ಪುಸ್ತಕ ಹರಿದ ಸುನ್ನಿ ವಕ್ಫ್ ಬೋರ್ಡ್ ವಕೀಲ: ಸಿಜೆಐ ಎಚ್ಚರಿಕೆಯಿಂದ ಒದ್ದಾಡಿದರು ವಿಲವಿಲ!

ಪುಸ್ತಕ ಹರಿದ ಸುನ್ನಿ ವಕ್ಫ್ ಬೋರ್ಡ್ ವಕೀಲ: ಸಿಜೆಐ ಎಚ್ಚರಿಕೆಯಿಂದ ಒದ್ದಾಡಿದರು ವಿಲವಿಲ!

Published : Oct 16, 2019, 04:00 PM IST

ಅಯೋಧ್ಯೆ ಕೊನೆ ದಿನದ ವಿಚಾರಣೆ ವೇಳೆ ಹೈಡ್ರಾಮಾ| ಸಿಜೆಐ ಮುಂದೆಯೇ ಪುಸ್ತಕ ಹರಿದು ಹಾಕಿದ ಸುನ್ನಿ ವಕ್ಫ್ ಬೋರ್ಡ್ ಪರ ವಕೀಲ| ಹಿಂದೂ ಮಹಾಸಭಾ ಪರ ವಕೀಲ ಪ್ರದರ್ಶಿಸಿದ ಪುಸ್ತಕ| ಮಾಜಿ ಐಪಿಎಸ್ ಅಧಿಕಾರಿ  ಕಿಶೋರ್ ಬರೆದಿರುವ ಅಯೋಧ್ಯೆ ರಿವಿಸಿಟೆಡ್ ಪುಸ್ತಕ ಹರಿದ ರಾಜೀವ್ ಧವನ್| ರಾಜೀವ್ ಧವನ್ ವರ್ತನೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಸಿಜೆಐ ರಂಜನ್ ಗೊಗೋಯ್| ನ್ಯಾಯಪೀಠದಿಂದ ಎದ್ದು ಹೊರನಡೆಯುವುದಾಗಿ ಎಚ್ಚರಿಕೆ ನೀಡಿದ ಗೊಗೊಯ್| ತಮ್ಮ ವರ್ತನೆಗೆ ನ್ಯಾಯಾಲಯದ ಕ್ಷಮೆ ಕೇಳಿದ ರಾಜೀವ್ ಧವನ್|

ಅಯೋಧ್ಯೆಯ ರಾಮಜನ್ಮಭೂಮಿ -ಬಾಬ್ರಿಮಸೀದಿ ಭೂ ವಿವಾದಕ್ಕೆ ಸಂಬಂಧಿಸಿದಂತೆ, ಸುಪ್ರೀಂಕೋರ್ಟ್'ನಲ್ಲಿ ನಡೆಯುತ್ತಿರುವ ವಿಚಾರಣೆಯ ಅಂತಿಮ ದಿನ ಹಲವು ನಾಟಕೀಯ ಸನ್ನಿವೇಶಗಳಿಗೆ ಸಾಕ್ಷಿಯಾಗಿದೆ.

ತಮ್ಮ ವಾದಗಳಿಗೆ ಬೆಂಬಲವಾಗಿ ಹಿಂದೂ ಮಹಾ ಸಭಾ ವಕೀಲರು  ನ್ಯಾಯಾಲಯದಲ್ಲಿ  ಪ್ರದರ್ಶಿಸಿದ ಪುಸ್ತಕ  ಹಾಗೂ ನಕ್ಷೆ  ತೀವ್ರ ವಿವಾದ ಸೃಷ್ಟಿಸಿದ್ದು, ಈ ಪುಸ್ತಕವನ್ನು ಮುಸ್ಲಿಂ ಸಂಘಟನೆಗಳ ಪರ ವಕೀಲ ರಾಜೀವ್ ಧವನ್ ಹರಿದು ಹಾಕಿದ್ದಾರೆ.

ಮಾಜಿ ಐಪಿಎಸ್ ಅಧಿಕಾರಿ  ಕಿಶೋರ್ ಬರೆದಿರುವ ರಿವಿಸಿಟೆಡ್ ಎಂಬ ಹೆಸರಿನ  ಪುಸ್ತಕವನ್ನು ಹಿಂದೂ ಮಹಾಸಭಾ ವಕೀಲ ವಿಕಾಸ್ ಸಿಂಗ್ ನ್ಯಾಯಾಲಯದ ಮುಂದೆ  ಹಾಜರುಪಡಿಸಿದರು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಸುನ್ನಿ ವಕ್ಫ್ ಮಂಡಳಿಯ ವಕೀಲ ರಾಜೀವ್ ಧವನ್, ಪುಸ್ತಕ ಹಾಗೂ ನಕ್ಷೆಯನ್ನು ಹರಿದುಹಾಕಿದರು.

ರಾಜೀವ್ ಧವನ್ ವರ್ತನೆಗೆ ತೀವ್ರ ಆಕ್ಷೇಪದ ವ್ಯಕ್ತಪಡಿಸಿದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್, ಈ ರೀತಿಯ ವರ್ತನೆ ಒಪ್ಪಲು ಸುತಾರಾಂ ಸಾಧ್ಯವಿಲ್ಲ ಎಂದು ಖಡ್ ಎಚ್ಚರಿಕೆ ನೀಡಿದರು. ಅಲ್ಲದೇ ತಾವು ನ್ಯಾಯಪೀಠದಿಂದ ಎದ್ದು ಹೊರನಡೆಯುವುದಾಗಿ ಬೆದರಿಕೆಯೊಡ್ಡಿದರು.

ಸಿಜೆಐ ಎಚ್ಚರಿಕೆಗೆ ಬೆದರಿದ ರಾಜೀವ್ ಧವನ್, ತಮ್ಮ ವರ್ತನೆಗೆ ಕ್ಷಮೆ ಕೋರಿದರಲ್ಲದೇ ವಿಚಾರಣಾ ಪ್ರಕ್ರಿಯೆ ಮೇಲೆ ತಮಗೆ ಸಂಪೂರ್ಣ ನಂಬಿಕೆಯಿದೆ ಎಂದು ಮನವರಿಕೆ ಮಾಡಿಕೊಟ್ಟರು.

ಪ್ರಕರಣದ ಪ್ರತಿದಿನದ ವಿಚಾರಣೆ ಇಂದು ಸಂಜೆ 5 ಗಂಟೆಗೆ ಅಂತ್ಯವಾಗಲಿದ್ದು, ಇದೇ ನವೆಂಬರ್ 4 ಅಥವಾ 5 ರಂದು ತೀರ್ಪು ಹೊರಬೀಳಲಿದೆ. ಅಯೋಧ್ಯೆಯ ರಾಮ ಜನ್ಮಭೂಮಿ-ಬಾಬ್ರಿ ಮಸೀದಿ ಭೂವಿವಾದ ಪ್ರಕರಣದ ಶೀಘ್ರ ಇತ್ಯರ್ಥದ ಆಶಾವಾದ ಮೂಡಿಸಿದೆ.

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?