ಬೊಕ್ಕಸ ಖಾಲಿ: ರಾಜೀನಾಮೆ ನೀಡಲು ಬಿಎಸ್‌ವೈಗೆ ಒತ್ತಾಯ

Oct 4, 2019, 4:27 PM IST

ಬೆಂಗಳೂರು (ಅ.04): ರಾಜ್ಯ ಬೊಕ್ಕಸ ಖಾಲಿಯಾಗಿದೆ, ನೆರೆ ಪರಿಹಾರಕ್ಕೆ ದುಡ್ಡಿಲ್ಲ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿರುವ ಬೆನ್ನಲ್ಲಿ ಪ್ರತಿಪಕ್ಷಗಳು ವಾಗ್ದಾಳಿ ಆರಂಭಿಸಿವೆ. ನಿಮ್ಮ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಒಪ್ಪಿಕೊಂಡ ನಂತರ ಒಂದು ಕ್ಷಣ ಕೂಡಾ ಅಧಿಕಾರದಲ್ಲಿ ಮುಂದುವರಿಯುವ ಅರ್ಹತೆ ನಿಮಗಿಲ್ಲ. ದಯವಿಟ್ಟು ರಾಜೀನಾಮೆ ಕೊಟ್ಟು ಹೊರಟುಬಿಡಿ. ನಿಮ್ಮ ಅಸಾಮರ್ಥ್ಯಕ್ಕಾಗಿ ರಾಜ್ಯದ ಜನರನ್ನು ಶಿಕ್ಷಿಸಬೇಡಿ, ಎಂದು ಸಿದ್ದರಾಮಯ್ಯ ಹೇಳಿದ್ದಾರೆ.