ನಾನೇನ್ ಮಾಡ್ಲಿ: ಅಲೋಕ್ ಮನೆ ಮೇಲೆ ಸಿಬಿಐ ದಾಳಿಗೆ ಹೆಚ್ಡಿಕೆ ಪ್ರತಿಕ್ರಿಯೆ!

Sep 26, 2019, 6:24 PM IST

ಬೆಂಗಳೂರು(ಸೆ.26): ಫೋನ್ ಟ್ಯಾಪಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಮನೆ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದು, ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಸಿಬಿಐ ಯಾರ ಮನೆ ಮೇಲೆ ದಾಳಿ ಮಾಡಿಕೊಳ್ಳಲಿ ಅದಕ್ಕೆ ನಾನೇನು ಮಾಡಲಿ ಎಂದು ಪ್ರಶ್ನಿಸಿದ್ದಾರೆ. ಸಿಬಿಐ ನಾಳೆ ನನ್ನ ಮನೆಗೂ ಬರಬಹುದು ಎಂದಿರುವ ಕುಮಾರಸ್ವಾಮಿ, ಸಿಬಿಐ ಅಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ. 

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..