Jul 28, 2019, 9:45 AM IST
ಸರ್ಕಾರ ಪತನದ ಬಳಿಕ ಬಿಜೆಪಿ ಬೆಂಬಲಿಸಲು ಜೆಡಿಎಸ್ ಮುಂದಾಗಿತ್ತು. ಕುಮಾರಸ್ವಾಮಿ ಕೇಂದ್ರ ಬಿಜೆಪಿ ನಾಯಕರನ್ನು ಸಂಪರ್ಕ ಮಾಡಿದ್ದರು ಎನ್ನಲಾಗಿದೆ. ಆದರೆ ಕುಮಾರಸ್ವಾಮಿ ಪ್ರಸ್ತಾಪವನ್ನು ಬಿಜೆಪಿ ನಾಯಕರು ತಳ್ಳಿ ಹಾಕಿದ್ದಾರೆ. ಇತ್ತ ಬಿಜೆಪಿ ಬೆಂಬಲ ನೀಡಲು ಮುಂದಾಗಿದ್ದನ್ನೂ ಎಚ್ ಡಿಕೆ ತಳ್ಳಿ ಹಾಕಿದ್ದಾರೆ. ಬಿಜೆಪಿ ವಿರುದ್ಧ ತಮ್ಮ ಹೋರಾಟ ನಿರಂತರ ಎಂದು ಎಚ್ ಡಿಕೆ ಸ್ಪಷ್ಟನೆ ನೀಡಿದ್ದಾರೆ.