ವಿಶ್ವನಾಥ್‌ ವಿರುದ್ಧ ತಿರುಗಿಬಿದ್ದ JDS ಕಾರ್ಯಕರ್ತರು; ರಾಜ್ಯಾಧ್ಯಕ್ಷರಿಗೇ ಎಚ್ಚರಿಕೆ!

Jun 2, 2019, 5:40 PM IST

ಜೆಡಿಎಸ್‌ ನಾಯಕರ ನಡುವೆ ಜಗಳ ತಾರಕಕ್ಕೇರಿದೆ. ಸ್ಥಳೀಯ ಸಂಸ್ಥೆ ಚುನಾವಣೆ ವಿಚಾರವಾಗಿ ಸಚಿವ ಸಾ.ರಾ. ಮಹೇಶ್ ವಿರುದ್ಧ ವಾಗ್ದಾಳಿ ನಡೆಸಿದ್ದ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ವಿರುದ್ಧ ಈಗ ಕಾರ್ಯಕರ್ತರೇ ತಿರುಗಿ ಬಿದ್ದಿದ್ದಾರೆ. ವಿಶ್ವನಾಥ್ ಮಾಡಿರುವ ಆರೋಪದಲ್ಲಿ ಹುರುಳಿಲ್ಲ ಎಂದಿರುವ ಕಾರ್ಯಕರ್ತರು, ಕಾಂಗ್ರೆಸ್ ಅಭ್ಯರ್ಥಿಗೆ ಜೆಡಿಎಸ್ ಟಿಕೆಟ್ ಯಾಕೆ ಕೊಡಬೇಕು ಎಂದು ಪ್ರಶ್ನಿಸಿದ್ದಾರೆ.