ಆಜಾದಿ ಕಾ ಅಮೃತ ಮಹೋತ್ಸವ್: ವಿಜಯಪುರದಲ್ಲಿ ಯುವಜನ ಸಂಕಲ್ಪ ನಡಿಗೆ

ಆಜಾದಿ ಕಾ ಅಮೃತ ಮಹೋತ್ಸವ್: ವಿಜಯಪುರದಲ್ಲಿ ಯುವಜನ ಸಂಕಲ್ಪ ನಡಿಗೆ

Published : Aug 05, 2022, 07:12 PM ISTUpdated : Aug 05, 2022, 07:15 PM IST

Azadi Ka Amrit Mahotsav: ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಶಾಸಕ ಎ ಎಸ್ ಪಾಟೀಲ್ ನಡಹಳ್ಳಿ ಪುತ್ರ ಭರತಗೌಡರಿಂದ ಯುವಜನ ಸಂಕಲ್ಪ ನಡಿಗೆ ಶುರುವಾಗಿದೆ

ವಿಜಯಪುರ (ಆ. 05): ಆಜಾದಿ ಕಾ ಅಮೃತಮಹೋತ್ಸವ ಹಿನ್ನೆಲೆ, ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಶಾಸಕ ಎ ಎಸ್ ಪಾಟೀಲ್ ನಡಹಳ್ಳಿ ಪುತ್ರ ಭರತಗೌಡರಿಂದ ಯುವಜನ ಸಂಕಲ್ಪ ನಡಿಗೆ ಶುರುವಾಗಿದೆ. ಆಲಮಟ್ಟಿಯಿಂದ ತಾಳಿಕೋಟೆ ವರೆಗೆ 75 ಕಿಲೋ ಮೀಟರ್ ನಡಿಗೆ ಕಾರ್ಯಕ್ರಮ ಇದಾಗಿದ್ದು, ಸಾವಿರಾರು ವಿದ್ಯಾರ್ಥಿಗಳು, ಮಾಜಿ ಸೈನಿಕರು, ಶಿಕ್ಷಕರು, ಸರ್ಕಾರಿ ನೌಕರರು, ಯುವಕರು, ಜನಪ್ರತಿನಿಧಿಗಳು ಭಾಗಿಯಾಗಿದ್ದಾರೆ.

ಆಲಮಟ್ಟಿಯ ಹರ್ಡೇಕರ ಮಂಜಪ್ಪ ಸ್ಮಾರಕ ಭವನದಿಂದ ಯುವಜನ ಸಂಕಲ್ಪ ನಡಿಗೆಗೆ ಚಾಲನೆ ಸಿಕ್ಕಿದೆ. ಯುವಜನ ಸಂಕಲ್ಪ‌ ನಡಿಗೆಗೆ ಶ್ರೀಗಳು ಚಾಲನೆ ನೀಡಿದ್ದು,  ಇಂದಿನಿಂದ ಆಲಮಟ್ಟಿಯಿಂದ ತಾಳಿಕೋಟೆ ವರೆಗೆ 75 ಕೀ.ಮಿ 8 ದಿನಗಳ ನಡಿಗೆ ಇರಲಿದೆ. ಆಲಮಟ್ಟಿ, ಹುಲ್ಲೂರು ಗೆದ್ದಲಮರಿ, ಮುದ್ದೇಬಿಹಾಳ, ನಾಲ್ವತವಾಡ, ಮಿಣಜಗಿ ಮೂಲಕ ನಡಿಗೆ ತಾಳಿಕೋಟೆ ತಲುಪಲಿದೆ.  

ಸ್ವತಂತ್ರ್ಯ ಹೋರಾಟಗಾರರ ಜನ್ಮಭೂಮಿ ವಿಜಯಪುರದ ಚಡಚಣ

ಇಡೀ ಸಂಕಲ್ಪ‌ ನಡಿಗೆಯ ನೇತೃತ್ವವನ್ನು ನಡಹಳ್ಳಿ ಪುತ್ರ ಯುವ ಉದ್ಯಮಿ ಭರತಗೌಡ ಪಾಟೀಲ್ ವಹಿಸಿದ್ದಾರೆ. ಆಗಸ್ಟ್ 12ರಂದು ಯುವಜನ ಸಂಕಲ್ಪ ನಡಿಗೆ ತಾಳಿಕೋಟೆ ತಲುಪಲಿದೆ. ಈಗಾಗಲೇ ನಡಿಗೆಗಾಗಿ 25 ಸಾವಿರ ಯುವಕ, ಯುವತಿಯರಿಂದ ಆನ್ ಲೈನ್ ಕ್ಯೂ ಆರ್ ಕೋಡ್ ಮೂಲಕ ರಿಜಿಸ್ಟ್ರೇಷನ್ ಮಾಡಿಕೊಂಡಿದ್ದಾರೆ.

ಯುವಕರಲ್ಲಿ ದೇಶ ಭಕ್ತಿಯ ಕಿಚ್ಚು ಹೆಚ್ಚಿಸೋದಕ್ಕೆ ಈ ಯುವಜನ ಸಂಕಲ್ಪ‌ ನಡಿಗೆ ಎಂದು ನಡಹಳ್ಳಿ ಪುತ್ರ ಭರತಗೌಡ ಎ ಪಾಟೀಲ್ ಹೇಳಿದ್ದಾರೆ.  ಯುವ ಜನರು ಯುವ ಜನ ಸಂಕಲ್ಪ ನಡಿಗೆಯಲ್ಲಿ ಹೆಚ್ಚೆಚ್ಚು ಭಾಗವಹಿಸಬೇಕು ಎಂದು ಶಾಸಕ ನಡಹಳ್ಳಿ ಕರೆ ನೀಡಿದ್ದಾರೆ. 

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more