ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್: ದರ್ಶನ್ ಫ್ಯಾನ್ಸ್‌ಗೆ ಸಂಕಷ್ಟ

ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್: ದರ್ಶನ್ ಫ್ಯಾನ್ಸ್‌ಗೆ ಸಂಕಷ್ಟ

Published : Jul 29, 2025, 04:26 PM IST
ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ ಎಂದಿದ್ದಕ್ಕೆ ರಮ್ಯಾ ಅವರನ್ನು ಅಶ್ಲೀಲವಾಗಿ ನಿಂದಿಸಿದ್ದ ದರ್ಶನ್ ಅಭಿಮಾನಿಗಳ ವಿರುದ್ಧ ರಮ್ಯಾ ಪೊಲೀಸ್ ದೂರು ನೀಡಿದ್ದಾರೆ. ಸೈಬರ್ ಕ್ರೈಂ ವಿಭಾಗಕ್ಕೆ ದೂರು ವರ್ಗಾವಣೆಯಾಗಿದ್ದು, ಕಿಡಿಗೇಡಿಗಳಿಗೆ ಶೀಘ್ರದಲ್ಲೇ ತಕ್ಕ ಶಾಸ್ತಿಯಾಗಲಿದೆ.

ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ ಅಂದಿದ್ದಕ್ಕೆ ರಮ್ಯಾ ಮೇಲೆ ಮುಗಿಬಿದ್ದು, ಅಶ್ಲೀಲವಾಗಿ ಕಾಮೆಂಟ್ ಮಾಡಿದ್ದ ಫ್ಯಾನ್ಸ್​ಗೀಗ ನಡುಕ ಶುರುವಾಗಿದೆ. ಇವರು ಕಳಿಸಿದ ಕೆಟ್ಟ ಮೆಸೇಜ್ ಗಳನ್ನ ನೋಡಿ ಕಣ್ಣೀರು ಹಾಕ್ತಾ ಕೂರವಂಥಾ ಹೆಣ್ಣಲ್ಲ ರಮ್ಯಾ. ತನಗೆ ಅಶ್ಲೀಲ ಮೆಸೇಜ್ ಮಾಡಿ, ನಿಂದಿಸಿದ್ದ ದರ್ಶನ್ ಅಭಿಮಾನಿಗಳ ಅಕೌಂಟ್​ ಪಟ್ಟಿ ಮಾಡಿ ಸೀದಾ ಕಮೀಷನರ್ ಕಚೇರಿಗೆ ಬಂದು ದೂರು ಕೊಟ್ಟಿದ್ದಾರೆ.

ರಮ್ಯಾ  ದೂರಿನಲ್ಲಿ ತಮಗೆ ಅಶ್ಲೀಲ ಮಸೇಜ್ ಕಳಿಹಿದವರ ಅಕೌಂಟ್​ಗಳನ್ನ ಪಟ್ಟಿ ಮಾಡಿ ಕೊಟ್ಟಿದ್ದಾರೆ. ಈಗಾಗ್ಲೇ ಇದನ್ನ ಸೈಬರ್​ ಕ್ರೈಂ ಡಿಪಾರ್ಟ್​​ಮೆಂಟ್​ಗೆ ವರ್ಗಾಯಿಸಲಾಗಿದ್ದು ಸದ್ಯದಲ್ಲೇ ಕಿಡಿಗೇಡಿ ಫ್ಯಾನ್ಸ್​ಗೆ ಬಿಸಿ ಕಜ್ಜಾಯ ಕಾದಿದೆ. ಇದು ತನಗೆ ಮೆಸೇಜ್ ಮಾಡಿದವರಿಗೆ ಮಾತ್ರ ಅಲ್ಲ ಹೆಣ್ಣುಮಕ್ಕಳನ್ನ ನಿಂದಿಸುವ ಎಲ್ಲರಿಗೂ ಪಾಠ ಅಗಬೇಕು ಅನ್ನೋದು ರಮ್ಯಾ ನಿಲುವು.

ದರ್ಶನ್ ತಮ್ಮ ಅಭಿಮಾನಿಗಳು ಈ ರೀತಿ ಪುಂಡಾಟ ಆಡೋದನ್ನ ನೋಡಿಯೂ ನಿರ್ಲಕ್ಷ ವಹಿಸಿದ್ದೇ ತಪ್ಪು. ಅವರು ಅವರ ಅಭಿಮಾನಿಗಳಿಗೆ ತಿದ್ದಿ ಬುದ್ದಿ ಹೇಳಿದ್ರೆ ಇಂಥದ್ದೆಲ್ಲಾ ನಡೀತಾನೇ ಇರಲಿಲ್ಲ ಅಂತಾರೆ ರಮ್ಯಾ. ದರ್ಶನ್ ಜೊತೆ ರಮ್ಯಾ ನಟಿಸಿದ್ದು ಒಂದೇ ಒಂದು ಸಿನಿಮಾದಲ್ಲಿ. ದತ್ತ ಸಿನಿಮಾ ಮಾಡೋವಾಗ ದರ್ಶನ್ ಮತ್ತು ರಮ್ಯಾ ನಡುವೆ ಒಳ್ಳೆ ಒಡನಾಟ ಇತ್ತು. ಆದ್ರೆ ದರ್ಶನ್ ಪತ್ನಿ ಮೇಲೆ ಹಲ್ಲೆ ಮಾಡಿ ಮೊದಲ ಬಾರಿ ಅರೆಸ್ಟ್ ಆದಾಗಲೇ ರಮ್ಯಾ ದರ್ಶನ್​ ಜೊತೆಗಿನ ನಂಟನ್ನ ಕಡಿದುಕೊಂಡ್ರು. ಸದ್ಯ ತನ್ನ ಬಳಿ ದರ್ಶನ್ ನಂಬರ್ ಕೂಡ ಇಲ್ಲ ಅಂದಿದ್ದಾರೆ ರಮ್ಯಾ.

ರಮ್ಯಾಗೆ ಈ ವಿಚಾರದಲ್ಲಿ ಸ್ಯಾಂಡಲ್​ವುಡ್​ನ ಹಲವು ತಾರೆಯರು ಬೆಂಬಲಕ್ಕೆ ನಿಂತಿದ್ದಾರೆ.  ಮಹಿಳಾ ಆಯೋಗ   ಕೂಡ ಈ ಬಗ್ಗೆ ಪೊಲೀಸರಿಗೆ ಪತ್ರ ಬರೆದು ಅಶ್ಲೀಲವಾಗಿ ನಿಂದಿಸಿದ್ದ ಕೆಡಿಗಳ ವಿರುದ್ದ ಕ್ರಮಗೊಳ್ಳವುಂತೆ ಒತ್ತಾಯಿಸಿದೆ. ಫೈರ್ ಸಂಘಟನೆ ಕೂಡ ರಮ್ಯಾ ಬೆಂಬಲಕ್ಕೆ ನಿಂತಿದ್ದು ತ್ವರಿತ ಕ್ರಮಕೈಗೊಳ್ಳಿ ಅಂತ ಸರ್ಕಾರಕ್ಕೆ ಒತ್ತಾಯಿಸಿದೆ. ಒಟ್ಟಾರೆ ಇಷ್ಟು ದಿನ ಕಂಡ ಕಂಡ ಹೆಣ್ಣುಮಕ್ಕಳಿಗೆ ಕೆಟ್ಟದಾಗಿ ನಿಂದಿಸಿ ಬಚಾಬ್ ಆಗ್ತಿದ್ದ ಕಾಮೆಂಟ್ ಕೀಚಕರಿಗೆ ಈಗ ನಡುಕ ಶುರುವಾಗಿದೆ. ಆ ಕೀಚಕರ ಮುಖವಾಡ ಕಳಚುವ ಸಮಯ ಬಂದಿದೆ. 

05:51ರಿಷಬ್ ನಟನೆಯ 'ಛತ್ರಪತಿ ಶಿವಾಜಿ' ಚಿತ್ರ ಬರಲ್ವಾ..? ರಿತೇಶ್ ದೇಶಮುಖ್ 'ರಾಜಾ ಶಿವಾಜಿ' ಆಗಿ ರಿಲೀಸ್​ಗೆ ರೆಡಿ!
25:41ನಟಿ ಸೌಮ್ಯಾ ಶೆಟ್ಟಿ ಗಂಡ ಕರಾವಳಿ ಉದ್ಯಮಿ ಸುದೀಪ್ ಶೆಟ್ಟಿ ಮದುವೆಯಾಗಿ ಒಂದೇ ತಿಂಗಳಲ್ಲಿ ಸತ್ತಿದ್ದು ಹೇಗೆ?
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
07:48ನಟಿ ಸೌಮ್ಯಾ ಶೆಟ್ಟಿ ಗಂಡ ಸುದೀಪ್ ಶೆಟ್ಟಿ ಆತ್ಮ*ಹತ್ಯೆ ಪ್ರಕರಣ: ಪೊಲೀಸ್ ಠಾಣೆಗೆ ಕಂಪ್ಲೇಂಟ್ ಕೊಟ್ಟ ಮಾವ!
06:20'ಕಿಸ್' ಬ್ಯೂಟಿಗೆ ಬೆನ್ನುಬಿಡದ ಬ್ಯಾಡ್​ಲಕ್; ಶ್ರೀಲೀಲಾ ಕುಣಿದ ಸಾಂಗ್ಸ್ ಹಿಟ್, ಆದ್ರೆ ಸಿನಿಮಾಗಳೆಲ್ಲಾ ಫ್ಲಾಪ್..!
06:036 ದಿನ, 800 ಕೋಟಿ ಕ್ಲಬ್: ಮುಂದುವರಿದ ಧುರಂಧರ್ ಮ್ಯಾಜಿಕ್.. ರೀಲ್ಸ್ ಕಾಲದಲ್ಲೂ ಸುದೀರ್ಘ ಸಿನಿಮಾ ಮೆಚ್ಚಿದ ಜನ
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
06:50ತಾವಾಯ್ತು ತನ್ನ ಸಿನಿಮಾ ಆಯ್ತು ಅಂತ ಇರೋ Rocking Star Yash ಕಟ್ಟಿದ ಕೋಟೆಗೆ ತಲೆ ಬೇನೆ ಆಗ್ತಿರೋರು ಯಾರು?
04:21ಪ್ರಿಯತಮನ ಜೊತೆ ಹೊಸ ವರ್ಷ ಬರಮಾಡಿಕೊಂಡ ಮದುಮಗಳು Rashmika Mandanna; ಮಾರ್ಚ್‌ವೊಳಗಡೆ ಸಂಸಾರಿ!
07:10ಕಾಪಾಡು ಚಾಮುಂಡಿ..! ಶಕ್ತಿ ದೇವತೆ ಮೊರೆಹೋದ ಕಿಚ್ಚ ಸುದೀಪ್‌, ವಿಜಯಲಕ್ಷ್ಮೀ ದರ್ಶನ್!
Read more