ಆಜಾದಿ ಕಾ ಅಮೃತ ಮಹೋತ್ಸವ್: ವಿಜಯಪುರದಲ್ಲಿ ಯುವಜನ ಸಂಕಲ್ಪ ನಡಿಗೆ

ಆಜಾದಿ ಕಾ ಅಮೃತ ಮಹೋತ್ಸವ್: ವಿಜಯಪುರದಲ್ಲಿ ಯುವಜನ ಸಂಕಲ್ಪ ನಡಿಗೆ

Published : Aug 05, 2022, 07:12 PM ISTUpdated : Aug 05, 2022, 07:15 PM IST

Azadi Ka Amrit Mahotsav: ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಶಾಸಕ ಎ ಎಸ್ ಪಾಟೀಲ್ ನಡಹಳ್ಳಿ ಪುತ್ರ ಭರತಗೌಡರಿಂದ ಯುವಜನ ಸಂಕಲ್ಪ ನಡಿಗೆ ಶುರುವಾಗಿದೆ

ವಿಜಯಪುರ (ಆ. 05): ಆಜಾದಿ ಕಾ ಅಮೃತಮಹೋತ್ಸವ ಹಿನ್ನೆಲೆ, ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಶಾಸಕ ಎ ಎಸ್ ಪಾಟೀಲ್ ನಡಹಳ್ಳಿ ಪುತ್ರ ಭರತಗೌಡರಿಂದ ಯುವಜನ ಸಂಕಲ್ಪ ನಡಿಗೆ ಶುರುವಾಗಿದೆ. ಆಲಮಟ್ಟಿಯಿಂದ ತಾಳಿಕೋಟೆ ವರೆಗೆ 75 ಕಿಲೋ ಮೀಟರ್ ನಡಿಗೆ ಕಾರ್ಯಕ್ರಮ ಇದಾಗಿದ್ದು, ಸಾವಿರಾರು ವಿದ್ಯಾರ್ಥಿಗಳು, ಮಾಜಿ ಸೈನಿಕರು, ಶಿಕ್ಷಕರು, ಸರ್ಕಾರಿ ನೌಕರರು, ಯುವಕರು, ಜನಪ್ರತಿನಿಧಿಗಳು ಭಾಗಿಯಾಗಿದ್ದಾರೆ.

ಆಲಮಟ್ಟಿಯ ಹರ್ಡೇಕರ ಮಂಜಪ್ಪ ಸ್ಮಾರಕ ಭವನದಿಂದ ಯುವಜನ ಸಂಕಲ್ಪ ನಡಿಗೆಗೆ ಚಾಲನೆ ಸಿಕ್ಕಿದೆ. ಯುವಜನ ಸಂಕಲ್ಪ‌ ನಡಿಗೆಗೆ ಶ್ರೀಗಳು ಚಾಲನೆ ನೀಡಿದ್ದು,  ಇಂದಿನಿಂದ ಆಲಮಟ್ಟಿಯಿಂದ ತಾಳಿಕೋಟೆ ವರೆಗೆ 75 ಕೀ.ಮಿ 8 ದಿನಗಳ ನಡಿಗೆ ಇರಲಿದೆ. ಆಲಮಟ್ಟಿ, ಹುಲ್ಲೂರು ಗೆದ್ದಲಮರಿ, ಮುದ್ದೇಬಿಹಾಳ, ನಾಲ್ವತವಾಡ, ಮಿಣಜಗಿ ಮೂಲಕ ನಡಿಗೆ ತಾಳಿಕೋಟೆ ತಲುಪಲಿದೆ.  

ಸ್ವತಂತ್ರ್ಯ ಹೋರಾಟಗಾರರ ಜನ್ಮಭೂಮಿ ವಿಜಯಪುರದ ಚಡಚಣ

ಇಡೀ ಸಂಕಲ್ಪ‌ ನಡಿಗೆಯ ನೇತೃತ್ವವನ್ನು ನಡಹಳ್ಳಿ ಪುತ್ರ ಯುವ ಉದ್ಯಮಿ ಭರತಗೌಡ ಪಾಟೀಲ್ ವಹಿಸಿದ್ದಾರೆ. ಆಗಸ್ಟ್ 12ರಂದು ಯುವಜನ ಸಂಕಲ್ಪ ನಡಿಗೆ ತಾಳಿಕೋಟೆ ತಲುಪಲಿದೆ. ಈಗಾಗಲೇ ನಡಿಗೆಗಾಗಿ 25 ಸಾವಿರ ಯುವಕ, ಯುವತಿಯರಿಂದ ಆನ್ ಲೈನ್ ಕ್ಯೂ ಆರ್ ಕೋಡ್ ಮೂಲಕ ರಿಜಿಸ್ಟ್ರೇಷನ್ ಮಾಡಿಕೊಂಡಿದ್ದಾರೆ.

ಯುವಕರಲ್ಲಿ ದೇಶ ಭಕ್ತಿಯ ಕಿಚ್ಚು ಹೆಚ್ಚಿಸೋದಕ್ಕೆ ಈ ಯುವಜನ ಸಂಕಲ್ಪ‌ ನಡಿಗೆ ಎಂದು ನಡಹಳ್ಳಿ ಪುತ್ರ ಭರತಗೌಡ ಎ ಪಾಟೀಲ್ ಹೇಳಿದ್ದಾರೆ.  ಯುವ ಜನರು ಯುವ ಜನ ಸಂಕಲ್ಪ ನಡಿಗೆಯಲ್ಲಿ ಹೆಚ್ಚೆಚ್ಚು ಭಾಗವಹಿಸಬೇಕು ಎಂದು ಶಾಸಕ ನಡಹಳ್ಳಿ ಕರೆ ನೀಡಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more