ಪ್ರೇಮಿಗಾಗಿ ಸರ್ವಸ್ವವನ್ನೇ ಕೊಟ್ಟ 25ರ ಯುವತಿ! ಆಕೆ ಗರ್ಭಿಣಿ ಎಂದು ತಿಳಿಯುತ್ತಿದ್ದಂತೆಯೇ ಕೈಕೊಟ್ಟ ಲವರ್ ಬಾಯ್!

ಪ್ರೇಮಿಗಾಗಿ ಸರ್ವಸ್ವವನ್ನೇ ಕೊಟ್ಟ 25ರ ಯುವತಿ! ಆಕೆ ಗರ್ಭಿಣಿ ಎಂದು ತಿಳಿಯುತ್ತಿದ್ದಂತೆಯೇ ಕೈಕೊಟ್ಟ ಲವರ್ ಬಾಯ್!

Published : Nov 10, 2025, 07:38 PM IST
ನಾಲ್ಕು ವರ್ಷಗಳಿಂದ ಪ್ರೀತಿಸುತ್ತಿದ್ದ ಯುವತಿಗೆ ಪ್ರಿಯಕರ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾನೆ. ಆಕೆ ಗರ್ಭಿಣಿ ಎಂದು ತಿಳಿದಾಗ ಮದುವೆಗೆ ನಿರಾಕರಿಸಿದ್ದರಿಂದ ಮನನೊಂದ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನಲ್ಲಿ ನಡೆದಿದೆ.

ಅವರಿಬ್ಬರೂ ಕಳೆದ ನಾಲ್ಕು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ನಿನ್ನನ್ನೇ ಮದುವೆಯಾಗ್ತೇನೆ ಅಂತ ಹುಡುಗ ಹುಡುಗಿಗೆ ಪ್ರಾಮೀಸ್ ಕೂಡಾ ಮಾಡಿದ್ದ, ಅದನ್ನು ನಂಬಿದ ಆಕೆ ಕೊನೆಗೆ ಅನುಭವಿಸಿದ್ದು ಮಾತ್ರ ದುರಂತ.

ಪ್ರಿಯಕರನ ಬಣ್ಣ ಬಣ್ಣದ ಮಾತುಗಳನ್ನ ನಂಬಿ ಸರ್ವಸ್ವವನ್ನೂ ಒಪ್ಪಿಸಿದ ಚೆಲುವೆ, ಆತನ ಮೋಸದಾಟಕ್ಕೆ ಬಲಿಯಾಗಿ ಹೆಣವಾಗಿದ್ದಾಳೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಕುದರಿಹಾಳ ಗ್ರಾಮದ 25 ವರ್ಷ ವಯಸ್ಸಿನ ಸಿಂಧು ಪ್ರೀತಿ ಪಾಶಕ್ಕೆ ಸಿಲುಕಿ ಜೀವಬಿಟ್ಟ ದುರ್ದೈವಿ.

ಸಿಂಧು ಮೂಲತಃ ಬ್ಯಾಡಗಿ ತಾಲೂಕಿನ ಶಂಕ್ರಿಕೊಪ್ಪ ಗ್ರಾಮದ ನಿವಾಸಿ. ತನ್ನ ಅಜ್ಜ ಅಜ್ಜಿ ಜೊತೆಗೆ ರಾಣೆಬೆನ್ನೂರು ತಾಲೂಕಿನ ಹಲಗೇರಿ ಗ್ರಾಮದಲ್ಲಿ ವಾಸವಿದ್ದಳು. ಸಿಂಧುಗೆ ತನ್ನ ಗೆಳತಿ ಮೂಲಕ ಪರಿಚಯವಾದವನೇ ಈತ ಶರತ್​​. ಇವರಿಬ್ಬರ ಪರಿಚಯ ಪ್ರೀತಿಗೆ ತಿರುಗಿ ನಾಲ್ಕು ವರ್ಷ ಜತೆಯಲ್ಲಿ ಸುತ್ತಾಡಿದ್ರು. ಮದುವೆ ಆಗುವುದಾಗಿ ನಂಬಿಸಿ ಆಕೆ ಜತೆ ದೈಹಿಕ ಸಂಪರ್ಕ ಮಾಡಿದ್ದಾನೆ. ಆದ್ರೆ ಅದ್ಯಾವಾಗ ಸಿಂಧು ಮೂರು ತಿಂಗಳ ಗರ್ಭಿಣಿ ಅಂತಾ ಗೊತ್ತಾಯ್ತೋ ಶರತ್​ ಉಲ್ಟಾ ಹೊಡೆದಿದ್ದಾನೆ. ಮದುವೆಯಾಗಲ್ಲ ಅಂತಾ ಕ್ಯಾತೆ ತೆಗೆದಿದ್ದಾನೆ. ಇದ್ರಿಂದ ಮನನೊಂದ ಸಿಂಧು ನಿನ್ನೆ ಮನೆಯಲ್ಲೇ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾಳೆ.

20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
Read more