ಉಪಸಮರಕ್ಕಾಗಿ ಕೈ ತಯಾರಿ: ಸಿದ್ದರಾಮಯ್ಯ ಸಭೆಗಳೆಲ್ಲಾ ಭರ್ಜರಿ!

Sep 26, 2019, 2:57 PM IST

ಬೆಂಗಳೂರು(ಸೆ.26): ಉಪಸಮರಕ್ಕಾಗಿ ಸಜ್ಜಾಗಿ ನಿಂತಿರುವ ಪ್ರತಿಪಕ್ಷ ಕಾಂಗ್ರೆಸ್, ಇಂದು ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ ಮಾಡಲಿದೆ. ಇಂದು ರಾಜ್ಯ ನಾಯಕರೊಂದಿಗೆ ಸಭೆ ನಡೆಸಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ಯಾರಿಗೆ ಟಿಕೆಟ್ ಕೊಟ್ಟರೂ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂಬ ಸಂದೇಶ ರವಾನಿಸಿದ್ದಾರೆ. ಅದರಂತೆ ಟಿಕೆಟ್ ಆಕಾಂಕ್ಷಿಗಳು ಹಾಗೂ ಸ್ಥಳೀಯ ಕಾರ್ಯಕರ್ತರೊಂದಿಗೆ ಸಭೆ ನಡೆಸಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಒಗ್ಗಾಟ್ಟಾಗಿ ಚುನಾವಣೆ ಎದುರಿಸುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..