Apr 21, 2019, 5:52 PM IST
ಸಿಎಂ ಕುಮಾರಸ್ವಾಮಿಯವರಿಗೆ ಅನಾರೋಗ್ಯ ಉಂಟಾಗಿದ್ದು ಚಿಕಿತ್ಸೆಗಾಗಿ ಉಡುಪಿಯ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ತೆರಳಿದ್ದಾರೆ. ಸಿಎಂ ಇಂದು ಬೆಳಿಗ್ಗೆ ಯಿಂದ ಯಾವುದೇ ಪೂರ್ವನಿಯೋಜಿತ ಕಾರ್ಯಕ್ರಮದಲ್ಲಿ ಪಾಲ್ಗೊಂಡಿಲ್ಲ. ಬಿಡುವಿಲ್ಲದ ಚುನಾವಣಾ ಪ್ರಚಾರದಿಂದ ಗಂಟಲು ಬೇನೆ , ಭುಜ ಹಾಗೂ ಕೈ ನೋವಿನಿಂದ ಬಳಲುತ್ತಿದ್ದಾರೆ.