ಅಗ್ನಿಪಥ್‌ ಜಾರಿಗೆ ಮೊದಲೇ ಚಿಂತನೆ ನಡೆಸಿಲ್ಲವೇ? ರಾಜನಾಥ್ ಸಿಂಗ್ ಹೇಳಿದ್ದೇನು?

Jun 19, 2022, 4:14 PM IST

ಭಾರತದ ರಕ್ಷಣಾ ಪಡೆಗಳಾದ ಭೂ ಸೇನೆ ವಾಯುಸೇನೆ ಹಾಗೂ ನೌಕಾಪಡೆಗೆ ಸಿಬ್ಬಂದಿಯನ್ನು ನೇಮಕ ಮಾಡುವ ಹೊಸ ನೇಮಕಾತಿ ಯೋಜನೆ ಅಗ್ನಿಪಥ್‌ಗೆ ಸಂಬಂಧಿಸಿದಂತೆ ದೇಶಾದ್ಯಂತ ಯುವಕರು ಪ್ರತಿಭಟನೆ ನಡೆಸುತ್ತಿದ್ದು, ಹಲವೆಡೆ ಹಿಂಸಾಚಾರ ನಡೆದಿದೆ. ಈ ಯೋಜನೆಯನ್ನು ಕೇಂದ್ರ ಸರ್ಕಾರ ಜೂನ್ 14 ರಂದು ಘೋಷಣೆ ಮಾಡಿತ್ತು. ಆದರೆ ಈ ಯೋಜನೆಯನ್ನು ಘೋಷಣೆ ಮಾಡುವ ಮೊದಲು ಸರ್ಕಾರ ಯಾವುದೇ ಸಿದ್ಧತೆ ನಡೆಸಿರಲಿಲ್ಲವೇ ಎಂಬ ಪ್ರಶ್ನೆ ಮೂಡಿತ್ತು. ಆದರೆ ಯೋಜನೆಯ ಪ್ರಕಾರವೇ ಇದು ಕಾರ್ಯರೂಪಕ್ಕೆ ಬಂದಿದೆ. ಇದರ ಹಿಂದೆ ಯಾವುದೇ ಒತ್ತಡ ಇಲ್ಲ. ಇನ್ನಷ್ಟು ಯೋಜನೆಗಳನ್ನು ಕಾರ್ಯರೂಪಕ್ಕೆ ತರಲಿದ್ದೇವೆ ಎಂದು ರಾಜನಾಥ್ ಸಿಂಗ್‌ ಹೇಳಿದ್ದಾರೆ.