ಧರ್ಮಸ್ಥಳದ ಪುದುವೆಟ್ಟು ಗ್ರಾಮದಲ್ಲಿ ಪ್ರವಾಹ; ಮುಳುಗಡೆ ಭೀತಿಯಲ್ಲಿ ಜನ!

Aug 9, 2019, 7:37 PM IST

ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಮಹಾ ಮಳೆಯಿಂದ ದಕ್ಷಿಣ ಕನ್ನಡದ ಜನ ಆತಂಕದಲ್ಲಿ ದಿನದೂಡುತ್ತಿದ್ದಾರೆ. ಧರ್ಮಸ್ಥಳ ಸಮೀಪದ ಪುದುವೆಟ್ಟು ಗ್ರಾಮ ಇದೀಗ ಮುಳುಗಡೆ ಭೀತಿ ಎದುರಿಸುತ್ತಿದೆ. ಅಣಿಯೂರು ಹೊಳೆ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಮನೆಗಳಿಗೆ ನೀರು ನುಗ್ಗಿದ ಪರಿಣಾಮ, ಸಾಕು ಪ್ರಾಣಿ, ಜಾನುವಾರುಗಳನ್ನು ರಕ್ಷಣೆ ಮಾಡಿದ ಸ್ಥಳೀಯರು ಚಿಂತಾಕ್ರಾಂತರಾಗಿದ್ದಾರೆ.