ED ಕರೆಯಮೇರೆಗೆ ಲಕ್ಷ್ಮೀ ಹೆಬ್ಬಾಳ್ಕರ್ ದೆಹಲಿ  ವಿಮಾನಯಾನ

Sep 18, 2019, 8:34 PM IST

ಬೆಂಗಳೂರು, (ಸೆ.18): ಡಿಕೆ ಶಿವಕುಮಾರ್ ಅವರಿಗೆ ಸೇರಿದ್ದ ದೆಹಲಿ ನಿವಾಸದಲ್ಲಿ 8.5 ಕೋಟಿ ರೂ. ಹಣ ಸಿಕ್ಕ ಪ್ರಕರಣದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಇಡಿ ಸಮನ್ಸ್ ನೀಡಿದ್ದು ನಾಳೆ[ಸೆ.19] ನವದೆಹಲಿಯ ಇಡಿ ಕಚೇರಿಗೆ ಹಾಜರಾಗಲಿದ್ದಾರೆ. ‘ಯಾವ ವಿಚಾರಕ್ಕೆ ಕರೆದಿದ್ದಾರೆ ಎನ್ನುವುದು ಗೊತ್ತಿಲ್ಲ.. ಅವರು ಕರೆದಿದ್ದಾರೆ ಏನು ಕೇಳುತ್ತಾರೆ ಎನ್ನುವುದನ್ನು ನೋಡಬೇಕು. ಡಿಕೆ ಶಿವಕುಮಾರ್ ರಾಜಕೀಯವಾಗಿ ನನ್ನನ್ನು ಬೆಳೆಸಿದ್ದಾರೆ ವಿನಾ ಯಾವುದೇ ಹಣಕಾಸು ವ್ಯವಹಾರ ಇಲ್ಲ’ ಎಂದು ಸುವರ್ಣ ನ್ಯೂಸ್ ನೊಂದಿಗೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ನಾಳೆ ಅಂದರೆ ಸೆ. 19 ರಂದು ಒಂದು ಕಡೆ ಡಿಕೆಶಿ ಅವರ ಜಾಮೀನು ಅರ್ಜಿ ವಿಚಾರಣೆ ನಡೆದರೆ ಇನ್ನೊಂದು ಕಡೆ ಲಕ್ಷ್ಮೀ ಹೆಬ್ಬಾಳ್ಕರ್ ವಿಚಾರಣೆ ನಡೆಯಲಿದೆ. ಇಡಿ ಡಿಕೆಶಿ ಪುತ್ರಿ ಐಶ್ವರ್ಯಾ ಅವರ ವಿಚಾರಣೆಯನ್ನು ನಡೆಸಿತ್ತು.

ಡಿಕೆ ಶಿವಕುಮಾರ್ ಇಡಿ ಪ್ರಕರಣ: ಆರಂಭದಿಂದ ಇಲ್ಲಿವರೆಗೆ