ರೇವಣ್ಣಗೂ ಸಿಎಂ ಆಗುವ ಅರ್ಹತೆಯಿದೆ: ಸಿಎಂಗೆ ಸಿದ್ದು ಗುದ್ದು

May 16, 2019, 12:42 PM IST

ಖರ್ಗೆ ಸಿಎಂ ಆಗಬೇಕಿತ್ತು ಎನ್ನುವ ಎಚ್ ಡಿಕೆ ಹೇಳಿಕೆ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ. ಎಚ್ ಡಿಕೆ ಹೇಳಿದ್ದು ಸರಿಯಾಗಿದೆ. ಮಲ್ಲಿಕಾರ್ಜುನ ಖರ್ಗೆಯವರಿಗೆ ಸಿಎಂ ಸ್ಥಾನ ಮಾತ್ರವಲ್ಲ ಅದಕ್ಕಿಂತಲೂ ಉನ್ನತ ಸ್ಥಾನದ ಅರ್ಹತೆಯಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಲ್ಲಿ ಸಿಎಂ ಸ್ಥಾನದ ಅರ್ಹತೆಯ ಬಹಳ ಜನರಿದ್ದಾರೆ. ಅವರಲ್ಲಿ ರೇವಣ್ಣ ಕೂಡಾ ಒಬ್ಬರು. ಎಲ್ಲದಕ್ಕೂ ಕಾಲ ಕೂಡಿ ಬರಬೇಕು ಎಂದು ಟ್ವೀಟ್ ಮಾಡಿರುವುದು ಸಾಕಷ್ಟು ಕುತೂಹಲಗಳಿಗೆ ಕಾರಣವಾಗಿದೆ.