ರಮೇಶ್’ಗೆ ಕೈಕೊಟ್ರಾ ಶ್ರೀಮಂತ್..?

Apr 25, 2019, 11:30 PM IST

ರಾಜ್ಯರಾಜಕಾರಣದಲ್ಲಿ ರಮೇಶ್ ಜಾರಕಿಹೊಳಿ ನಡೆ ತೀವ್ರ ಕುತೂಹಲ ಕೆರಳಿಸಿದೆ. ಇದರ ಬೆನ್ನಲ್ಲೇ ಕಾಗವಾಡ ಶಾಸಕ ಶ್ರೀಮಂತ್ ಪಾಟೀಲ್ ಕೂಡಾ ಕಾಂಗ್ರೆಸ್’ಗೆ ಗುಡ್’ಬೈ ಹೇಳಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿದ್ದವು. ಆದರೆ ಡಿಕೆ ಶಿವಕುಮಾರ್, ಡಿಸಿಎಂ ಪರಮೇಶ್ವರ್ ಸಮ್ಮುಖದಲ್ಲಿ ಪಾಟೀಲ್ ಅವರನ್ನು ಸಮಾಧಾನ ಪಡಿಸಲಾಗಿದೆ ಎನ್ನಲಾಗುತ್ತಿದ್ದು, ಇದೀಗ ರಮೇಶ್ ಜಾರಕಿಹೊಳಿಗೆ ಶ್ರೀಮಂತ್ ಪಾಟೀಲ್ ಕೈಕೊಟ್ರಾ ಎನ್ನುವ ಅನುಮಾನ ದಟ್ಟವಾಗತೊಡಗಿದೆ.