News hour: ಜೆಡಿಎಸ್‌ ಭದ್ರಕೋಟೆಯಲ್ಲಿ ಕಾಂಗ್ರೆಸ್‌ ದಾಳ: ಕುಮಾರಸ್ವಾಮಿಗೆ ಚೆಕ್‌ ಇಟ್ಟ ಡಿಕೆಶಿವಕುಮಾರ್

News hour: ಜೆಡಿಎಸ್‌ ಭದ್ರಕೋಟೆಯಲ್ಲಿ ಕಾಂಗ್ರೆಸ್‌ ದಾಳ: ಕುಮಾರಸ್ವಾಮಿಗೆ ಚೆಕ್‌ ಇಟ್ಟ ಡಿಕೆಶಿವಕುಮಾರ್

Published : Jan 21, 2023, 11:17 PM IST

ಜೆಡಿಎಸ್‌ ಭದ್ರಕೋಟೆ ಹಾಸನದಲ್ಲಿ ಕಾಂಗ್ರೆಸ್‌ ಚದುರಂಗದಾಟ
ಕಾಂಗ್ರೆಸ್‌ ಪ್ರಜಾಧ್ವನಿಯಾತ್ರೆಗೆ ಜೆಡಿಎಸ್‌ ಪಾಳಯದಲ್ಲಿ ನಡುಕ ಶುರು
ತೆಲಂಗಾಣ ಸಿಎಂ ಕೆಸಿಆರ್‌ ಭೇಟಿಯಾಗಿ ಡೀಲ್‌ ಪಡೆದುಕೊಂಡರೇ ಜಮೀರ್‌ ಅಹಮದ್‌
ಕೋಲಾರದಲ್ಲಿ ಸಿದ್ದರಾಮ್ಯ ಸೋಲಿಸುವಂತೆ ಕರಪತ್ರ ಅಭಿಯಾನ
 

ಬೆಂಗಳೂರು (ಜ.21): ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡರ ತವರಿನಲ್ಲಿ ಕಾಂಗ್ರೆಸ್‌ ರಣಕಹಳೆಯನ್ನು ಆರಂಭಿಸಿದೆ. ಕಾಂಗ್ರೆಸ್‌ನಿಂದ ಹಾಸನ ಮತ್ತು ಚಿಕ್ಕಮಗಳೂರಿನಲ್ಲಿ ದೊಡ್ಡ ಮಟ್ಟದಲ್ಲಿ ಪ್ರಜಾಧ್ವನಿ ಕಾರ್ಯಕ್ರಮವನ್ನು ಆರಂಭಿಸಿದೆ. ದಿನಕ್ಕೆ 2 ದೊಡ್ಡ ನಗರಗಳನ್ನು ಕವರ್‌ ಮಾಡುತ್ತಿದ್ದು, ತನ್ನ ಪ್ರಚಾರ ಕಾರ್ಯವನ್ನು ಆರಂಭಿಸಿದೆ. ಹಾಸನದಲ್ಲಿ ಅದ್ಧೂರಿಯಾಗಿ ಸಮಾವೇಶ ನಡೆಯಿತು. ಸೇಬಿನ ಹಾರ, ಹೂವಿನ ಹಾರ, ಮಹಿಳೆಯರಿಂದ ಕುಂಭವನ್ನು ಹಿಡಿದು ಸ್ವಾಗತಿಸಿದರು. ಇನ್ನು ವೇದಿಕೆಯಲ್ಲಿ 'ಸಿದ್ಧರಾಮಯ್ಯ ಹಿಡಿದ ಬಡವರ ಕೈಯಾ' ಎಂಬ ಹಾಡು ಹಾಡುವುದನ್ನು ತಡೆದ ಸಂಸದ ಡಿ.ಕೆ. ಶಿವಕುಮಾರ್‌ ದೊಡ್ಡ ಸಮಾವೇಶದಲ್ಲಿ ವ್ಯಕ್ತಿ ಪೂಜೆ ಬೇಡವೆಂದು ತಿಳಿಸಿದರು. 

ಮಂಡ್ಯದಲ್ಲಿ ಗರಿಗೆದರಿದ ಕಾಂಗ್ರೆಸ್‌ ರಾಜಕೀಯ: ಜೆಡಿಎಸ್‌ನಿಂದ ಹೊರದೂಡಲ್ಪಟ್ಟ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಅವರು ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಸಹೋದರನ ಮಗ ಮದ್ದೂರು ವಿಧಾನಸಭಾ ಕ್ಷೇತ್ರದ ಸಂಭಾವ್ಯ ಅಭ್ಯರ್ಥಿ ಆಗಿರುವ ಗುರುಚರಣ್‌ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರನ್ನು ಭೇಟಿ ಮಾಡಿದ್ದರು. ಅಲ್ಲಿ ಶಿವರಾಮೇಗೌಡ ಅವರನ್ನು ನಾಗಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಕಣಕ್ಕಿಳಿಸುವ ಮತ್ತು ಅಲ್ಲಿನ ಚಲುವರಾಯಸ್ವಾಮಿ ಅವರನ್ನು ಮಂಡ್ಯದಿಂದ ಕಣಕ್ಕಿಳಿಸುವ ಕುರಿತು ಚರ್ಚೆ ನಡೆಯಿತು ಎಂದು ತಿಳಿದುಬಂದಿದೆ. ಇನ್ನು ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರನ್ನು ಸ್ಪರ್ಧೆ ಮಾಡುವಂತೆ ಗುರುಚರಣ್‌ ಮನವಿ ಮಾಡಿದ್ದಾರೆ.

Assembly election: ಕಾಂಗ್ರೆಸ್‌ ಸೋಲಿಸಲು ತೆಲಂಗಾಣ ಸಿಎಂ 500 ಆಫರ್‌: ಖೆಡ್ಡಾಕ್ಕೆ ಬಿದ್ರಾ ಜಮೀರ್ ಅಹಮದ್‌

ಕೋಲಾರದಲ್ಲಿ ಸಿದ್ದು ವಿರೋಧಿಸಿ ಕರಪತ್ರ: ಕೋಲಾರದಲ್ಲಿ ಸಿದ್ದರಾಮಯ್ಯ ಅವರು ಸ್ಪರ್ಧೆ ಮಾಡುತ್ತಿದ್ದಾರೆ. ಅವರು ದಲಿತ ವಿರೋಧಿಗಳು ಆಗಿದ್ದಾರೆ. ದಲಿತ ನಾಯಕ ಪರಮೇಶ್ವರ ಅವರನ್ನು ಸೋಲಿಸಿ ಮುಖ್ಯಮಂತ್ರಿ ಆಗುವುದನ್ನು ತಡೆದಿದ್ದಾರೆ. ಸ್ವಾಭಿಮಾನಿ ಕೋಲಾರದ ಜನರು ಸಿದ್ದರಾಮಯ್ಯ ಅವರು ಸಿದ್ದರಾಮಯ್ಯ ಅವರನ್ನು ಸೋಲಿಸಬೇಕು. ದಲಿತ ವಿರೋಧಿ ಮನುಷ್ಯನ್ನು ಸೋಲಿಸುವ ಮೂಲಕ ಅವರ ಹುಟ್ಟೂರು ಸಿದ್ಧರಾಮನ ಹುಂಡಿಗೆ ಕಳುಹಿಸಬೇಕು. 

ತೆಲಂಗಾಣದ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್‌ ಅವರು ತಮ್ಮ ಪಕ್ಷವನ್ನು ಭಾರತ ರಾಷ್ಟ್ರ ಸಮಿತಿ ಪಕ್ಷವನ್ನು ಕಟ್ಟಿ ಜೆಡಿಎಸ್‌ನೊಂದಿಗೆ ಒಪ್ಪಂದ ಮಾಡಿಕೊಂಡಿದ್ದಾರೆ. ಕರ್ನಾಟಕದ ಕಾಂಗ್ರೆಸ್‌ ಮುಖಂಡರ ಜೊತೆಗೆ ಒಪ್ಪಂದ ಮಾಡಿಕೊಂಡಿದ್ದು, ಕಾಂಗ್ರೆಸ್‌ನ 25-30 ಅಭ್ಯರ್ಥಿಗಳನ್ನು ಸೋಲಿಸಬೇಕು ಎಂದು 500 ರೂ. ಹಣವನ್ನು ಕೊಡಲಾಗಿದೆ. ಇತ್ತೀಚೆಗಷ್ಟೇ ಚಾಮರಾಜಪೇಟೆ ಶಾಸಕ ಜಮೀರ್‌ ಅಹಮದ್‌ ಅವರು, ತೆಲಂಗಾಣ ಸಿಎಂ ಕೆ. ಚಂದ್ರಶೇಖರ್‌ ರಾವ್‌ ಅವರನ್ನು ಭೇಟಿ ಮಾಡಿದ್ದರು. ಈಗ ಅವರ ಮೇಲೆಯೇ ನೇರ ಆರೋಪ ಕೇಳಿಬಂದಿದೆ.

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?
Read more