಿರ ಪಾಲಿಗೆ ವರದಾನವಾಗಿತ್ತು.ಕೋವಿಡ್ ಬಳಿಕ ಅದನ್ನ ಕೇರ್ ಸೆಂಟರ್ ಆಗಿ ಬದಲಾಯಿಸಲಾಗಿತ್ತು. ಆದ್ರೆ ಕೊರೊನಾ ಹೋಗಿ 3 ವರ್ಷ ಕಳೆದ್ರೂ ದೊಡ್ಡ ಆಸ್ಪತ್ರೆಗೆ ಬಿಬಿಎಂಪಿ ಬೀಗ ಹಾಕಿದೆ. ರೋಗಿಗಳಿಗೆ ಸೂಕ್ತ ಚಿಕಿತ್ಸೆ ಪರದಾಡುತ್ತಿದ್ದಾರೆ.
 

ಸಿಲಿಕಾನ್ ಸಿಟಿ ಜನರಿಗೆ ಉತ್ತಮ ಆರೋಗ್ಯ ಸಿಗಬೇಕು ಅಂದ್ರನೇ ಕಷ್ಟ. ಜನರಂತೂ ಸರ್ಕಾರಿ ಆಸ್ಪತ್ರೆಯೆಂದರೆ(Hospital) ಮೂಗು ಮೂರಿಯೋದೇ ಹೆಚ್ಚು. ಆದ್ರೆ ಇರೋ ಒಳ್ಳೆಯ ಆಸ್ಪತ್ರೆಗಳಿಗೆ ಬಿಬಿಎಂಪಿ(BBMP) ಬೀಗ ಹಾಕ್ತಿದೆ. ಲಕ್ಷಾಂತರ ಮಂದಿ ಓಡಾಟ ನಡೆಸುವ ಯಶವಂತಪುರದಲ್ಲಿ ದೊಡ್ಡ ಆಸ್ಪತ್ರೆಗೆ ಬೀಗ ಹಾಕಲಾಗಿದೆ. ಯಶವಂತಪುರ ರೈಲ್ವೆ ಸ್ಟೇಷನ್‌ ಬಳಿ ಹೆರಿಗೆ ಆಸ್ಪತ್ರೆ ಇತ್ತು. ಕೊರೊನಾ(Corona) ಸಮಯದಲ್ಲಿ ಸಚಿವರಾಗಿದ್ದ ಮುನಿರತ್ನ(Muniratna) ಇದನ್ನ ಕೋವಿಡ್‌ ಆಸ್ಪತ್ರೆಯಾಗಿ ಮಾರ್ಪಾಡು ಮಾಡಿದ್ರು. ಆದ್ರೆ ಕೊರೊನಾ ಹೋಗಿ ಇಷ್ಟು ದಿನ ಆದ್ರೂ ಈ ಆಸ್ಪತ್ರೆ  ಬಿಬಿಎಂಪಿ ಅಧಿಕಾರಗಳ ಗಮನಕ್ಕೆ ಬಂದಿಲ್ಲ. ಇಂತಹ ದೊಡ್ಡ ಆಸ್ಪತ್ರೆಗೆ ಅಧಿಕಾರಿಗಳು ಬೀಗ ಹಾಕಿದ್ದು ರೋಗಿಗಳು ಪರದಾಡುತ್ತಿದ್ದಾರೆ. ಆಸ್ಪತ್ರೆ ನಿರ್ವಹಣೆ ಮಾಡಲು 5 ಸಿಬ್ಬಂದಿ ಜೊತೆ ಸೆಕ್ಯೂರಿಟಿಗಳನ್ನು ನೇಮಿಸಲಾಗಿದೆ. ಆದ್ರೆ ಅವರಿಗೆ ಬಿಬಿಎಂಪಿ 5 ತಿಂಗಳಿಂದ ಸಂಬಳ ಕೊಟ್ಟಿಲ್ವಂತೆ.. ಇನ್ನು ಸುತ್ತಮುತ್ತಲಿನ ಹಲವರು ಕೋವಿಡ್ ಸೆಂಟರ್ ಆಗಿರುವ ಇದನ್ನ ಬದಲಾವಣೆ ಮಾಡಿ.. ರೋಗಿಗಳಿಗೆ ಉಪಯೋಗ ಆಗುವಂತೆ ಮಾಡಿ ಎಂದು ಮನವಿ ಮಾಡ್ತಿದ್ದಾರೆ.ಗ್ರಾಮಗಳಲ್ಲಿ ಆಸ್ಪತ್ರೆಗೆ ಸೂಕ್ತ ವ್ಯವಸ್ಥೆ ಇಲ್ಲದೇ ಪರದಾಟ ನಡೆಸೋದು ಮಾಮೂಲಿ.. ಆದ್ರೆ ಬೆಂಗಳೂರಿನಂತಹ ಸಿಟಿಯಲ್ಲೇ ಜನ ಚಿಕಿತ್ಸೆ ಸಿಗದೇ ಒದ್ದಾಡುತ್ತಿದ್ದಾರೆ. ಬಿಬಿಎಂಪಿ ಅಧಿಕಾರಿಗಳ ಯಡವಟ್ಟಿಗೆ ದೊಡ್ಡ ಆಸ್ಪತ್ರೆಗೆ ಬೀಗ ಬಿದ್ದಿದೆ. ಇನ್ನಾದ್ರೂ ಅಧಿಕಾರಿಗಳು ಎಚ್ಚೆತ್ತು ಆಸ್ಪತ್ರೆಗೆ ಹೈಟೆಕ್ ಸ್ಪರ್ಶ ನೀಡಬೇಕಿದೆ.

ಇದನ್ನೂ ವೀಕ್ಷಿಸಿ:  ಅಪ್ಪು ಹೆಸರಲ್ಲಿ ಯಶ್-ಪ್ರಕಾಶ್ ರಾಜ್ ದೊಡ್ಡ ಸಾಧನೆ: ಕೊಟ್ಟ ಮಾತು ಉಳಿಸಿಕೊಂಡ ಸ್ಟಾರ್ಸ್..!

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
Read more