Uttara Kannada: ಸರ್ಕಾರಕ್ಕೆ ಸಡ್ಡು: ಬಲಿಷ್ಠ  ಬ್ರಿಡ್ಜ್‌ ನಿರ್ಮಿಸಿದ ಗ್ರಾಮಸ್ಥರು..!

Uttara Kannada: ಸರ್ಕಾರಕ್ಕೆ ಸಡ್ಡು: ಬಲಿಷ್ಠ ಬ್ರಿಡ್ಜ್‌ ನಿರ್ಮಿಸಿದ ಗ್ರಾಮಸ್ಥರು..!

Suvarna News   | Asianet News
Published : Jan 17, 2022, 12:59 PM IST

*  ಊರಿನ 200-300 ಯುವಕರು ಹಾಗೂ ಹಿರಿಯರು ಸೇರಿ ಸೇತುವೆ ನಿರ್ಮಾಣ
*  ಒಂದೇ ವಾರದಲ್ಲಿ ನದಿಗೆ ಅಡ್ಡಲಾಗಿ ಗ್ರಾಮ ಸೇತುವನ್ನೇ ನಿರ್ಮಿಸಿದ ಜನ
*  ಕಳೆದ ಬಾರಿಯ ಭಾರೀ ಪ್ರವಾಹದಿಂದ ಕೊಚ್ಚಿಹೋಗಿದ್ದ ಗುಳ್ಳಾಪುರದ ಸೇತುವೆ
 

ಕಾರವಾರ(ಜ.17):  ಕಳೆದ ಬಾರಿ ಬೃಹತ್ ಸೇತುವೆ ಉರುಳಿಬಿದ್ದ ನಂತರ ತುಂಬಿ ಹರಿಯುವ ನದಿಯನ್ನು ಬೋಟ್ ಮೂಲಕವೇ ದಾಟುತ್ತಿದ್ದ ಈ ಊರಿನ ಗ್ರಾಮಸ್ಥರು ಕೊನೆಗೂ‌ ತಮ್ಮ ಸಮಸ್ಯೆಗೆ ತಾವೇ ಪರಿಹಾರ ಕಂಡುಕೊಂಡು ಬಲಿಷ್ಠ ಗ್ರಾಮ ಸೇತುವನ್ನು ನಿರ್ಮಾಣ ಮಾಡಿಕೊಂಡಿದ್ದಾರೆ. ಹೌದು, ನಾವು ಮಾತನಾಡುತ್ತಿರೋದು ಗುಳ್ಳಾಪುರದ ವಿಚಾರ. ಅಂಕೋಲಾ, ಯಲ್ಲಾಪುರ ಹಾಗೂ ಶಿರಸಿಯನ್ನು ಸಂಪರ್ಕಿಸುವ ಪ್ರಮುಖ ಪ್ರದೇಶ ಇದಾಗಿದ್ದು, ಯಲ್ಲಾಪುರ ಹಾಗೂ ಅಂಕೋಲಾದ ಗಡಿಭಾಗವಾಗಿರುವ ಕೈಗಡಿಯೆಂಬ ತೀರಾ ಕುಗ್ರಾಮಕ್ಕೆ‌ ಗುಳ್ಳಾಪುರದ ಮೂಲಕವೇ ಸಾಗಬೇಕಾಗಿದೆ.‌ ಕಳೆದ ಬಾರಿ ಕಾಣಿಸಿಕೊಂಡ ಭಾರೀ ಪ್ರವಾಹದಿಂದಾಗಿ ಗಂಗಾವಳಿ ನದಿಗೆ ಅಡ್ಡಲಾಗಿ ಕಟ್ಟಲಾದ ರಾಜ್ಯ ಹೆದ್ದಾರಿ ಸಂಪರ್ಕಿಸುವ ಗುಳ್ಳಾಪುರದ ಸೇತುವೆಯೇ ನೀರಿನಲ್ಲಿ ಕೊಚ್ಚಿಹೋಗಿತ್ತು. 

ಶಾಸಕಿ ರೂಪಾಲಿ ನಾಯ್ಕ್, ಸಚಿವ ಶಿವರಾಮ ಹೆಬ್ಬಾರ್ ಹಾಗೂ ಇತರ ಸಚಿವರು ಮತ್ತು ಕೈಗಡಿಗೆ ಭೇಟಿ ನೀಡಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಈ ಸ್ಥಳವನ್ನು ವೀಕ್ಷಿಸಿ ಹೊಸ ಸೇತುವೆ ಮಾಡಿಸಿಕೊಡುವ ಆಶ್ವಾಸನೆ ನೀಡಿದ್ದರು. ಆದರೂ, ಇಲ್ಲಿನ ಜನರಿಗೆ ಮುರಿದ ಸೇತುವೆ ಮತ್ತೆ ಶೀಘ್ರದಲ್ಲಿ ನಿರ್ಮಾಣವಾಗುವ ಸಾಧ್ಯತೆಗಳು ಕಂಡಿರಲಿಲ್ಲ. 

Covid 19 Spike: ರಾಜ್ಯದ 6 ಜಿಲ್ಲೆಗಳಲ್ಲಿ ಸೋಂಕು ಏರಿಕೆ: 1 ರಿಂದ 9ನೇ ತರಗತಿ ಬಂದ್!

ಸಚಿವ ಶಿವರಾಮ ಹೆಬ್ಬಾರ್ ರಾಜ್ಯ ಸರಕಾರದ ನೆರೆ ಪರಿಹಾರದ‌ ಅನುದಾನದಡಿ 20 ಲಕ್ಷ ರೂ. ನೀಡಿದ್ದರಾದ್ರೂ, ಹಳೇಯ ರೀತಿಯ ಕಾಂಕ್ರೀಟ್ ಸೇತುವೆ ಬೇಕಂದ್ರೆ 60 ಲಕ್ಷ ರೂ.ನಿಂದ 1 ಕೋಟಿ ರೂ.ವರೆಗೆ ಅನುದಾನ ಬೇಕಿತ್ತು.‌ ಆದರೆ, ಸದ್ಯಕ್ಕೆ ಸಚಿವರು ಒದಗಿಸಿದ 20ಲಕ್ಷ ರೂ. ಅನುದಾನ ಹಾಗೂ ತಮ್ಮ ಹಣವನ್ನು ಕೂಡಾ ವ್ಯಯಿಸಿದ ಜನರು ತಾವೇ ಶ್ರಮ ವಹಿಸಿಕೊಂಡು ಅತ್ಯುತ್ತಮ ಹಾಗೂ ಬಲಿಷ್ಠ ಸೇತುವೆ ನಿರ್ಮಾಣ ಮಾಡಿದ್ದಾರೆ. 
 

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more