ಲೋಕಾಯುಕ್ತ ದಾಳಿ: ಸಿಎಂ ಬೊಮ್ಮಾಯಿ ಫಸ್ಟ್ ರಿಯಾಕ್ಷನ್

ಲೋಕಾಯುಕ್ತ ದಾಳಿ: ಸಿಎಂ ಬೊಮ್ಮಾಯಿ ಫಸ್ಟ್ ರಿಯಾಕ್ಷನ್

Published : Mar 03, 2023, 02:35 PM IST

ಬಿಜೆಪಿ ಚೆನ್ನಗಿರಿ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್ ನಿನ್ನೆ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು: ಬಿಜೆಪಿ ಚೆನ್ನಗಿರಿ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್ ನಿನ್ನೆ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಪ್ರತಿಕ್ರಿಯಿಸಿದ್ದಾರೆ.  ಲೋಕಾಯುಕ್ತ ಸ್ಥಾಪಿಸಿದ್ದೆ ಭ್ರಷ್ಟಾಚಾರ ನಿರ್ಮೂಲನೆಗಾಗಿ,  ಆದರೆ ಇದನ್ನು ಕಾಂಗ್ರೆಸ್ ಸರ್ಕಾರವಿದ್ದಾಗ ಮುಚ್ಚಲಾಯಿತು. ನ್ಯಾಯ ಸಮ್ಮತವಾಗಿ ತನಿಖೆಯಾಗಲಿ ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ ಎಂದು ಸಿಎಂ ಹೇಳಿದರು. ಲೋಕಾಯುಕ್ತ ಮುಚ್ಚಿದ್ದೆ  ಕಾಂಗ್ರೆಸ್‌ನವರು, ನಾವಲ್ಲ, ನಮಗೆ ಏನನ್ನು ಮುಚ್ಚಿಡುವ ಅಗತ್ಯವಿಲ್ಲ. ಕಾಂಗ್ರೆಸ್‌ನವರು ಈ ಪ್ರಕರಣವನ್ನು ಇಟ್ಟುಕೊಂಡು ತಾವು ಸಾಚಾ ಎಂದು ಬಿಂಬಿಸುವ ಪ್ರಯತ್ನವನ್ನು ಮಾಡುತ್ತಿದ್ದಾರೆ. ಆದರೆ ಇದು ಸಾಧ್ಯವಿಲ್ಲ. ಕಾಂಗ್ರೆಸ್ ಮುಚ್ಚಿ ಹಾಕಿದ ಪ್ರಕರಣವನ್ನು ಕೂಡ ಲೋಕಾಯುಕ್ತಕ್ಕೆ ನೀಡಿ ತನಿಖೆ ಮಾಡಲಾಗುವುದು ಎಂದು ಸಿಎಂ ಹೇಳಿದ್ದಾರೆ.  ನಿನ್ನೆ BWSS ನಲ್ಲಿ ಚೀಫ್ ಇಂಜಿನಿಯರ್ ಆಗಿರುವ ಪ್ರಶಾಂತ್ ಮಾಡಾಳ್ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಕೆಡವಿತ್ತು. ಇದಾದ ಮೇಲೆ ಇಂದು ಕೂಡ ಪ್ರಶಾಂತ್ ಮಾಡಾಳ್ ನಿವಾಸ ಕಚೇರಿ ಮೇಲೆ ದಾಳಿ ನಡೆಸಿದ್ದು, ಕೋಟಿ ಕೋಟಿ ಹಣ ಪತ್ತೆಯಾಗಿದೆ. 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!